AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪಾಗಿದೆ ಕ್ಷಮಿಸಿ; ಸುದೀಪ್​ ನೇರ ಪ್ರಶ್ನೆಗೆ ಹಣ್ಣುಗಾಯಿ ನೀರುಗಾಯಿ ಆದ ಸಂಬರಗಿ

ಆರನೇ ವಾರ ಪ್ರಶಾಂತ್​ ಸಂಬರಗಿ ಅವರನ್ನು ಕೆಲವರು ಮಾವ ಎಂದು ಕರೆದಿದ್ದರು. ಇದಕ್ಕೆ ಪ್ರಶಾಂತ್​ ಸಿಟ್ಟಾಗಿದ್ದರು. ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆ ಆಗಿದೆ.

ತಪ್ಪಾಗಿದೆ ಕ್ಷಮಿಸಿ; ಸುದೀಪ್​ ನೇರ ಪ್ರಶ್ನೆಗೆ ಹಣ್ಣುಗಾಯಿ ನೀರುಗಾಯಿ ಆದ ಸಂಬರಗಿ
ಪ್ರಶಾಂತ್​ ಸಂಬರಗಿ
ರಾಜೇಶ್ ದುಗ್ಗುಮನೆ
| Edited By: |

Updated on: Apr 11, 2021 | 7:25 AM

Share

ಬಿಗ್​ ಬಾಸ್​ ಆರನೇ ವಾರ ಸಾಕಷ್ಟು ರಾಜಕೀಯಗಳಿಗೆ ಸಾಕ್ಷಿ ಆಯಿತು. ಮನೆಯಲ್ಲಿ ಗುಂಪಿದೆ ಎಂದು ಹೇಳಿಕೊಂಡು ಅದನ್ನು ಒಡೆಯುತ್ತೇನೆ ಎಂದು ಪ್ರಶಾಂತ್ ಸಂಬರಗಿ ಹೇಳಿದರು. ಈ ಸಂದರ್ಭದಲ್ಲಿ ಮನೆಯವರಿಗೂ ಹಾಗೂ ಪ್ರಶಾಂತ್​ಗೂ ಜಟಾಪಟಿ ಏರ್ಪಟ್ಟಿತ್ತು. ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆಗೆ ಬಂದಿತ್ತು. ಸುದೀಪ್​ ಕೇಳಿದ ನೇರ ಪ್ರಶ್ನೆಗಳಿಗೆ ಪ್ರಶಾಂತ್​ ಸಂಬರಗಿ ತಬ್ಬಿಬ್ಬಾದರು. ದೊಡ್ಮನೆಯಲ್ಲಿರುವ ಕೆಲವರು ಮೊದಲಿನಿಂದಲೂ ಪ್ರಶಾಂತ್​ ಸಂಬರಗಿ ಅವರನ್ನು ಮಾವ ಎಂದು ಕರೆಯುತ್ತಿದ್ದಾರೆ. ಆದರೆ ಆರನೇ ವಾರ ಇದೇ ವಿಚಾರಕ್ಕೆ ಪ್ರಶಾಂತ್​ ಸಿಟ್ಟಾಗಿದ್ದರು. ನನ್ನನ್ನು ಹಾಗೆ ಕರೆಯಬೇಡಿ ಎಂದು ಮನೆಯವರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದರು. ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆ ಆಗಿದೆ. ಮಾವ ಅನ್ನೋದು ಕೆಟ್ಟ ಶಬ್ದವೇ ಎಂದು ಸುದೀಪ್​ ಪ್ರಶ್ನೆ ಮಾಡಿದ್ದಾರೆ.

ಇದಕ್ಕೆ ಉತ್ತರಿಸಿದ ಪ್ರಶಾಂತ್​, ಖಂಡಿತವಾಗಿಯೂ ಅಲ್ಲ. ಆದರೆ, ಎದುರು ಮಾವ ಎಂದು ಹೇಳಿ ಅವರು ಹಿಂಬದಿಯಿಂದ ಬೇರೆ ರೀತಿಯಲ್ಲಿ ಮಾತನಾಡುತ್ತಾರೆ. ಈ ಶಬ್ದಕ್ಕೆ ಡಬಲ್​ ಮೀನಿಂಗ್​ ಇದೆ ಎಂದು ಮನೆಯಲ್ಲಿ ಕೆಲವರು ಹೇಳಿದರು. ಹಾಗೆ ಕರೆಯಬೇಡಿ ಎಂದು ನಾನು ಮನೆಯ ಎಲ್ಲರಿಗೂ ಮನವಿ ಮಾಡಿಕೊಂಡೆ. ಆವತ್ತಿನಿಂದ ನನ್ನದೇ ಹೆಸರಲ್ಲಿ ಕರೆಸಿಕೊಳ್ಳೋ ನಿರ್ಧಾರಕ್ಕೆ ಬಂದೆ​ ಎಂದರು.

ಪ್ರಶಾಂತ್​ ನಿನ್ನ ಬಗ್ಗೆ ಹೊರಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದು ಚಕ್ರವರ್ತಿ ಚಂದ್ರಚೂಡ. ಇದನ್ನು ಬಾಯಿ ಬಿಡಿಸೋಕೆ ಸುದೀಪ್​ ತುಂಬಾನೇ ಪ್ರಯತ್ನಿಸಿದರು. ಆದರೆ, ಪ್ರಶಾಂತ್​ ಎಲ್ಲಿಯೂ ಅದನ್ನು ಹೇಳಿಕೊಂಡಿಲ್ಲ.

ಇನ್ನು, ಬಿಗ್​ ಬಾಸ್​ ಮನೆಯ ಸ್ವಿಮ್ಮಿಂಗ್​ ಫೂಲ್​ನಲ್ಲಿ ಆದ ಜಗಳದ ವಿಚಾರವನ್ನು ಸುದೀಪ್​ ಪ್ರಸ್ತಾಪ ಮಾಡಿದರು. ಹೀಗೆ ಜಗಳವಾಡಿದ್ದು ಉದ್ದೇಶಪೂರ್ವಕವಲ್ಲ ಎಂದು ಪ್ರಶಾಂತ್​ ಹೇಳಿದರು. ಆದರೆ, ಪ್ರಶಾಂತ್​ ಸಿಡಿದೇಳೋಕೆ ಅವರು ಮೊದಲೇ ಸಿದ್ಧತೆ ಮಾಡಿಕೊಂಡಿದ್ದರು ಎಂದು ದಿವ್ಯಾ ಉರುಡುಗ, ಅರವಿಂದ್ ಹೇಳಿದ್ದಾರೆ. ನಂತರ ಪ್ರಶಾಂತ್​ ಎದುರು ಸುದೀಪ್​ ಸಾಲು ಸಾಲು ಪ್ರಶ್ನೆ ಇಟ್ಟಿದ್ದಾರೆ. ಇದಕ್ಕೆ ಪ್ರಶಾಂತ್​ ಸಂಬರಗಿ ತಬ್ಬಿಬ್ಬಾಗಿ ಕ್ಷಮೆಯಾಚಿಸಿದ್ದಾರೆ.

ಇದನ್ನೂ ಓದಿ: ಪ್ರಶಾಂತ್​ ಸಂಬರಗಿ ವೀಕ್​ನೆಸ್​ ಮನೆಯವರಿಗೆ ಗೊತ್ತಾಗಿಹೋಯ್ತು; ಇನ್ನು ಎಲ್ಲವೂ ಸುಲಭ

ಬಿಗ್​ ಬಾಸ್​ ಮನೆಯ ದೊಡ್ಡ ಹಗರಣವನ್ನು ಭೇದಿಸಿದ ಪ್ರಶಾಂತ್​ ಸಂಬರಗಿ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ