AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್​ ಸಂಬರಗಿ ಎದುರು ತಪ್ಪು ಒಪ್ಪಿಕೊಂಡ ನಿಧಿ; ದ್ವೇಷ ಕಳೆದುಕೊಂಡು ಒಂದಾದರು!

ಈಗ ನಿಧಿ-ಪ್ರಶಾಂತ್​ ಒಂದಾಗಿದ್ದಾರೆ. ನಿಧಿ ತಮ್ಮ ಕಷ್ಟವನ್ನೆಲ್ಲ ಹೇಳಿಕೊಂಡಿದ್ದಾರೆ. ಟಾಸ್ಕ್​ ವೇಳೆ ಮಾತನಾಡುವಾಗ ಎಲ್ಲರೂ ರೇಗಾಡುತ್ತಿದ್ದರು.

ಪ್ರಶಾಂತ್​ ಸಂಬರಗಿ ಎದುರು ತಪ್ಪು ಒಪ್ಪಿಕೊಂಡ ನಿಧಿ; ದ್ವೇಷ ಕಳೆದುಕೊಂಡು ಒಂದಾದರು!
ನಿಧಿ ಸುಬ್ಬಯ್ಯ - ಪ್ರಶಾಂತ್​ ಸಂಬರಗಿ
Follow us
ರಾಜೇಶ್ ದುಗ್ಗುಮನೆ
| Updated By: ಆಯೇಷಾ ಬಾನು

Updated on: Apr 02, 2021 | 6:57 AM

ಬಿಗ್​ ಬಾಸ್​ ಮನೆಯಲ್ಲಿ ನಿಧಿ ಸುಬ್ಬಯ ಮತ್ತು ಪ್ರಶಾಂತ್​ ಸಂಬರಗಿ ಹಾವು ಮುಂಗುಸಿ ರೀತಿ ಇದ್ದರು. ಪ್ರಶಾಂತ್​ ಅವರನ್ನು ಕಂಡರೆ ಸದಾ ಉರಿದು ಬೀಳುತ್ತಿದ್ದರು ನಿಧಿ. ಪ್ರಶಾಂತ್​ ಸರಿ ಇಲ್ಲ. ಅವರು ಹಾಗೆ ಮಾಡ್ತಾರೆ, ಹೀಗೆ ಮಾಡ್ತಾರೆ ಎಂದು ಆರೋಪಿಸುತ್ತಿದ್ದರು. ಆದರೆ, ಈಗ ಎಲ್ಲವನ್ನೂ ಮರೆತು ಇಬ್ಬರೂ ಒಂದಾಗಿದ್ದಾರೆ. ಅಲ್ಲದೆ, ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾರೆ. ನಾಲ್ಕನೇ ವಾರದ ಟಾಸ್ಕ್​ ವೇಳೆ ನಿಧಿ ಸುಬ್ಬಯ್ಯ ಹಾಗೂ ಪ್ರಶಾಂತ್​ ನಡುವೆ ಕಿತ್ತಾಟ ನಡೆದಿತ್ತು. ಎಲ್ಲರೂ ತಮ್ಮನ್ನು ದಡ್ಡನಂತೆ ನೋಡುತ್ತಿದ್ದಾರೆ ಎಂದು ಭಾಸವಾಗುತ್ತಿದೆ ಅಂತ ನಿಧಿ ಎಂದುಕೊಂಡರು. ಅಷ್ಟೇ ಅಲ್ಲ, ಚಿಕ್ಕ ವಿಚಾರವನ್ನು ದೊಡ್ಡದು ಮಾಡಿ ಹೇಳುವ ಅಗತ್ಯವಾದರೂ ಏನಿತ್ತು ಎನ್ನುವ ಪ್ರಶ್ನೆಯನ್ನು ತಮಗೆ ತಾವೇ ಕೇಳಿಕೊಂಡು ಒಮ್ಮೆಲೇ ಸಿಟ್ಟಾದರು. ನಾನು ದಡ್ಡಿಯಲ್ಲ. ಅಧಿಕಪ್ರಸಂಗ ಮಾಡುವುದು ನಂಗೆ ಇಷ್ಟ ಆಗುವುದೇ ಇಲ್ಲ. ಇಷ್ಟು ಸಣ್ಣ ಸಣ್ಣ ವಿಚಾರ ಹೇಳಿ ನಂಗೆ ಇರಿಟೇಟ್​ ಮಾಡಬೇಡಿ ಎಂದು ಬುದ್ಧಿ ಹೇಳಿದ್ರು.

ಆದರೆ, ಈಗ ಇಬ್ಬರೂ ಒಂದಾಗಿದ್ದಾರೆ. ನಿಧಿ ತಮ್ಮ ಕಷ್ಟವನ್ನೆಲ್ಲ ಹೇಳಿಕೊಂಡಿದ್ದಾರೆ. ಟಾಸ್ಕ್​ ವೇಳೆ ಮಾತನಾಡುವಾಗ ಎಲ್ಲರೂ ರೇಗಾಡುತ್ತಿದ್ದರು. ಆಗ ನಾವು ಅವರ ಮಾತಿಗೆ ತಿರುಗಿ ಹೇಳಬಾರದು. ಹಾಗೆ ಮಾಡಿದರೆ, ಉರಿಯುವ ಬೆಂಕಿಗೆ ತುಪ್ಪ ಸುರಿದಂತೆ ಆಗುತ್ತದೆ ಎಂದರು. ಈ ವೇಳೆ ಪ್ರಶಾಂತ್​ ಕೂಡ ನಿಧಿಗೆ ಒಂದಷ್ಟು ಟಿಪ್ಸ್​ ನೀಡಿದರು. ಇದನ್ನು ನಿಧಿ ಸ್ವೀಕಾರ ಮಾಡಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಇಂದು ಗೆಳೆಯರಾಗಿದ್ದವರು ನಾಳೆ ದ್ವೇಷಿಗಳಾಗುತ್ತಾರೆ. ಇಂದು ದ್ವೇಷಿಗಳಾಗಿದ್ದವರು ನಾಳೆ ಒಂದಾಗಿ ಬಿಡುತ್ತಾರೆ. ಇದಕ್ಕೆ ಇಂದು ನಡೆದ ಈ ಘಟನೆ ಹೊಸ ಸಾಕ್ಷಿ. ಮುಂದಿನ ದಿನಗಳಲ್ಲಿ ಇವರ ಗೆಳೆತನ ಹೇಗೆ ಸಾಗಲಿದೆ ಎಂಬುದನ್ನು ನೋಡಬೇಕಿದೆ.

ಇದನ್ನೂ ಓದಿ: ದಿವ್ಯಾ ಉರುಡುಗ ಸೆಳೆತದಲ್ಲಿ ಬಿಗ್​ ಬಾಸ್​ ಮನೆಗೆ ಬಂದ ಉದ್ದೇಶವನ್ನೇ ಮರೆತರಾ ಅರವಿಂದ್?

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್