150 ಜೊತೆ ಬಟ್ಟೆಯೊಂದಿಗೆ ಬಿಗ್​ ಬಾಸ್​ ಮನೆಗೆ ಬಂದಿದ್ದಾರೆ ಪ್ರಶಾಂತ್ ಸಂಬರಗಿ; ಸುದೀಪ್​ ರಿಯಾಕ್ಷನ್​​ ಹೇಗಿತ್ತು?

ಪ್ರಶಾಂತ್​ ಸಂಬರಗಿ ಕನ್ನಡ ಬಿಗ್​ ಬಾಸ್ ಸೀಸನ್​ 8 ಮೊದಲ ಇನ್ನಿಂಗ್ಸ್​ನಲ್ಲಿ ತಾವು ಧರಿಸುವ ಬಟ್ಟೆ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು. ಇದನ್ನು ಸೆಕೆಂಡ್​ ಇನ್ನಿಂಗ್ಸ್​ನಲ್ಲೂ ಅವರು ಮುಂದುವರಿಸುತ್ತಿದ್ದಾರೆ.

150 ಜೊತೆ ಬಟ್ಟೆಯೊಂದಿಗೆ ಬಿಗ್​ ಬಾಸ್​ ಮನೆಗೆ ಬಂದಿದ್ದಾರೆ ಪ್ರಶಾಂತ್ ಸಂಬರಗಿ; ಸುದೀಪ್​ ರಿಯಾಕ್ಷನ್​​ ಹೇಗಿತ್ತು?
150 ಜೊತೆ ಬಟ್ಟೆಯೊಂದಿಗೆ ಬಿಗ್​ ಬಾಸ್​ ಮನೆಗೆ ಬಂದಿದ್ದಾರೆ ಪ್ರಶಾಂತ್ ಸಂಬರಗಿ; ಸುದೀಪ್​ ರಿಯಾಕ್ಷನ್​​ ಹೇಗಿತ್ತು?
Follow us
| Updated By: ಮದನ್​ ಕುಮಾರ್​

Updated on: Jun 24, 2021 | 2:55 PM

ಪ್ರಶಾಂತ್​ ಸಂಬರಗಿ ಬಿಗ್​ ಬಾಸ್​ ಮನೆಯಲ್ಲಿ ಕೇಂದ್ರ ಬಿಂದು ಆಗಿರೋಕೆ ಪ್ರಯತ್ನಪಡುತ್ತಿರುತ್ತಾರೆ. ಇದಕ್ಕೆ ಅವರು ನಾನಾ ರೀತಿಯ ಸರ್ಕಸ್​ ಕೂಡ ಮಾಡಿದ್ದಾರೆ. ಈಗ ಅದು ಎರಡನೇ ಇನ್ನಿಂಗ್ಸ್​ನಲ್ಲೂ ಮುಂದುವರಿಯಲಿದೆ. ಬಿಗ್​ ಬಾಸ್​ ವೇದಿಕೆ ಮೇಲೆಯೇ ಈ ವಿಚಾರವನ್ನು ಅವರು ಹಂಚಿಕೊಂಡಿದ್ದಾರೆ.

ಪ್ರಶಾಂತ್​ ಸಂಬರಗಿ ‘ಕನ್ನಡ ಬಿಗ್​ ಬಾಸ್ ಸೀಸನ್​ 8’ರ ಮೊದಲ ಇನ್ನಿಂಗ್ಸ್​ನಲ್ಲಿ ತಾವು ಧರಿಸುವ ಬಟ್ಟೆ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು. ನಾನಾ ರೀತಿಯ ಬಟ್ಟೆ ಧರಿಸಿ ಮಿಂಚಿದ್ದರು. ಇದನ್ನು ಸೆಕೆಂಡ್​ ಇನ್ನಿಂಗ್ಸ್​ನಲ್ಲೂ ಅವರು ಮುಂದುವರಿಸುತ್ತಿದ್ದಾರೆ.

ಜೂನ್​ 23ರಂದು ಕೊನೆಯ ಸ್ಪರ್ಧಿಯಾಗಿ ಪ್ರಶಾಂತ್​ ಬಿಗ್​ ಬಾಸ್​ ವೇದಿಕೆ ಏರಿದರು. ಈ ವೇಳೆ ಪ್ರಶಾಂತ್​ಗೆ ಸುದೀಪ್​ ಪ್ರಶ್ನೆ ಒಂದನ್ನು ಕೇಳಿದರು. ‘ನನಗೆ ಸಾಕಷ್ಟು ಪ್ರಶ್ನೆಗಳನ್ನು ಕೇಳಬೇಕು ಎಂದಿದೆ. ಅದರಲ್ಲಿ ಮುಖ್ಯವಾಗಿ ಒಂದು ಪ್ರಶ್ನೆ ಕೇಳುತ್ತಿದ್ದೇನೆ. ಈ ಬಾರಿ ಎಷ್ಟು ಬಟ್ಟೆಗಳನ್ನು ತಂದಿದ್ದೀರಾ’ ಎನ್ನುವ ಪ್ರಶ್ನೆ ಸುದೀಪ್​ ಕಡೆಯಿಂದ ಬಂತು. ಇದಕ್ಕೆ ಉತ್ತರಿಸಿದ ಪ್ರಶಾಂತ್​, ‘150 ಬಟ್ಟೆ ತಂದಿದ್ದೇನೆ’ ಎಂದರು. ಈ ವಿಚಾರ ಕೇಳಿದ ಸುದೀಪ್​ ಅಚ್ಚರಿ ಪಟ್ಟರು.

‘ಇನ್ನು ಉಳಿದಿರೋದು ನಾಲ್ಕೇ ವಾರ. ಅಷ್ಟೆಲ್ಲ ಬಟ್ಟೆ ಏಕೆ’ ಎಂದು ಸುದೀಪ್​ ಅಚ್ಚರಿ ಹೊರ ಹಾಕಿದರು. ಇದಕ್ಕೆ ಉತ್ತರಿಸಿದ ಪ್ರಶಾಂತ್​, ‘ನಿತ್ಯ ನಾಲ್ಕೈದು ವಿಧದ ಬಟ್ಟೆ ಹಾಕುತ್ತೇನೆ. ಯಾವಾಗಲೂ ಬಿಳಿ ಬಟ್ಟೆ ಹಾಕಿಕೊಂಡಿರುವುದಕ್ಕಿಂತ ಸ್ವಲ್ಪ ಕಲರ್​ಫುಲ್​ ಕಾಣಬೇಕು ಅನ್ನೋದು ನನ್ನ ಉದ್ದೇಶ’ ಎಂದರು ಪ್ರಶಾಂತ್​.

‘ಒಂದೊಮ್ಮೆ ನೀವು ಫೈನಲ್​ಗೆ ಬಂದರೆ ಅದಕ್ಕೂ ಬಟ್ಟೆ ರೆಡಿ ಇರುತ್ತದೆಯೇ?’ ಎಂದು ಕೇಳಲಾಯಿತು. ಆಗ ಪ್ರಶಾಂತ್​, ‘ಹೌದು, ಅದಕ್ಕೂ ಬಟ್ಟೆ ರೆಡಿ ಇದೆ. ಆದರೆ, ಯಾವುದು ಅಂತ ಡಿಸೈಡ್​ ಮಾಡಿಲ್ಲ. ನಾನು ಫೈನಲ್​ಗೆ ಬರೋದು ಸತ್ಯ’ ಎಂದು ಪ್ರಶಾಂತ್​ ಭವಿಷ್ಯ ನುಡಿದರು.

ಇದನ್ನೂ ಓದಿ:

Bigg Boss Kannada: ಹೊಸ ಬದಲಾವಣೆಯೊಂದಿಗೆ ಬಿಗ್​ ಬಾಸ್​ ಮನೆ ಸೇರಿದ ರಘು ಗೌಡ

Bigg Boss Kannada: ಬಿಗ್​ ಬಾಸ್​ ಮತ್ತೆ ಶುರುವಾಗಲು ಕಾರಣವಾದ ಪ್ರಮುಖ ವ್ಯಕ್ತಿ ಯಾರು? ಆ ಸ್ಪರ್ಧಿಯ ಮೇಲಿದೆ ಗುಮಾನಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ