AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪಾಗಿದೆ ಕ್ಷಮಿಸಿ; ಸುದೀಪ್​ ನೇರ ಪ್ರಶ್ನೆಗೆ ಹಣ್ಣುಗಾಯಿ ನೀರುಗಾಯಿ ಆದ ಸಂಬರಗಿ

ಆರನೇ ವಾರ ಪ್ರಶಾಂತ್​ ಸಂಬರಗಿ ಅವರನ್ನು ಕೆಲವರು ಮಾವ ಎಂದು ಕರೆದಿದ್ದರು. ಇದಕ್ಕೆ ಪ್ರಶಾಂತ್​ ಸಿಟ್ಟಾಗಿದ್ದರು. ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆ ಆಗಿದೆ.

ತಪ್ಪಾಗಿದೆ ಕ್ಷಮಿಸಿ; ಸುದೀಪ್​ ನೇರ ಪ್ರಶ್ನೆಗೆ ಹಣ್ಣುಗಾಯಿ ನೀರುಗಾಯಿ ಆದ ಸಂಬರಗಿ
ಪ್ರಶಾಂತ್​ ಸಂಬರಗಿ
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Apr 11, 2021 | 7:25 AM

Share

ಬಿಗ್​ ಬಾಸ್​ ಆರನೇ ವಾರ ಸಾಕಷ್ಟು ರಾಜಕೀಯಗಳಿಗೆ ಸಾಕ್ಷಿ ಆಯಿತು. ಮನೆಯಲ್ಲಿ ಗುಂಪಿದೆ ಎಂದು ಹೇಳಿಕೊಂಡು ಅದನ್ನು ಒಡೆಯುತ್ತೇನೆ ಎಂದು ಪ್ರಶಾಂತ್ ಸಂಬರಗಿ ಹೇಳಿದರು. ಈ ಸಂದರ್ಭದಲ್ಲಿ ಮನೆಯವರಿಗೂ ಹಾಗೂ ಪ್ರಶಾಂತ್​ಗೂ ಜಟಾಪಟಿ ಏರ್ಪಟ್ಟಿತ್ತು. ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆಗೆ ಬಂದಿತ್ತು. ಸುದೀಪ್​ ಕೇಳಿದ ನೇರ ಪ್ರಶ್ನೆಗಳಿಗೆ ಪ್ರಶಾಂತ್​ ಸಂಬರಗಿ ತಬ್ಬಿಬ್ಬಾದರು. ದೊಡ್ಮನೆಯಲ್ಲಿರುವ ಕೆಲವರು ಮೊದಲಿನಿಂದಲೂ ಪ್ರಶಾಂತ್​ ಸಂಬರಗಿ ಅವರನ್ನು ಮಾವ ಎಂದು ಕರೆಯುತ್ತಿದ್ದಾರೆ. ಆದರೆ ಆರನೇ ವಾರ ಇದೇ ವಿಚಾರಕ್ಕೆ ಪ್ರಶಾಂತ್​ ಸಿಟ್ಟಾಗಿದ್ದರು. ನನ್ನನ್ನು ಹಾಗೆ ಕರೆಯಬೇಡಿ ಎಂದು ಮನೆಯವರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದರು. ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆ ಆಗಿದೆ. ಮಾವ ಅನ್ನೋದು ಕೆಟ್ಟ ಶಬ್ದವೇ ಎಂದು ಸುದೀಪ್​ ಪ್ರಶ್ನೆ ಮಾಡಿದ್ದಾರೆ.

ಇದಕ್ಕೆ ಉತ್ತರಿಸಿದ ಪ್ರಶಾಂತ್​, ಖಂಡಿತವಾಗಿಯೂ ಅಲ್ಲ. ಆದರೆ, ಎದುರು ಮಾವ ಎಂದು ಹೇಳಿ ಅವರು ಹಿಂಬದಿಯಿಂದ ಬೇರೆ ರೀತಿಯಲ್ಲಿ ಮಾತನಾಡುತ್ತಾರೆ. ಈ ಶಬ್ದಕ್ಕೆ ಡಬಲ್​ ಮೀನಿಂಗ್​ ಇದೆ ಎಂದು ಮನೆಯಲ್ಲಿ ಕೆಲವರು ಹೇಳಿದರು. ಹಾಗೆ ಕರೆಯಬೇಡಿ ಎಂದು ನಾನು ಮನೆಯ ಎಲ್ಲರಿಗೂ ಮನವಿ ಮಾಡಿಕೊಂಡೆ. ಆವತ್ತಿನಿಂದ ನನ್ನದೇ ಹೆಸರಲ್ಲಿ ಕರೆಸಿಕೊಳ್ಳೋ ನಿರ್ಧಾರಕ್ಕೆ ಬಂದೆ​ ಎಂದರು.

ಪ್ರಶಾಂತ್​ ನಿನ್ನ ಬಗ್ಗೆ ಹೊರಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದು ಚಕ್ರವರ್ತಿ ಚಂದ್ರಚೂಡ. ಇದನ್ನು ಬಾಯಿ ಬಿಡಿಸೋಕೆ ಸುದೀಪ್​ ತುಂಬಾನೇ ಪ್ರಯತ್ನಿಸಿದರು. ಆದರೆ, ಪ್ರಶಾಂತ್​ ಎಲ್ಲಿಯೂ ಅದನ್ನು ಹೇಳಿಕೊಂಡಿಲ್ಲ.

ಇನ್ನು, ಬಿಗ್​ ಬಾಸ್​ ಮನೆಯ ಸ್ವಿಮ್ಮಿಂಗ್​ ಫೂಲ್​ನಲ್ಲಿ ಆದ ಜಗಳದ ವಿಚಾರವನ್ನು ಸುದೀಪ್​ ಪ್ರಸ್ತಾಪ ಮಾಡಿದರು. ಹೀಗೆ ಜಗಳವಾಡಿದ್ದು ಉದ್ದೇಶಪೂರ್ವಕವಲ್ಲ ಎಂದು ಪ್ರಶಾಂತ್​ ಹೇಳಿದರು. ಆದರೆ, ಪ್ರಶಾಂತ್​ ಸಿಡಿದೇಳೋಕೆ ಅವರು ಮೊದಲೇ ಸಿದ್ಧತೆ ಮಾಡಿಕೊಂಡಿದ್ದರು ಎಂದು ದಿವ್ಯಾ ಉರುಡುಗ, ಅರವಿಂದ್ ಹೇಳಿದ್ದಾರೆ. ನಂತರ ಪ್ರಶಾಂತ್​ ಎದುರು ಸುದೀಪ್​ ಸಾಲು ಸಾಲು ಪ್ರಶ್ನೆ ಇಟ್ಟಿದ್ದಾರೆ. ಇದಕ್ಕೆ ಪ್ರಶಾಂತ್​ ಸಂಬರಗಿ ತಬ್ಬಿಬ್ಬಾಗಿ ಕ್ಷಮೆಯಾಚಿಸಿದ್ದಾರೆ.

ಇದನ್ನೂ ಓದಿ: ಪ್ರಶಾಂತ್​ ಸಂಬರಗಿ ವೀಕ್​ನೆಸ್​ ಮನೆಯವರಿಗೆ ಗೊತ್ತಾಗಿಹೋಯ್ತು; ಇನ್ನು ಎಲ್ಲವೂ ಸುಲಭ

ಬಿಗ್​ ಬಾಸ್​ ಮನೆಯ ದೊಡ್ಡ ಹಗರಣವನ್ನು ಭೇದಿಸಿದ ಪ್ರಶಾಂತ್​ ಸಂಬರಗಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ