AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜು ಎಲ್ಲೆಲ್ಲೋ ಮುಟ್ಟುತ್ತಾರೆ ಎಂದು ನಿಧಿ ದೂರಿದಾಗ ಮರುಗಿದ್ದ ಪ್ರಶಾಂತ್​ ಸಂಬರಗಿ ಆಮೇಲೆ ಉಲ್ಟಾ ಹೊಡೆದು ಬಿಟ್ಟರು!

ಮಂಜು ಮತ್ತು ಶಮಂತ್​ ಉದ್ದೇಶಪೂರ್ವಕವಾಗಿ ಪರಚುತ್ತಿದ್ದಾರೆ. ಬೇಕೆಂತಲೇ ಅವರು ಎಲ್ಲೆಲ್ಲೋ ಮುಟ್ಟುತ್ತಿದ್ದಾರೆ ಎನ್ನುವ ಆರೋಪವನ್ನು ನಿಧಿ ಮಾಡಿದ್ದರು. ಇದನ್ನು ಕೇಳಿ ಪ್ರಶಾಂತ್​ ಸಂಬರಗಿ ನೊಂದುಕೊಂಡರು. ರಾತ್ರಿ ವೇಳೆಗೆ ಪ್ರಶಾಂತ್​ ಉಲ್ಟಾ ಹೊಡೆದುಬಿಟ್ಟರು.

ಮಂಜು ಎಲ್ಲೆಲ್ಲೋ ಮುಟ್ಟುತ್ತಾರೆ ಎಂದು ನಿಧಿ ದೂರಿದಾಗ ಮರುಗಿದ್ದ ಪ್ರಶಾಂತ್​ ಸಂಬರಗಿ ಆಮೇಲೆ ಉಲ್ಟಾ ಹೊಡೆದು ಬಿಟ್ಟರು!
ಪ್ರಶಾಂತ್​-ನಿಧಿ
ರಾಜೇಶ್ ದುಗ್ಗುಮನೆ
|

Updated on: Mar 11, 2021 | 11:47 AM

Share

ಬಿಗ್​ ಬಾಸ್​ ಮನೆಯಲ್ಲಿ ಏನೆಲ್ಲ ಆಗುತ್ತದೆ, ಯಾರು ಹೇಗೆ ನಡೆದುಕೊಳ್ಳುತ್ತಾರೆ ಎಂದು ಊಹೀಸೋದು ತುಂಬಾನೇ ಕಷ್ಟ. ಈಗ ಕನ್ನಡ ಬಿಗ್​ ಬಾಸ್​ ಮನೆಯಲ್ಲೂ ಅದೇ ರೀತಿ ಆಗುತ್ತಿದೆ. ಎಲ್ಲಾ ಸದಸ್ಯರು ತಮ್ಮ ಅಸಲಿ ಮುಖವನ್ನು ಅನಾವರಣ ಮಾಡುತ್ತಿದೆ. ಅದೇ ಮನೆ ಒಳಗೆ ತೆರಳಿರುವ ಪ್ರಶಾಂತ್​ ಸಂಭರಗಿ ಡಬಲ್​ ಗೇಮ್​ ಆಡುತ್ತಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಇದಕ್ಕೆ ನಿನ್ನೆ ನಡೆದ ಘಟನೆ ಹೊಸ ಉದಾಹರಣೆ. ಮಂಜು ಮತ್ತು ಶಮಂತ್​ ಉದ್ದೇಶಪೂರ್ವಕವಾಗಿ ಪರಚುತ್ತಿದ್ದಾರೆ. ಬೇಕೆಂತಲೇ ಅವರು ಎಲ್ಲೆಲ್ಲೋ ಮುಟ್ಟುತ್ತಿದ್ದಾರೆ. ನಮ್ಮ ತಂಡದವರು ಯಾರೊಬ್ಬರೂ ಹುಡುಗಿಯನ್ನು ಮುಟ್ಟಿಲ್ಲ. ಆದರೆ, ಅವರು ತಂಡದವರು ಹಾಗಲ್ಲ. ಪ್ಲ್ಯಾನ್​ ಮಾಡಿ ಅವರು ಬಂದು ನಮ್ಮನ್ನು ಹಿಡಿದುಕೊಳ್ಳುತ್ತಿದ್ದಾರೆ. ತುಂಬಾನೇ ರಫ್​ ಆಗಿ ನಡೆಸಿಕೊಳ್ಳುತ್ತಿದ್ದಾರೆ. ಮಂಜು ಬಂದು ನನ್ನನ್ನು ಎಲ್ಲೆಲ್ಲೋ ಮುಟ್ಟಿ ಎಸೆದಿದ್ದಾರೆ. ನಮಗೆ ಹೇಸಿಗೆ ಎನಿಸುತ್ತಿದೆ. ಈ ಆಟ ಸಾಕು ಇಲ್ಲಿಗೆ ನಿಲ್ಲಿಸಿ ಎಂದು ನಿಧಿ ಕಣ್ಣೀರು ಹಾಕಿದ್ದರು. ಇದನ್ನು ಕೇಳಿ ಪ್ರಶಾಂತ್​ ಸಂಬರಗಿ ನೊಂದುಕೊಂಡರು.

ಆದರೆ, ರಾತ್ರಿ ವೇಳೆಗೆ ಪ್ರಶಾಂತ್​ ಉಲ್ಟಾ ಹೊಡೆದುಬಿಟ್ಟರು. ನಿಧಿ ಆಟವನ್ನು ಹಗುರವಾಗಿ ಪರಿಗಣಿಸಿದರು ಎನ್ನುವ ಆರೋಪ ಮಾಡಿದರು. ನಂತರ ಮಂಜು ಬಳಿ ಹೋದ ಪ್ರಶಾಂತ್, ನಿಧಿ ಅಸಹ್ಯ ಮಾಡಿ ಬಿಟ್ಟರು. ನಮ್ಮ ಟೀಂನಲ್ಲಿದ್ದಾರೆ ಎನ್ನುವ ಕಾರಣಕ್ಕೆ ಅವರನ್ನು ಬಿಟ್ಟುಕೊಡೋಕೆ ಆಗಿಲ್ಲ ಎಂದಿದ್ದಾರೆ.

ಬಿಗ್​ ಬಾಸ್​ ಟಾಸ್ಕ್​ ರದ್ದು!

ಬಿಗ್​ ಬಾಸ್​ ಮನೆಯಲ್ಲಿ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಒಂದಷ್ಟು ಸದಸ್ಯರು ವೈರಸ್​ ಆದರೆ, ಉಳಿದ ಸದಸ್ಯರು ಮನುಷ್ಯರು. ಆದರೆ, ಈ ಗೇಮ್​ನಲ್ಲಿ ಕ್ರೀಡಾಸ್ಫೂರ್ತಿಯನ್ನು ಯಾರೂ ಮೆರೆದಿಲ್ಲ ಎನ್ನುವ ಕಾರಣಕ್ಕೆ ಬಿಗ್​ ಬಾಸ್​ ಆಟವನ್ನೇ ರದ್ದು ಮಾಡಿ ಛೀಮಾರಿ ಹಾಕಿದೆ.

ಇದನ್ನೂಓದಿ: ಅವರು ಎಲ್ಲೆಲ್ಲೋ ಮುಟ್ತಿದ್ದಾರೆ.. ಬಿಗ್​ ಬಾಸ್​ ಮನೆಯಲ್ಲಿ ಕಣ್ಣೀರಿಟ್ಟ ನಿಧಿ ಸುಬ್ಬಯ್ಯ

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?