AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಪಿ ಹೊಡೆದು ಡಿಬಾರ್​ ಆಗಿದ್ದಕ್ಕೆ ಕೋರ್ಟ್ ಮೆಟ್ಟಿಲೇರಿದ್ದ ಪ್ರಶಾಂತ್​ ಸಂಬರಗಿ

ನಾನು ಪರೀಕ್ಷೆಯಲ್ಲಿ ಕಾಪಿ ಮಾಡೇ ಇಲ್ಲ ಎಂದು ಕೋರ್ಟ್​ಗೆ ಚಾಲೆಂಜ್​ ಮಾಡಿದ್ದೆ. ಇದುವೇ ಕೋರ್ಟ್​ನಲ್ಲಿ ನನ್ನ ಮೊದಲ ಪ್ರಕರಣ ಎಂದು ಪ್ರಶಾಂತ್​ ಹೇಳುತ್ತಿದ್ದಂತೆ ಎಲ್ಲರೂ ಚಪ್ಪಾಳೆ ಹೊಡೆದರು.

ಕಾಪಿ ಹೊಡೆದು ಡಿಬಾರ್​ ಆಗಿದ್ದಕ್ಕೆ ಕೋರ್ಟ್ ಮೆಟ್ಟಿಲೇರಿದ್ದ ಪ್ರಶಾಂತ್​ ಸಂಬರಗಿ
ಪ್ರಶಾಂತ್​ ಸಂಬರಗಿ
ರಾಜೇಶ್ ದುಗ್ಗುಮನೆ
|

Updated on: Mar 26, 2021 | 7:29 PM

Share

ಬಿಗ್​ ಬಾಸ್​ ಮನೆಯಲ್ಲಿ ಮಾರ್ಚ್​ 25ರ ಎಪಿಸೋಡ್​ನಲ್ಲಿ ಎಲ್ಲರೂ ತಾವು ಅನುಭವಿಸಿದ ಕಷ್ಟದ ಬಗ್ಗೆ ಹೇಳಿಕೊಂಡಿದ್ದರು. ಪ್ರತಿಯೊಬ್ಬರ ಕಥೆಗಳು ವೀಕ್ಷಕರಿಗೆ ಕಣ್ಣೀರು ತರಿಸಿದ್ದವು. ಮನೆಯಲ್ಲಿರುವ 14 ಸದಸ್ಯರ ಪೈಕಿ ಪ್ರಶಾಂತ್​ ಸಂಬರಗಿ ಮಾತ್ರ ತಮ್ಮ ಜೀವನದಲ್ಲಿ ನಡೆದ ವಿಚಿತ್ರ ಘಟನೆ ಬಗ್ಗೆ ಹೇಳಿಕೊಂಡರು. ಈ ಕಥೆ ಕೇಳಿ ಮನೆ ಮಂದಿಯೆಲ್ಲ ಬಿದ್ದು ಬಿದ್ದು ನಕ್ಕಿದ್ದಾರೆ. ಏಕೆಂದರೆ, ಪ್ರಶಾಂತ್ ಸಂಬರಗಿ ಪಿಯುಸಿ ಪರೀಕ್ಷೆ ಬರೆಯುವಾಗ ಹೆಚ್ಚು ಮಾರ್ಕ್ಸ್​ ಗಳಿಸ ಬೇಕು ಎಂದು ​ಕಾಪಿ ಹೊಡೆದು ಡಿಬಾರ್​ ಆಗಿದ್ದು ಮಾತ್ರವಲ್ಲ, ಕೋರ್ಟ್​ಗೆ ಮೇಲ್ಮನವಿ ಕೂಡ ಸಲ್ಲಿಕೆ ಮಾಡಿದ್ದರಂತೆ. ವೇದಿಕೆ ಮೇಲೆ ಬಂದು ಮಾತನಾಡಿರುವ ಪ್ರಶಾಂತ್ ಸಂಬರಗಿ, ನನ್ನ ಗುಟ್ಟುಗಳು ಅನೇಕ ಇವೆ. 1994-95ರಲ್ಲಿ ಸೆಕೆಂಡ್ ಪಿಯುಸಿ ಪರೀಕ್ಷೆ ಬರೆಯುವಾಗ ಕಾಪಿ ಹೊಡೆದು ಡಿಬಾರ್ ಆದ ವ್ಯಕ್ತಿ ನಾನು. ಡಿಬಾರ್​ ಆಗಿದ್ದು ಮಾತ್ರವಲ್ಲ ಈ ಪ್ರಕರಣವನ್ನು ಕೋರ್ಟ್​​ನಲ್ಲಿ ಚಾಲೆಂಜ್​ ಮಾಡಿದ್ದೆ ಎಂದು ಅವರು ಮಾತು ಆರಂಭಿಸಿದ್ದಾರೆ.

ನಾನು ಪರೀಕ್ಷೆಯಲ್ಲಿ ಕಾಪಿ ಮಾಡೇ ಇಲ್ಲ ಎಂದು ಕೋರ್ಟ್​ಗೆ ಚಾಲೆಂಜ್​ ಮಾಡಿದ್ದೆ. ಇದುವೇ ಕೋರ್ಟ್​ನಲ್ಲಿ ನನ್ನ ಮೊದಲ ಪ್ರಕರಣ ಎಂದು ಪ್ರಶಾಂತ್​ ಹೇಳುತ್ತಿದ್ದಂತೆ ಎಲ್ಲರೂ ಚಪ್ಪಾಳೆ ಹೊಡೆದರು. ಮಾವ ನೀವು ಗ್ರೇಟ್​ ಎಂದು ಹರ್ಷೋದ್ಘಾರ ವ್ಯಕ್ತಪಡಿಸಿದರು.

ಡಿಬಾರ್​ ಆದ ನಂತರ ಏನಾಯ್ತು ಎನ್ನುವ ಬಗ್ಗೆಯೂ ಪ್ರಶಾಂತ್​ ವಿವರಿಸಿದ್ದಾರೆ. ಈ ಎಲ್ಲಾ ವಿಚಾರಗಳನ್ನು ನಾನು ಕ್ಲಿಯರ್​ ಮಾಡಿಕೊಂಡು ಡಿಗ್ರಿಗೆ ಬಂದಿದ್ದೆ. ಆಗ ನನ್ನ ಪಿಯುಸಿ ಕ್ಲಾಸ್​ಮೇಟ್ಸ್​ ಅಂತಿಮ ವರ್ಷದ ಪದವಿಯಲ್ಲಿದ್ರು. ಹೀಗಾಗಿ ಅವರೆಲ್ಲ ನನಗೆ ಡ್ಯಾಡಿ ಅಂತಿದ್ರು ಎಂದು ನಕ್ಕರು. ಅಲ್ಲದೆ, ಈ ಗುಟ್ಟು ನಿಮ್ಮಲ್ಲೇ ಇರಲಿ ಎಂದು ಕೂಡ ಹೇಳಿದರು.

ಬಿಗ್​ ಬಾಸ್​ ಮನೆಯಲ್ಲಿ ತುಪ್ಪ ಖಾಲಿ ಮಾಡಿದ್ದ ವಿಚಾರ ಭಾರೀ ಚರ್ಚೆಗೆ ಕಾರಣವಾಗಿತ್ತು. ಪ್ರಶಾಂತ್​ ತುಪ್ಪ ತಿಂದೂ ಕೂಡ ತಾಯಾಣೆ ನಾನು ತುಪ್ಪ ತಿಂದಿಲಲ್ಲ ಎಂದು ಆಣೆ ಪ್ರಮಾಣ ಮಾಡಿದ್ದರು. ಇದೇ ವಿಚಾರವನ್ನು ಇದಕ್ಕೆ ಹೋಲಿಕೆ ಮಾಡಿ ಅರವಿಂದ್ ಅವರು ಪ್ರಶಾಂತ್​ ಕಾಲೆಳೆದಿದ್ದಾರೆ. ಈಗ ಸ್ಟೇಜ್​ನಿಂದ ಇಳಿದ ನಂತರ ಪ್ರಶಾಂತ್​ ನಾನು ತಾಯಾಣೆ ಕಾಪಿ ಹೊಡೆದಿಲ್ಲ ಎನ್ನುತ್ತಾರೆ ಎಂದರು.

ಇದನ್ನೂ ಓದಿ: ನನ್ನ ಬಾಯಿ ಬಚ್ಚಲು ಮನೆ ಇದ್ದಂಗೆ; ಮಂಜು ಪಾವಗಡ ಹೀಗೆ ಹೇಳಿದ್ದು ಯಾಕೆ?

‘ಸ್ಕರ್ಟ್​ ಹಾಕ್ಕೊಂಡು ಮಲಗಿದ್ದಾಗ ನಮ್ಮ ತಂದೆಯೇ ಕೆಟ್ಟದಾಗಿ ನಡೆದುಕೊಂಡ್ರು’: ಬಿಗ್​ ಬಾಸ್​ ಚಂದ್ರಕಲಾ ಬದುಕಿನ ಕಹಿ ಘಟನೆ!

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?