AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಬರಗಿ ನಡೆಸಿದ ದೊಡ್ಡ ಕುತಂತ್ರ ವಿಫಲ​; ಮನೆಯವರ ಎದುರು ಹೀರೋ ಆದ ರಘು!

ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್​ ಒಟ್ಟಾಗಿ ಇರುವುದನ್ನು ನೋಡಿದ ಅನೇಕರು ಮನೆಯಲ್ಲಿ ಹೊಟ್ಟೆ ಉರಿದುಕೊಳ್ಳುತ್ತಿದ್ದಾರೆ. ಈ ಸಾಲಿನಲ್ಲಿ ಮೊದಲಿರೋದು ಪ್ರಶಾಂತ್ ಸಂಬರಗಿ.

ಸಂಬರಗಿ ನಡೆಸಿದ ದೊಡ್ಡ ಕುತಂತ್ರ ವಿಫಲ​; ಮನೆಯವರ ಎದುರು ಹೀರೋ ಆದ ರಘು!
ರಘು ಗೌಡ-ಪ್ರಶಾಂತ್ ಸಂಬರಗಿ
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Apr 10, 2021 | 4:23 PM

ಪ್ರಶಾಂತ್​ ಸಂಬರಗಿ ಹಾಗೂ ಚಕ್ರವರ್ತಿ ಚಂದ್ರಚೂಡ್​ ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಕುತಂತ್ರಗಳನ್ನು ಹೆಣೆಯುತ್ತಿದ್ದಾರೆ. ಸ್ಟ್ರಾಂಗ್​ ಸ್ಪರ್ಧಿಗಳನ್ನು ಸೋಲಿಸೋಕೆ ಒಂದಾದಮೇಲೆ ಒಂದರಂತೆ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಆದರೆ, ಈ ರೀತಿ ಕುತಂತ್ರಗಳ ಬಗ್ಗೆ ಮನೆಯವರಿಗೆ ವಾಸನೆ ಸಿಕ್ಕಿದೆ. ಹೀಗಾಗಿ, ಎಲ್ಲಾ ಸ್ಪರ್ಧಿಗಳೂ ಎಚ್ಚೆತ್ತುಕೊಂಡಿದ್ದಾರೆ. ರಘು ಕೂಡ ಈ ಬಗ್ಗೆ ಸಾಕಷ್ಟು ಎಚ್ಚರಿಕೆ ವಹಿಸಿದ್ದಾರೆ. ಇದರಿಂದಲೇ, ಪ್ರಶಾಂತ್​ ಸಂಬರಗಿ ಮಾಡಿದ ದೊಡ್ಡ ಕುತಂತ್ರವೊಂದು ವಿಫಲವಾಗಿದೆ. ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್​ ಒಟ್ಟಾಗಿ ಇರುವುದನ್ನು ನೋಡಿದ ಅನೇಕರು ಮನೆಯಲ್ಲಿ ಹೊಟ್ಟೆ ಉರಿದುಕೊಳ್ಳುತ್ತಿದ್ದಾರೆ. ಈ ಸಾಲಿನಲ್ಲಿ ಮೊದಲಿರೋದು ಪ್ರಶಾಂತ್ ಸಂಬರಗಿ. ಹೀಗಾಗಿ, ದಿವ್ಯಾ ಅವರನ್ನು ಮನೆಯಿಂದ ಹೊರಕ್ಕೆ ಕಳುಹಿಸಿ, ಮಂಜು ಅವರನ್ನು ವೀಕ್​ ಮಾಡಬೇಕು ಎನ್ನುವುದು ಸಂಬರಗಿ ಆಲೋಚನೆ. ಹೀಗಾಗಿ, ಈ ವಾರದ ಕಳಪೆ ಪ್ರದರ್ಶನವನ್ನು ದಿವ್ಯಾಗೆ ನೀಡಬೇಕು ಎಂದು ತಂತ್ರ ರೂಪಿಸಿದ್ದರು. ಸದಾ ಅವರ ಹಿಂದೆ ತಿರುಗುತ್ತಿರುವ ಶಮಂತ್​ ಅವರನ್ನು ಇದಕ್ಕಾಗಿ ಮುಂದೆ ಬಿಟ್ಟಿದ್ದರು.

ಶಮಂತ್ ಮೊದಲು ವಿಶ್ವ ಬಳಿ ಹೋಗಿ ದಿವ್ಯಾ ಅವರನ್ನು ಕಳಪೆ ಮಾಡುವ ಬಗ್ಗೆ ಮಾತುಕತೆ ನಡೆಸಿದ್ದರು. ಇದಾದ ನಂತರ ಶಮಂತ್​ ತೆರಳಿದ್ದು ರಘು ಗೌಡ ಬಳಿ. ದಿವ್ಯಾ ನನಗೆ ಅವಮಾನ ಮಾಡಿದ್ದಾಳೆ. ಅವಳ ವಿರುದ್ಧ ದ್ವೇಷ ತೀರಿಸಿಕೊಳ್ಳಲೇಬೇಕು. ಹೀಗಾಗಿ, ನಾನು ಈ ವಾರ ಅವಳಿಗೆ ಕಳಪೆ ಪಟ್ಟ ಕಟ್ಟುತ್ತಿದ್ದೇನೆ. ನೀನು ಕೂಡ ಅವಳಿಗೆ ಕಳಪೆ ಪಟ್ಟ ಕಟ್ಟು ಎಂದು ಮನವಿ ಮಾಡಿದ್ದಾರೆ. ಇದಕ್ಕೆ ರಘು ನಗುತ್ತಲೇ ಓಕೆ ಎಂದಿದ್ದಾರೆ.

ರಘು ಅವರ ಮನವೊಲಿಸಿದ್ದೇನೆ ಎಂದು ಶಮಂತ್​ ಖುಷಿಯಾಗಿದ್ದರು. ಆದರೆ, ಅಚ್ಚರಿ ಎಂಬಂತೆ ರಘು ಹೆಸರು ತೆಗೆದುಕೊಂಡಿದ್ದು ಚಕ್ರವರ್ತಿ ಚಂದ್ರಚೂಡ್​ ಅವರದ್ದು. ದಿವ್ಯಾಗೆ ಒಂದೆರಡು ವೋಟ್​ ಹೆಚ್ಚು ಬಿದ್ದಿದ್ದರೂ ಅವರು ಕಳಪೆ ಪಟ್ಟ ಕಟ್ಟಿಕೊಂಡು ಜೈಲಿಗೆ ಹೋಗುತ್ತಿದ್ದರು. ಇದನ್ನು ರಘು ಗೌಡ ತಡೆದಿದ್ದಾರೆ. ಈ ಮೂಲಕ ಪ್ರಶಾಂತ್​ ತಂತ್ರವನ್ನು ರಘು ವಿಫಲ ಮಾಡಿದ್ದಾರೆ.

ಇದನ್ನೂ ಓದಿ: ಸಂಬರಗಿ ಎದುರು ಹಾಕ್ಕೊಂಡ ಮಂಜುಗೆ ಬಿಗ್​ಬಾಸ್​ ಮನೆಯಲ್ಲಿ ಇನ್ಮೇಲೆ ಕಷ್ಟಕಾಲ!

ಬಿಗ್​ ಬಾಸ್​ ಮನೆಯ ದೊಡ್ಡ ಹಗರಣವನ್ನು ಭೇದಿಸಿದ ಪ್ರಶಾಂತ್​ ಸಂಬರಗಿ

ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್