AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜು ಎಲ್ಲೆಲ್ಲೋ ಮುಟ್ಟುತ್ತಾರೆ ಎಂದು ನಿಧಿ ದೂರಿದಾಗ ಮರುಗಿದ್ದ ಪ್ರಶಾಂತ್​ ಸಂಬರಗಿ ಆಮೇಲೆ ಉಲ್ಟಾ ಹೊಡೆದು ಬಿಟ್ಟರು!

ಮಂಜು ಮತ್ತು ಶಮಂತ್​ ಉದ್ದೇಶಪೂರ್ವಕವಾಗಿ ಪರಚುತ್ತಿದ್ದಾರೆ. ಬೇಕೆಂತಲೇ ಅವರು ಎಲ್ಲೆಲ್ಲೋ ಮುಟ್ಟುತ್ತಿದ್ದಾರೆ ಎನ್ನುವ ಆರೋಪವನ್ನು ನಿಧಿ ಮಾಡಿದ್ದರು. ಇದನ್ನು ಕೇಳಿ ಪ್ರಶಾಂತ್​ ಸಂಬರಗಿ ನೊಂದುಕೊಂಡರು. ರಾತ್ರಿ ವೇಳೆಗೆ ಪ್ರಶಾಂತ್​ ಉಲ್ಟಾ ಹೊಡೆದುಬಿಟ್ಟರು.

ಮಂಜು ಎಲ್ಲೆಲ್ಲೋ ಮುಟ್ಟುತ್ತಾರೆ ಎಂದು ನಿಧಿ ದೂರಿದಾಗ ಮರುಗಿದ್ದ ಪ್ರಶಾಂತ್​ ಸಂಬರಗಿ ಆಮೇಲೆ ಉಲ್ಟಾ ಹೊಡೆದು ಬಿಟ್ಟರು!
ಪ್ರಶಾಂತ್​-ನಿಧಿ
ರಾಜೇಶ್ ದುಗ್ಗುಮನೆ
|

Updated on: Mar 11, 2021 | 11:47 AM

Share

ಬಿಗ್​ ಬಾಸ್​ ಮನೆಯಲ್ಲಿ ಏನೆಲ್ಲ ಆಗುತ್ತದೆ, ಯಾರು ಹೇಗೆ ನಡೆದುಕೊಳ್ಳುತ್ತಾರೆ ಎಂದು ಊಹೀಸೋದು ತುಂಬಾನೇ ಕಷ್ಟ. ಈಗ ಕನ್ನಡ ಬಿಗ್​ ಬಾಸ್​ ಮನೆಯಲ್ಲೂ ಅದೇ ರೀತಿ ಆಗುತ್ತಿದೆ. ಎಲ್ಲಾ ಸದಸ್ಯರು ತಮ್ಮ ಅಸಲಿ ಮುಖವನ್ನು ಅನಾವರಣ ಮಾಡುತ್ತಿದೆ. ಅದೇ ಮನೆ ಒಳಗೆ ತೆರಳಿರುವ ಪ್ರಶಾಂತ್​ ಸಂಭರಗಿ ಡಬಲ್​ ಗೇಮ್​ ಆಡುತ್ತಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಇದಕ್ಕೆ ನಿನ್ನೆ ನಡೆದ ಘಟನೆ ಹೊಸ ಉದಾಹರಣೆ. ಮಂಜು ಮತ್ತು ಶಮಂತ್​ ಉದ್ದೇಶಪೂರ್ವಕವಾಗಿ ಪರಚುತ್ತಿದ್ದಾರೆ. ಬೇಕೆಂತಲೇ ಅವರು ಎಲ್ಲೆಲ್ಲೋ ಮುಟ್ಟುತ್ತಿದ್ದಾರೆ. ನಮ್ಮ ತಂಡದವರು ಯಾರೊಬ್ಬರೂ ಹುಡುಗಿಯನ್ನು ಮುಟ್ಟಿಲ್ಲ. ಆದರೆ, ಅವರು ತಂಡದವರು ಹಾಗಲ್ಲ. ಪ್ಲ್ಯಾನ್​ ಮಾಡಿ ಅವರು ಬಂದು ನಮ್ಮನ್ನು ಹಿಡಿದುಕೊಳ್ಳುತ್ತಿದ್ದಾರೆ. ತುಂಬಾನೇ ರಫ್​ ಆಗಿ ನಡೆಸಿಕೊಳ್ಳುತ್ತಿದ್ದಾರೆ. ಮಂಜು ಬಂದು ನನ್ನನ್ನು ಎಲ್ಲೆಲ್ಲೋ ಮುಟ್ಟಿ ಎಸೆದಿದ್ದಾರೆ. ನಮಗೆ ಹೇಸಿಗೆ ಎನಿಸುತ್ತಿದೆ. ಈ ಆಟ ಸಾಕು ಇಲ್ಲಿಗೆ ನಿಲ್ಲಿಸಿ ಎಂದು ನಿಧಿ ಕಣ್ಣೀರು ಹಾಕಿದ್ದರು. ಇದನ್ನು ಕೇಳಿ ಪ್ರಶಾಂತ್​ ಸಂಬರಗಿ ನೊಂದುಕೊಂಡರು.

ಆದರೆ, ರಾತ್ರಿ ವೇಳೆಗೆ ಪ್ರಶಾಂತ್​ ಉಲ್ಟಾ ಹೊಡೆದುಬಿಟ್ಟರು. ನಿಧಿ ಆಟವನ್ನು ಹಗುರವಾಗಿ ಪರಿಗಣಿಸಿದರು ಎನ್ನುವ ಆರೋಪ ಮಾಡಿದರು. ನಂತರ ಮಂಜು ಬಳಿ ಹೋದ ಪ್ರಶಾಂತ್, ನಿಧಿ ಅಸಹ್ಯ ಮಾಡಿ ಬಿಟ್ಟರು. ನಮ್ಮ ಟೀಂನಲ್ಲಿದ್ದಾರೆ ಎನ್ನುವ ಕಾರಣಕ್ಕೆ ಅವರನ್ನು ಬಿಟ್ಟುಕೊಡೋಕೆ ಆಗಿಲ್ಲ ಎಂದಿದ್ದಾರೆ.

ಬಿಗ್​ ಬಾಸ್​ ಟಾಸ್ಕ್​ ರದ್ದು!

ಬಿಗ್​ ಬಾಸ್​ ಮನೆಯಲ್ಲಿ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಒಂದಷ್ಟು ಸದಸ್ಯರು ವೈರಸ್​ ಆದರೆ, ಉಳಿದ ಸದಸ್ಯರು ಮನುಷ್ಯರು. ಆದರೆ, ಈ ಗೇಮ್​ನಲ್ಲಿ ಕ್ರೀಡಾಸ್ಫೂರ್ತಿಯನ್ನು ಯಾರೂ ಮೆರೆದಿಲ್ಲ ಎನ್ನುವ ಕಾರಣಕ್ಕೆ ಬಿಗ್​ ಬಾಸ್​ ಆಟವನ್ನೇ ರದ್ದು ಮಾಡಿ ಛೀಮಾರಿ ಹಾಕಿದೆ.

ಇದನ್ನೂಓದಿ: ಅವರು ಎಲ್ಲೆಲ್ಲೋ ಮುಟ್ತಿದ್ದಾರೆ.. ಬಿಗ್​ ಬಾಸ್​ ಮನೆಯಲ್ಲಿ ಕಣ್ಣೀರಿಟ್ಟ ನಿಧಿ ಸುಬ್ಬಯ್ಯ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More