AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪಾಗಿದೆ ಕ್ಷಮಿಸಿ; ಸುದೀಪ್​ ನೇರ ಪ್ರಶ್ನೆಗೆ ಹಣ್ಣುಗಾಯಿ ನೀರುಗಾಯಿ ಆದ ಸಂಬರಗಿ

ಆರನೇ ವಾರ ಪ್ರಶಾಂತ್​ ಸಂಬರಗಿ ಅವರನ್ನು ಕೆಲವರು ಮಾವ ಎಂದು ಕರೆದಿದ್ದರು. ಇದಕ್ಕೆ ಪ್ರಶಾಂತ್​ ಸಿಟ್ಟಾಗಿದ್ದರು. ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆ ಆಗಿದೆ.

ತಪ್ಪಾಗಿದೆ ಕ್ಷಮಿಸಿ; ಸುದೀಪ್​ ನೇರ ಪ್ರಶ್ನೆಗೆ ಹಣ್ಣುಗಾಯಿ ನೀರುಗಾಯಿ ಆದ ಸಂಬರಗಿ
ಪ್ರಶಾಂತ್​ ಸಂಬರಗಿ
ರಾಜೇಶ್ ದುಗ್ಗುಮನೆ
| Edited By: |

Updated on: Apr 11, 2021 | 7:25 AM

Share

ಬಿಗ್​ ಬಾಸ್​ ಆರನೇ ವಾರ ಸಾಕಷ್ಟು ರಾಜಕೀಯಗಳಿಗೆ ಸಾಕ್ಷಿ ಆಯಿತು. ಮನೆಯಲ್ಲಿ ಗುಂಪಿದೆ ಎಂದು ಹೇಳಿಕೊಂಡು ಅದನ್ನು ಒಡೆಯುತ್ತೇನೆ ಎಂದು ಪ್ರಶಾಂತ್ ಸಂಬರಗಿ ಹೇಳಿದರು. ಈ ಸಂದರ್ಭದಲ್ಲಿ ಮನೆಯವರಿಗೂ ಹಾಗೂ ಪ್ರಶಾಂತ್​ಗೂ ಜಟಾಪಟಿ ಏರ್ಪಟ್ಟಿತ್ತು. ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆಗೆ ಬಂದಿತ್ತು. ಸುದೀಪ್​ ಕೇಳಿದ ನೇರ ಪ್ರಶ್ನೆಗಳಿಗೆ ಪ್ರಶಾಂತ್​ ಸಂಬರಗಿ ತಬ್ಬಿಬ್ಬಾದರು. ದೊಡ್ಮನೆಯಲ್ಲಿರುವ ಕೆಲವರು ಮೊದಲಿನಿಂದಲೂ ಪ್ರಶಾಂತ್​ ಸಂಬರಗಿ ಅವರನ್ನು ಮಾವ ಎಂದು ಕರೆಯುತ್ತಿದ್ದಾರೆ. ಆದರೆ ಆರನೇ ವಾರ ಇದೇ ವಿಚಾರಕ್ಕೆ ಪ್ರಶಾಂತ್​ ಸಿಟ್ಟಾಗಿದ್ದರು. ನನ್ನನ್ನು ಹಾಗೆ ಕರೆಯಬೇಡಿ ಎಂದು ಮನೆಯವರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದರು. ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆ ಆಗಿದೆ. ಮಾವ ಅನ್ನೋದು ಕೆಟ್ಟ ಶಬ್ದವೇ ಎಂದು ಸುದೀಪ್​ ಪ್ರಶ್ನೆ ಮಾಡಿದ್ದಾರೆ.

ಇದಕ್ಕೆ ಉತ್ತರಿಸಿದ ಪ್ರಶಾಂತ್​, ಖಂಡಿತವಾಗಿಯೂ ಅಲ್ಲ. ಆದರೆ, ಎದುರು ಮಾವ ಎಂದು ಹೇಳಿ ಅವರು ಹಿಂಬದಿಯಿಂದ ಬೇರೆ ರೀತಿಯಲ್ಲಿ ಮಾತನಾಡುತ್ತಾರೆ. ಈ ಶಬ್ದಕ್ಕೆ ಡಬಲ್​ ಮೀನಿಂಗ್​ ಇದೆ ಎಂದು ಮನೆಯಲ್ಲಿ ಕೆಲವರು ಹೇಳಿದರು. ಹಾಗೆ ಕರೆಯಬೇಡಿ ಎಂದು ನಾನು ಮನೆಯ ಎಲ್ಲರಿಗೂ ಮನವಿ ಮಾಡಿಕೊಂಡೆ. ಆವತ್ತಿನಿಂದ ನನ್ನದೇ ಹೆಸರಲ್ಲಿ ಕರೆಸಿಕೊಳ್ಳೋ ನಿರ್ಧಾರಕ್ಕೆ ಬಂದೆ​ ಎಂದರು.

ಪ್ರಶಾಂತ್​ ನಿನ್ನ ಬಗ್ಗೆ ಹೊರಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದು ಚಕ್ರವರ್ತಿ ಚಂದ್ರಚೂಡ. ಇದನ್ನು ಬಾಯಿ ಬಿಡಿಸೋಕೆ ಸುದೀಪ್​ ತುಂಬಾನೇ ಪ್ರಯತ್ನಿಸಿದರು. ಆದರೆ, ಪ್ರಶಾಂತ್​ ಎಲ್ಲಿಯೂ ಅದನ್ನು ಹೇಳಿಕೊಂಡಿಲ್ಲ.

ಇನ್ನು, ಬಿಗ್​ ಬಾಸ್​ ಮನೆಯ ಸ್ವಿಮ್ಮಿಂಗ್​ ಫೂಲ್​ನಲ್ಲಿ ಆದ ಜಗಳದ ವಿಚಾರವನ್ನು ಸುದೀಪ್​ ಪ್ರಸ್ತಾಪ ಮಾಡಿದರು. ಹೀಗೆ ಜಗಳವಾಡಿದ್ದು ಉದ್ದೇಶಪೂರ್ವಕವಲ್ಲ ಎಂದು ಪ್ರಶಾಂತ್​ ಹೇಳಿದರು. ಆದರೆ, ಪ್ರಶಾಂತ್​ ಸಿಡಿದೇಳೋಕೆ ಅವರು ಮೊದಲೇ ಸಿದ್ಧತೆ ಮಾಡಿಕೊಂಡಿದ್ದರು ಎಂದು ದಿವ್ಯಾ ಉರುಡುಗ, ಅರವಿಂದ್ ಹೇಳಿದ್ದಾರೆ. ನಂತರ ಪ್ರಶಾಂತ್​ ಎದುರು ಸುದೀಪ್​ ಸಾಲು ಸಾಲು ಪ್ರಶ್ನೆ ಇಟ್ಟಿದ್ದಾರೆ. ಇದಕ್ಕೆ ಪ್ರಶಾಂತ್​ ಸಂಬರಗಿ ತಬ್ಬಿಬ್ಬಾಗಿ ಕ್ಷಮೆಯಾಚಿಸಿದ್ದಾರೆ.

ಇದನ್ನೂ ಓದಿ: ಪ್ರಶಾಂತ್​ ಸಂಬರಗಿ ವೀಕ್​ನೆಸ್​ ಮನೆಯವರಿಗೆ ಗೊತ್ತಾಗಿಹೋಯ್ತು; ಇನ್ನು ಎಲ್ಲವೂ ಸುಲಭ

ಬಿಗ್​ ಬಾಸ್​ ಮನೆಯ ದೊಡ್ಡ ಹಗರಣವನ್ನು ಭೇದಿಸಿದ ಪ್ರಶಾಂತ್​ ಸಂಬರಗಿ

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?