AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಬರಗಿ ನಡೆಸಿದ ದೊಡ್ಡ ಕುತಂತ್ರ ವಿಫಲ​; ಮನೆಯವರ ಎದುರು ಹೀರೋ ಆದ ರಘು!

ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್​ ಒಟ್ಟಾಗಿ ಇರುವುದನ್ನು ನೋಡಿದ ಅನೇಕರು ಮನೆಯಲ್ಲಿ ಹೊಟ್ಟೆ ಉರಿದುಕೊಳ್ಳುತ್ತಿದ್ದಾರೆ. ಈ ಸಾಲಿನಲ್ಲಿ ಮೊದಲಿರೋದು ಪ್ರಶಾಂತ್ ಸಂಬರಗಿ.

ಸಂಬರಗಿ ನಡೆಸಿದ ದೊಡ್ಡ ಕುತಂತ್ರ ವಿಫಲ​; ಮನೆಯವರ ಎದುರು ಹೀರೋ ಆದ ರಘು!
ರಘು ಗೌಡ-ಪ್ರಶಾಂತ್ ಸಂಬರಗಿ
ರಾಜೇಶ್ ದುಗ್ಗುಮನೆ
| Edited By: |

Updated on: Apr 10, 2021 | 4:23 PM

Share

ಪ್ರಶಾಂತ್​ ಸಂಬರಗಿ ಹಾಗೂ ಚಕ್ರವರ್ತಿ ಚಂದ್ರಚೂಡ್​ ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಕುತಂತ್ರಗಳನ್ನು ಹೆಣೆಯುತ್ತಿದ್ದಾರೆ. ಸ್ಟ್ರಾಂಗ್​ ಸ್ಪರ್ಧಿಗಳನ್ನು ಸೋಲಿಸೋಕೆ ಒಂದಾದಮೇಲೆ ಒಂದರಂತೆ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಆದರೆ, ಈ ರೀತಿ ಕುತಂತ್ರಗಳ ಬಗ್ಗೆ ಮನೆಯವರಿಗೆ ವಾಸನೆ ಸಿಕ್ಕಿದೆ. ಹೀಗಾಗಿ, ಎಲ್ಲಾ ಸ್ಪರ್ಧಿಗಳೂ ಎಚ್ಚೆತ್ತುಕೊಂಡಿದ್ದಾರೆ. ರಘು ಕೂಡ ಈ ಬಗ್ಗೆ ಸಾಕಷ್ಟು ಎಚ್ಚರಿಕೆ ವಹಿಸಿದ್ದಾರೆ. ಇದರಿಂದಲೇ, ಪ್ರಶಾಂತ್​ ಸಂಬರಗಿ ಮಾಡಿದ ದೊಡ್ಡ ಕುತಂತ್ರವೊಂದು ವಿಫಲವಾಗಿದೆ. ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್​ ಒಟ್ಟಾಗಿ ಇರುವುದನ್ನು ನೋಡಿದ ಅನೇಕರು ಮನೆಯಲ್ಲಿ ಹೊಟ್ಟೆ ಉರಿದುಕೊಳ್ಳುತ್ತಿದ್ದಾರೆ. ಈ ಸಾಲಿನಲ್ಲಿ ಮೊದಲಿರೋದು ಪ್ರಶಾಂತ್ ಸಂಬರಗಿ. ಹೀಗಾಗಿ, ದಿವ್ಯಾ ಅವರನ್ನು ಮನೆಯಿಂದ ಹೊರಕ್ಕೆ ಕಳುಹಿಸಿ, ಮಂಜು ಅವರನ್ನು ವೀಕ್​ ಮಾಡಬೇಕು ಎನ್ನುವುದು ಸಂಬರಗಿ ಆಲೋಚನೆ. ಹೀಗಾಗಿ, ಈ ವಾರದ ಕಳಪೆ ಪ್ರದರ್ಶನವನ್ನು ದಿವ್ಯಾಗೆ ನೀಡಬೇಕು ಎಂದು ತಂತ್ರ ರೂಪಿಸಿದ್ದರು. ಸದಾ ಅವರ ಹಿಂದೆ ತಿರುಗುತ್ತಿರುವ ಶಮಂತ್​ ಅವರನ್ನು ಇದಕ್ಕಾಗಿ ಮುಂದೆ ಬಿಟ್ಟಿದ್ದರು.

ಶಮಂತ್ ಮೊದಲು ವಿಶ್ವ ಬಳಿ ಹೋಗಿ ದಿವ್ಯಾ ಅವರನ್ನು ಕಳಪೆ ಮಾಡುವ ಬಗ್ಗೆ ಮಾತುಕತೆ ನಡೆಸಿದ್ದರು. ಇದಾದ ನಂತರ ಶಮಂತ್​ ತೆರಳಿದ್ದು ರಘು ಗೌಡ ಬಳಿ. ದಿವ್ಯಾ ನನಗೆ ಅವಮಾನ ಮಾಡಿದ್ದಾಳೆ. ಅವಳ ವಿರುದ್ಧ ದ್ವೇಷ ತೀರಿಸಿಕೊಳ್ಳಲೇಬೇಕು. ಹೀಗಾಗಿ, ನಾನು ಈ ವಾರ ಅವಳಿಗೆ ಕಳಪೆ ಪಟ್ಟ ಕಟ್ಟುತ್ತಿದ್ದೇನೆ. ನೀನು ಕೂಡ ಅವಳಿಗೆ ಕಳಪೆ ಪಟ್ಟ ಕಟ್ಟು ಎಂದು ಮನವಿ ಮಾಡಿದ್ದಾರೆ. ಇದಕ್ಕೆ ರಘು ನಗುತ್ತಲೇ ಓಕೆ ಎಂದಿದ್ದಾರೆ.

ರಘು ಅವರ ಮನವೊಲಿಸಿದ್ದೇನೆ ಎಂದು ಶಮಂತ್​ ಖುಷಿಯಾಗಿದ್ದರು. ಆದರೆ, ಅಚ್ಚರಿ ಎಂಬಂತೆ ರಘು ಹೆಸರು ತೆಗೆದುಕೊಂಡಿದ್ದು ಚಕ್ರವರ್ತಿ ಚಂದ್ರಚೂಡ್​ ಅವರದ್ದು. ದಿವ್ಯಾಗೆ ಒಂದೆರಡು ವೋಟ್​ ಹೆಚ್ಚು ಬಿದ್ದಿದ್ದರೂ ಅವರು ಕಳಪೆ ಪಟ್ಟ ಕಟ್ಟಿಕೊಂಡು ಜೈಲಿಗೆ ಹೋಗುತ್ತಿದ್ದರು. ಇದನ್ನು ರಘು ಗೌಡ ತಡೆದಿದ್ದಾರೆ. ಈ ಮೂಲಕ ಪ್ರಶಾಂತ್​ ತಂತ್ರವನ್ನು ರಘು ವಿಫಲ ಮಾಡಿದ್ದಾರೆ.

ಇದನ್ನೂ ಓದಿ: ಸಂಬರಗಿ ಎದುರು ಹಾಕ್ಕೊಂಡ ಮಂಜುಗೆ ಬಿಗ್​ಬಾಸ್​ ಮನೆಯಲ್ಲಿ ಇನ್ಮೇಲೆ ಕಷ್ಟಕಾಲ!

ಬಿಗ್​ ಬಾಸ್​ ಮನೆಯ ದೊಡ್ಡ ಹಗರಣವನ್ನು ಭೇದಿಸಿದ ಪ್ರಶಾಂತ್​ ಸಂಬರಗಿ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ