AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಬರಗಿ ನಡೆಸಿದ ದೊಡ್ಡ ಕುತಂತ್ರ ವಿಫಲ​; ಮನೆಯವರ ಎದುರು ಹೀರೋ ಆದ ರಘು!

ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್​ ಒಟ್ಟಾಗಿ ಇರುವುದನ್ನು ನೋಡಿದ ಅನೇಕರು ಮನೆಯಲ್ಲಿ ಹೊಟ್ಟೆ ಉರಿದುಕೊಳ್ಳುತ್ತಿದ್ದಾರೆ. ಈ ಸಾಲಿನಲ್ಲಿ ಮೊದಲಿರೋದು ಪ್ರಶಾಂತ್ ಸಂಬರಗಿ.

ಸಂಬರಗಿ ನಡೆಸಿದ ದೊಡ್ಡ ಕುತಂತ್ರ ವಿಫಲ​; ಮನೆಯವರ ಎದುರು ಹೀರೋ ಆದ ರಘು!
ರಘು ಗೌಡ-ಪ್ರಶಾಂತ್ ಸಂಬರಗಿ
ರಾಜೇಶ್ ದುಗ್ಗುಮನೆ
| Edited By: |

Updated on: Apr 10, 2021 | 4:23 PM

Share

ಪ್ರಶಾಂತ್​ ಸಂಬರಗಿ ಹಾಗೂ ಚಕ್ರವರ್ತಿ ಚಂದ್ರಚೂಡ್​ ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಕುತಂತ್ರಗಳನ್ನು ಹೆಣೆಯುತ್ತಿದ್ದಾರೆ. ಸ್ಟ್ರಾಂಗ್​ ಸ್ಪರ್ಧಿಗಳನ್ನು ಸೋಲಿಸೋಕೆ ಒಂದಾದಮೇಲೆ ಒಂದರಂತೆ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಆದರೆ, ಈ ರೀತಿ ಕುತಂತ್ರಗಳ ಬಗ್ಗೆ ಮನೆಯವರಿಗೆ ವಾಸನೆ ಸಿಕ್ಕಿದೆ. ಹೀಗಾಗಿ, ಎಲ್ಲಾ ಸ್ಪರ್ಧಿಗಳೂ ಎಚ್ಚೆತ್ತುಕೊಂಡಿದ್ದಾರೆ. ರಘು ಕೂಡ ಈ ಬಗ್ಗೆ ಸಾಕಷ್ಟು ಎಚ್ಚರಿಕೆ ವಹಿಸಿದ್ದಾರೆ. ಇದರಿಂದಲೇ, ಪ್ರಶಾಂತ್​ ಸಂಬರಗಿ ಮಾಡಿದ ದೊಡ್ಡ ಕುತಂತ್ರವೊಂದು ವಿಫಲವಾಗಿದೆ. ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್​ ಒಟ್ಟಾಗಿ ಇರುವುದನ್ನು ನೋಡಿದ ಅನೇಕರು ಮನೆಯಲ್ಲಿ ಹೊಟ್ಟೆ ಉರಿದುಕೊಳ್ಳುತ್ತಿದ್ದಾರೆ. ಈ ಸಾಲಿನಲ್ಲಿ ಮೊದಲಿರೋದು ಪ್ರಶಾಂತ್ ಸಂಬರಗಿ. ಹೀಗಾಗಿ, ದಿವ್ಯಾ ಅವರನ್ನು ಮನೆಯಿಂದ ಹೊರಕ್ಕೆ ಕಳುಹಿಸಿ, ಮಂಜು ಅವರನ್ನು ವೀಕ್​ ಮಾಡಬೇಕು ಎನ್ನುವುದು ಸಂಬರಗಿ ಆಲೋಚನೆ. ಹೀಗಾಗಿ, ಈ ವಾರದ ಕಳಪೆ ಪ್ರದರ್ಶನವನ್ನು ದಿವ್ಯಾಗೆ ನೀಡಬೇಕು ಎಂದು ತಂತ್ರ ರೂಪಿಸಿದ್ದರು. ಸದಾ ಅವರ ಹಿಂದೆ ತಿರುಗುತ್ತಿರುವ ಶಮಂತ್​ ಅವರನ್ನು ಇದಕ್ಕಾಗಿ ಮುಂದೆ ಬಿಟ್ಟಿದ್ದರು.

ಶಮಂತ್ ಮೊದಲು ವಿಶ್ವ ಬಳಿ ಹೋಗಿ ದಿವ್ಯಾ ಅವರನ್ನು ಕಳಪೆ ಮಾಡುವ ಬಗ್ಗೆ ಮಾತುಕತೆ ನಡೆಸಿದ್ದರು. ಇದಾದ ನಂತರ ಶಮಂತ್​ ತೆರಳಿದ್ದು ರಘು ಗೌಡ ಬಳಿ. ದಿವ್ಯಾ ನನಗೆ ಅವಮಾನ ಮಾಡಿದ್ದಾಳೆ. ಅವಳ ವಿರುದ್ಧ ದ್ವೇಷ ತೀರಿಸಿಕೊಳ್ಳಲೇಬೇಕು. ಹೀಗಾಗಿ, ನಾನು ಈ ವಾರ ಅವಳಿಗೆ ಕಳಪೆ ಪಟ್ಟ ಕಟ್ಟುತ್ತಿದ್ದೇನೆ. ನೀನು ಕೂಡ ಅವಳಿಗೆ ಕಳಪೆ ಪಟ್ಟ ಕಟ್ಟು ಎಂದು ಮನವಿ ಮಾಡಿದ್ದಾರೆ. ಇದಕ್ಕೆ ರಘು ನಗುತ್ತಲೇ ಓಕೆ ಎಂದಿದ್ದಾರೆ.

ರಘು ಅವರ ಮನವೊಲಿಸಿದ್ದೇನೆ ಎಂದು ಶಮಂತ್​ ಖುಷಿಯಾಗಿದ್ದರು. ಆದರೆ, ಅಚ್ಚರಿ ಎಂಬಂತೆ ರಘು ಹೆಸರು ತೆಗೆದುಕೊಂಡಿದ್ದು ಚಕ್ರವರ್ತಿ ಚಂದ್ರಚೂಡ್​ ಅವರದ್ದು. ದಿವ್ಯಾಗೆ ಒಂದೆರಡು ವೋಟ್​ ಹೆಚ್ಚು ಬಿದ್ದಿದ್ದರೂ ಅವರು ಕಳಪೆ ಪಟ್ಟ ಕಟ್ಟಿಕೊಂಡು ಜೈಲಿಗೆ ಹೋಗುತ್ತಿದ್ದರು. ಇದನ್ನು ರಘು ಗೌಡ ತಡೆದಿದ್ದಾರೆ. ಈ ಮೂಲಕ ಪ್ರಶಾಂತ್​ ತಂತ್ರವನ್ನು ರಘು ವಿಫಲ ಮಾಡಿದ್ದಾರೆ.

ಇದನ್ನೂ ಓದಿ: ಸಂಬರಗಿ ಎದುರು ಹಾಕ್ಕೊಂಡ ಮಂಜುಗೆ ಬಿಗ್​ಬಾಸ್​ ಮನೆಯಲ್ಲಿ ಇನ್ಮೇಲೆ ಕಷ್ಟಕಾಲ!

ಬಿಗ್​ ಬಾಸ್​ ಮನೆಯ ದೊಡ್ಡ ಹಗರಣವನ್ನು ಭೇದಿಸಿದ ಪ್ರಶಾಂತ್​ ಸಂಬರಗಿ

Follow Us
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್