Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪಾಗಿದೆ ಕ್ಷಮಿಸಿ; ಸುದೀಪ್​ ನೇರ ಪ್ರಶ್ನೆಗೆ ಹಣ್ಣುಗಾಯಿ ನೀರುಗಾಯಿ ಆದ ಸಂಬರಗಿ

ಆರನೇ ವಾರ ಪ್ರಶಾಂತ್​ ಸಂಬರಗಿ ಅವರನ್ನು ಕೆಲವರು ಮಾವ ಎಂದು ಕರೆದಿದ್ದರು. ಇದಕ್ಕೆ ಪ್ರಶಾಂತ್​ ಸಿಟ್ಟಾಗಿದ್ದರು. ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆ ಆಗಿದೆ.

ತಪ್ಪಾಗಿದೆ ಕ್ಷಮಿಸಿ; ಸುದೀಪ್​ ನೇರ ಪ್ರಶ್ನೆಗೆ ಹಣ್ಣುಗಾಯಿ ನೀರುಗಾಯಿ ಆದ ಸಂಬರಗಿ
ಪ್ರಶಾಂತ್​ ಸಂಬರಗಿ
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Apr 11, 2021 | 7:25 AM

ಬಿಗ್​ ಬಾಸ್​ ಆರನೇ ವಾರ ಸಾಕಷ್ಟು ರಾಜಕೀಯಗಳಿಗೆ ಸಾಕ್ಷಿ ಆಯಿತು. ಮನೆಯಲ್ಲಿ ಗುಂಪಿದೆ ಎಂದು ಹೇಳಿಕೊಂಡು ಅದನ್ನು ಒಡೆಯುತ್ತೇನೆ ಎಂದು ಪ್ರಶಾಂತ್ ಸಂಬರಗಿ ಹೇಳಿದರು. ಈ ಸಂದರ್ಭದಲ್ಲಿ ಮನೆಯವರಿಗೂ ಹಾಗೂ ಪ್ರಶಾಂತ್​ಗೂ ಜಟಾಪಟಿ ಏರ್ಪಟ್ಟಿತ್ತು. ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆಗೆ ಬಂದಿತ್ತು. ಸುದೀಪ್​ ಕೇಳಿದ ನೇರ ಪ್ರಶ್ನೆಗಳಿಗೆ ಪ್ರಶಾಂತ್​ ಸಂಬರಗಿ ತಬ್ಬಿಬ್ಬಾದರು. ದೊಡ್ಮನೆಯಲ್ಲಿರುವ ಕೆಲವರು ಮೊದಲಿನಿಂದಲೂ ಪ್ರಶಾಂತ್​ ಸಂಬರಗಿ ಅವರನ್ನು ಮಾವ ಎಂದು ಕರೆಯುತ್ತಿದ್ದಾರೆ. ಆದರೆ ಆರನೇ ವಾರ ಇದೇ ವಿಚಾರಕ್ಕೆ ಪ್ರಶಾಂತ್​ ಸಿಟ್ಟಾಗಿದ್ದರು. ನನ್ನನ್ನು ಹಾಗೆ ಕರೆಯಬೇಡಿ ಎಂದು ಮನೆಯವರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದರು. ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆ ಆಗಿದೆ. ಮಾವ ಅನ್ನೋದು ಕೆಟ್ಟ ಶಬ್ದವೇ ಎಂದು ಸುದೀಪ್​ ಪ್ರಶ್ನೆ ಮಾಡಿದ್ದಾರೆ.

ಇದಕ್ಕೆ ಉತ್ತರಿಸಿದ ಪ್ರಶಾಂತ್​, ಖಂಡಿತವಾಗಿಯೂ ಅಲ್ಲ. ಆದರೆ, ಎದುರು ಮಾವ ಎಂದು ಹೇಳಿ ಅವರು ಹಿಂಬದಿಯಿಂದ ಬೇರೆ ರೀತಿಯಲ್ಲಿ ಮಾತನಾಡುತ್ತಾರೆ. ಈ ಶಬ್ದಕ್ಕೆ ಡಬಲ್​ ಮೀನಿಂಗ್​ ಇದೆ ಎಂದು ಮನೆಯಲ್ಲಿ ಕೆಲವರು ಹೇಳಿದರು. ಹಾಗೆ ಕರೆಯಬೇಡಿ ಎಂದು ನಾನು ಮನೆಯ ಎಲ್ಲರಿಗೂ ಮನವಿ ಮಾಡಿಕೊಂಡೆ. ಆವತ್ತಿನಿಂದ ನನ್ನದೇ ಹೆಸರಲ್ಲಿ ಕರೆಸಿಕೊಳ್ಳೋ ನಿರ್ಧಾರಕ್ಕೆ ಬಂದೆ​ ಎಂದರು.

ಪ್ರಶಾಂತ್​ ನಿನ್ನ ಬಗ್ಗೆ ಹೊರಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದು ಚಕ್ರವರ್ತಿ ಚಂದ್ರಚೂಡ. ಇದನ್ನು ಬಾಯಿ ಬಿಡಿಸೋಕೆ ಸುದೀಪ್​ ತುಂಬಾನೇ ಪ್ರಯತ್ನಿಸಿದರು. ಆದರೆ, ಪ್ರಶಾಂತ್​ ಎಲ್ಲಿಯೂ ಅದನ್ನು ಹೇಳಿಕೊಂಡಿಲ್ಲ.

ಇನ್ನು, ಬಿಗ್​ ಬಾಸ್​ ಮನೆಯ ಸ್ವಿಮ್ಮಿಂಗ್​ ಫೂಲ್​ನಲ್ಲಿ ಆದ ಜಗಳದ ವಿಚಾರವನ್ನು ಸುದೀಪ್​ ಪ್ರಸ್ತಾಪ ಮಾಡಿದರು. ಹೀಗೆ ಜಗಳವಾಡಿದ್ದು ಉದ್ದೇಶಪೂರ್ವಕವಲ್ಲ ಎಂದು ಪ್ರಶಾಂತ್​ ಹೇಳಿದರು. ಆದರೆ, ಪ್ರಶಾಂತ್​ ಸಿಡಿದೇಳೋಕೆ ಅವರು ಮೊದಲೇ ಸಿದ್ಧತೆ ಮಾಡಿಕೊಂಡಿದ್ದರು ಎಂದು ದಿವ್ಯಾ ಉರುಡುಗ, ಅರವಿಂದ್ ಹೇಳಿದ್ದಾರೆ. ನಂತರ ಪ್ರಶಾಂತ್​ ಎದುರು ಸುದೀಪ್​ ಸಾಲು ಸಾಲು ಪ್ರಶ್ನೆ ಇಟ್ಟಿದ್ದಾರೆ. ಇದಕ್ಕೆ ಪ್ರಶಾಂತ್​ ಸಂಬರಗಿ ತಬ್ಬಿಬ್ಬಾಗಿ ಕ್ಷಮೆಯಾಚಿಸಿದ್ದಾರೆ.

ಇದನ್ನೂ ಓದಿ: ಪ್ರಶಾಂತ್​ ಸಂಬರಗಿ ವೀಕ್​ನೆಸ್​ ಮನೆಯವರಿಗೆ ಗೊತ್ತಾಗಿಹೋಯ್ತು; ಇನ್ನು ಎಲ್ಲವೂ ಸುಲಭ

ಬಿಗ್​ ಬಾಸ್​ ಮನೆಯ ದೊಡ್ಡ ಹಗರಣವನ್ನು ಭೇದಿಸಿದ ಪ್ರಶಾಂತ್​ ಸಂಬರಗಿ

ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
Live: ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್
Live: ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್