Sign In

By signing in or creating an account, you agree with Associated Broadcasting Company's Terms & Conditions and Privacy Policy.

150 ಜೊತೆ ಬಟ್ಟೆಯೊಂದಿಗೆ ಬಿಗ್​ ಬಾಸ್​ ಮನೆಗೆ ಬಂದಿದ್ದಾರೆ ಪ್ರಶಾಂತ್ ಸಂಬರಗಿ; ಸುದೀಪ್​ ರಿಯಾಕ್ಷನ್​​ ಹೇಗಿತ್ತು?

ಪ್ರಶಾಂತ್​ ಸಂಬರಗಿ ಕನ್ನಡ ಬಿಗ್​ ಬಾಸ್ ಸೀಸನ್​ 8 ಮೊದಲ ಇನ್ನಿಂಗ್ಸ್​ನಲ್ಲಿ ತಾವು ಧರಿಸುವ ಬಟ್ಟೆ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು. ಇದನ್ನು ಸೆಕೆಂಡ್​ ಇನ್ನಿಂಗ್ಸ್​ನಲ್ಲೂ ಅವರು ಮುಂದುವರಿಸುತ್ತಿದ್ದಾರೆ.

150 ಜೊತೆ ಬಟ್ಟೆಯೊಂದಿಗೆ ಬಿಗ್​ ಬಾಸ್​ ಮನೆಗೆ ಬಂದಿದ್ದಾರೆ ಪ್ರಶಾಂತ್ ಸಂಬರಗಿ; ಸುದೀಪ್​ ರಿಯಾಕ್ಷನ್​​ ಹೇಗಿತ್ತು?
150 ಜೊತೆ ಬಟ್ಟೆಯೊಂದಿಗೆ ಬಿಗ್​ ಬಾಸ್​ ಮನೆಗೆ ಬಂದಿದ್ದಾರೆ ಪ್ರಶಾಂತ್ ಸಂಬರಗಿ; ಸುದೀಪ್​ ರಿಯಾಕ್ಷನ್​​ ಹೇಗಿತ್ತು?
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Jun 24, 2021 | 2:55 PM

ಪ್ರಶಾಂತ್​ ಸಂಬರಗಿ ಬಿಗ್​ ಬಾಸ್​ ಮನೆಯಲ್ಲಿ ಕೇಂದ್ರ ಬಿಂದು ಆಗಿರೋಕೆ ಪ್ರಯತ್ನಪಡುತ್ತಿರುತ್ತಾರೆ. ಇದಕ್ಕೆ ಅವರು ನಾನಾ ರೀತಿಯ ಸರ್ಕಸ್​ ಕೂಡ ಮಾಡಿದ್ದಾರೆ. ಈಗ ಅದು ಎರಡನೇ ಇನ್ನಿಂಗ್ಸ್​ನಲ್ಲೂ ಮುಂದುವರಿಯಲಿದೆ. ಬಿಗ್​ ಬಾಸ್​ ವೇದಿಕೆ ಮೇಲೆಯೇ ಈ ವಿಚಾರವನ್ನು ಅವರು ಹಂಚಿಕೊಂಡಿದ್ದಾರೆ.

ಪ್ರಶಾಂತ್​ ಸಂಬರಗಿ ‘ಕನ್ನಡ ಬಿಗ್​ ಬಾಸ್ ಸೀಸನ್​ 8’ರ ಮೊದಲ ಇನ್ನಿಂಗ್ಸ್​ನಲ್ಲಿ ತಾವು ಧರಿಸುವ ಬಟ್ಟೆ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು. ನಾನಾ ರೀತಿಯ ಬಟ್ಟೆ ಧರಿಸಿ ಮಿಂಚಿದ್ದರು. ಇದನ್ನು ಸೆಕೆಂಡ್​ ಇನ್ನಿಂಗ್ಸ್​ನಲ್ಲೂ ಅವರು ಮುಂದುವರಿಸುತ್ತಿದ್ದಾರೆ.

ಜೂನ್​ 23ರಂದು ಕೊನೆಯ ಸ್ಪರ್ಧಿಯಾಗಿ ಪ್ರಶಾಂತ್​ ಬಿಗ್​ ಬಾಸ್​ ವೇದಿಕೆ ಏರಿದರು. ಈ ವೇಳೆ ಪ್ರಶಾಂತ್​ಗೆ ಸುದೀಪ್​ ಪ್ರಶ್ನೆ ಒಂದನ್ನು ಕೇಳಿದರು. ‘ನನಗೆ ಸಾಕಷ್ಟು ಪ್ರಶ್ನೆಗಳನ್ನು ಕೇಳಬೇಕು ಎಂದಿದೆ. ಅದರಲ್ಲಿ ಮುಖ್ಯವಾಗಿ ಒಂದು ಪ್ರಶ್ನೆ ಕೇಳುತ್ತಿದ್ದೇನೆ. ಈ ಬಾರಿ ಎಷ್ಟು ಬಟ್ಟೆಗಳನ್ನು ತಂದಿದ್ದೀರಾ’ ಎನ್ನುವ ಪ್ರಶ್ನೆ ಸುದೀಪ್​ ಕಡೆಯಿಂದ ಬಂತು. ಇದಕ್ಕೆ ಉತ್ತರಿಸಿದ ಪ್ರಶಾಂತ್​, ‘150 ಬಟ್ಟೆ ತಂದಿದ್ದೇನೆ’ ಎಂದರು. ಈ ವಿಚಾರ ಕೇಳಿದ ಸುದೀಪ್​ ಅಚ್ಚರಿ ಪಟ್ಟರು.

‘ಇನ್ನು ಉಳಿದಿರೋದು ನಾಲ್ಕೇ ವಾರ. ಅಷ್ಟೆಲ್ಲ ಬಟ್ಟೆ ಏಕೆ’ ಎಂದು ಸುದೀಪ್​ ಅಚ್ಚರಿ ಹೊರ ಹಾಕಿದರು. ಇದಕ್ಕೆ ಉತ್ತರಿಸಿದ ಪ್ರಶಾಂತ್​, ‘ನಿತ್ಯ ನಾಲ್ಕೈದು ವಿಧದ ಬಟ್ಟೆ ಹಾಕುತ್ತೇನೆ. ಯಾವಾಗಲೂ ಬಿಳಿ ಬಟ್ಟೆ ಹಾಕಿಕೊಂಡಿರುವುದಕ್ಕಿಂತ ಸ್ವಲ್ಪ ಕಲರ್​ಫುಲ್​ ಕಾಣಬೇಕು ಅನ್ನೋದು ನನ್ನ ಉದ್ದೇಶ’ ಎಂದರು ಪ್ರಶಾಂತ್​.

‘ಒಂದೊಮ್ಮೆ ನೀವು ಫೈನಲ್​ಗೆ ಬಂದರೆ ಅದಕ್ಕೂ ಬಟ್ಟೆ ರೆಡಿ ಇರುತ್ತದೆಯೇ?’ ಎಂದು ಕೇಳಲಾಯಿತು. ಆಗ ಪ್ರಶಾಂತ್​, ‘ಹೌದು, ಅದಕ್ಕೂ ಬಟ್ಟೆ ರೆಡಿ ಇದೆ. ಆದರೆ, ಯಾವುದು ಅಂತ ಡಿಸೈಡ್​ ಮಾಡಿಲ್ಲ. ನಾನು ಫೈನಲ್​ಗೆ ಬರೋದು ಸತ್ಯ’ ಎಂದು ಪ್ರಶಾಂತ್​ ಭವಿಷ್ಯ ನುಡಿದರು.

ಇದನ್ನೂ ಓದಿ:

Bigg Boss Kannada: ಹೊಸ ಬದಲಾವಣೆಯೊಂದಿಗೆ ಬಿಗ್​ ಬಾಸ್​ ಮನೆ ಸೇರಿದ ರಘು ಗೌಡ

Bigg Boss Kannada: ಬಿಗ್​ ಬಾಸ್​ ಮತ್ತೆ ಶುರುವಾಗಲು ಕಾರಣವಾದ ಪ್ರಮುಖ ವ್ಯಕ್ತಿ ಯಾರು? ಆ ಸ್ಪರ್ಧಿಯ ಮೇಲಿದೆ ಗುಮಾನಿ

ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್