AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

150 ಜೊತೆ ಬಟ್ಟೆಯೊಂದಿಗೆ ಬಿಗ್​ ಬಾಸ್​ ಮನೆಗೆ ಬಂದಿದ್ದಾರೆ ಪ್ರಶಾಂತ್ ಸಂಬರಗಿ; ಸುದೀಪ್​ ರಿಯಾಕ್ಷನ್​​ ಹೇಗಿತ್ತು?

ಪ್ರಶಾಂತ್​ ಸಂಬರಗಿ ಕನ್ನಡ ಬಿಗ್​ ಬಾಸ್ ಸೀಸನ್​ 8 ಮೊದಲ ಇನ್ನಿಂಗ್ಸ್​ನಲ್ಲಿ ತಾವು ಧರಿಸುವ ಬಟ್ಟೆ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು. ಇದನ್ನು ಸೆಕೆಂಡ್​ ಇನ್ನಿಂಗ್ಸ್​ನಲ್ಲೂ ಅವರು ಮುಂದುವರಿಸುತ್ತಿದ್ದಾರೆ.

150 ಜೊತೆ ಬಟ್ಟೆಯೊಂದಿಗೆ ಬಿಗ್​ ಬಾಸ್​ ಮನೆಗೆ ಬಂದಿದ್ದಾರೆ ಪ್ರಶಾಂತ್ ಸಂಬರಗಿ; ಸುದೀಪ್​ ರಿಯಾಕ್ಷನ್​​ ಹೇಗಿತ್ತು?
150 ಜೊತೆ ಬಟ್ಟೆಯೊಂದಿಗೆ ಬಿಗ್​ ಬಾಸ್​ ಮನೆಗೆ ಬಂದಿದ್ದಾರೆ ಪ್ರಶಾಂತ್ ಸಂಬರಗಿ; ಸುದೀಪ್​ ರಿಯಾಕ್ಷನ್​​ ಹೇಗಿತ್ತು?
ರಾಜೇಶ್ ದುಗ್ಗುಮನೆ
| Edited By: |

Updated on: Jun 24, 2021 | 2:55 PM

Share

ಪ್ರಶಾಂತ್​ ಸಂಬರಗಿ ಬಿಗ್​ ಬಾಸ್​ ಮನೆಯಲ್ಲಿ ಕೇಂದ್ರ ಬಿಂದು ಆಗಿರೋಕೆ ಪ್ರಯತ್ನಪಡುತ್ತಿರುತ್ತಾರೆ. ಇದಕ್ಕೆ ಅವರು ನಾನಾ ರೀತಿಯ ಸರ್ಕಸ್​ ಕೂಡ ಮಾಡಿದ್ದಾರೆ. ಈಗ ಅದು ಎರಡನೇ ಇನ್ನಿಂಗ್ಸ್​ನಲ್ಲೂ ಮುಂದುವರಿಯಲಿದೆ. ಬಿಗ್​ ಬಾಸ್​ ವೇದಿಕೆ ಮೇಲೆಯೇ ಈ ವಿಚಾರವನ್ನು ಅವರು ಹಂಚಿಕೊಂಡಿದ್ದಾರೆ.

ಪ್ರಶಾಂತ್​ ಸಂಬರಗಿ ‘ಕನ್ನಡ ಬಿಗ್​ ಬಾಸ್ ಸೀಸನ್​ 8’ರ ಮೊದಲ ಇನ್ನಿಂಗ್ಸ್​ನಲ್ಲಿ ತಾವು ಧರಿಸುವ ಬಟ್ಟೆ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು. ನಾನಾ ರೀತಿಯ ಬಟ್ಟೆ ಧರಿಸಿ ಮಿಂಚಿದ್ದರು. ಇದನ್ನು ಸೆಕೆಂಡ್​ ಇನ್ನಿಂಗ್ಸ್​ನಲ್ಲೂ ಅವರು ಮುಂದುವರಿಸುತ್ತಿದ್ದಾರೆ.

ಜೂನ್​ 23ರಂದು ಕೊನೆಯ ಸ್ಪರ್ಧಿಯಾಗಿ ಪ್ರಶಾಂತ್​ ಬಿಗ್​ ಬಾಸ್​ ವೇದಿಕೆ ಏರಿದರು. ಈ ವೇಳೆ ಪ್ರಶಾಂತ್​ಗೆ ಸುದೀಪ್​ ಪ್ರಶ್ನೆ ಒಂದನ್ನು ಕೇಳಿದರು. ‘ನನಗೆ ಸಾಕಷ್ಟು ಪ್ರಶ್ನೆಗಳನ್ನು ಕೇಳಬೇಕು ಎಂದಿದೆ. ಅದರಲ್ಲಿ ಮುಖ್ಯವಾಗಿ ಒಂದು ಪ್ರಶ್ನೆ ಕೇಳುತ್ತಿದ್ದೇನೆ. ಈ ಬಾರಿ ಎಷ್ಟು ಬಟ್ಟೆಗಳನ್ನು ತಂದಿದ್ದೀರಾ’ ಎನ್ನುವ ಪ್ರಶ್ನೆ ಸುದೀಪ್​ ಕಡೆಯಿಂದ ಬಂತು. ಇದಕ್ಕೆ ಉತ್ತರಿಸಿದ ಪ್ರಶಾಂತ್​, ‘150 ಬಟ್ಟೆ ತಂದಿದ್ದೇನೆ’ ಎಂದರು. ಈ ವಿಚಾರ ಕೇಳಿದ ಸುದೀಪ್​ ಅಚ್ಚರಿ ಪಟ್ಟರು.

‘ಇನ್ನು ಉಳಿದಿರೋದು ನಾಲ್ಕೇ ವಾರ. ಅಷ್ಟೆಲ್ಲ ಬಟ್ಟೆ ಏಕೆ’ ಎಂದು ಸುದೀಪ್​ ಅಚ್ಚರಿ ಹೊರ ಹಾಕಿದರು. ಇದಕ್ಕೆ ಉತ್ತರಿಸಿದ ಪ್ರಶಾಂತ್​, ‘ನಿತ್ಯ ನಾಲ್ಕೈದು ವಿಧದ ಬಟ್ಟೆ ಹಾಕುತ್ತೇನೆ. ಯಾವಾಗಲೂ ಬಿಳಿ ಬಟ್ಟೆ ಹಾಕಿಕೊಂಡಿರುವುದಕ್ಕಿಂತ ಸ್ವಲ್ಪ ಕಲರ್​ಫುಲ್​ ಕಾಣಬೇಕು ಅನ್ನೋದು ನನ್ನ ಉದ್ದೇಶ’ ಎಂದರು ಪ್ರಶಾಂತ್​.

‘ಒಂದೊಮ್ಮೆ ನೀವು ಫೈನಲ್​ಗೆ ಬಂದರೆ ಅದಕ್ಕೂ ಬಟ್ಟೆ ರೆಡಿ ಇರುತ್ತದೆಯೇ?’ ಎಂದು ಕೇಳಲಾಯಿತು. ಆಗ ಪ್ರಶಾಂತ್​, ‘ಹೌದು, ಅದಕ್ಕೂ ಬಟ್ಟೆ ರೆಡಿ ಇದೆ. ಆದರೆ, ಯಾವುದು ಅಂತ ಡಿಸೈಡ್​ ಮಾಡಿಲ್ಲ. ನಾನು ಫೈನಲ್​ಗೆ ಬರೋದು ಸತ್ಯ’ ಎಂದು ಪ್ರಶಾಂತ್​ ಭವಿಷ್ಯ ನುಡಿದರು.

ಇದನ್ನೂ ಓದಿ:

Bigg Boss Kannada: ಹೊಸ ಬದಲಾವಣೆಯೊಂದಿಗೆ ಬಿಗ್​ ಬಾಸ್​ ಮನೆ ಸೇರಿದ ರಘು ಗೌಡ

Bigg Boss Kannada: ಬಿಗ್​ ಬಾಸ್​ ಮತ್ತೆ ಶುರುವಾಗಲು ಕಾರಣವಾದ ಪ್ರಮುಖ ವ್ಯಕ್ತಿ ಯಾರು? ಆ ಸ್ಪರ್ಧಿಯ ಮೇಲಿದೆ ಗುಮಾನಿ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್