AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಕಿತ್ತೂರು ರಾಣಿ ಚೆನ್ನಮ್ಮ ಕುಟುಂಬದವನು’; ಕೊನೆಯ ದಿನ ಅಚ್ಚರಿಯ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ಸಂಬರಗಿ

|ಕೊರೊನಾ ವೈರಸ್ ಎರಡನೇ ಅಲೆ ಜೋರಾಗಿದೆ. ಬಿಗ್ ಬಾಸ್ ಸೀಸನ್ 8 ಅರ್ಧಕ್ಕೆ ನಿಂತಿದೆ. ಅಂತಿಮ ದಿನದ ಎಪಿಸೋಡ್ಗಳನ್ನು ಮೇ 11 ಹಾಗೂ 12ರಂದು ಪ್ರಸಾರ ಮಾಡಲಾಗಿದೆ.

‘ನಾನು ಕಿತ್ತೂರು ರಾಣಿ ಚೆನ್ನಮ್ಮ ಕುಟುಂಬದವನು’; ಕೊನೆಯ ದಿನ ಅಚ್ಚರಿಯ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ಸಂಬರಗಿ
ಪ್ರಶಾಂತ್ ಸಂಬರಗಿ
ರಾಜೇಶ್ ದುಗ್ಗುಮನೆ
|

Updated on: May 12, 2021 | 9:57 PM

Share

ಪ್ರಶಾಂತ್ ಸಂಬರಗಿ ಬಿಗ್ ಬಾಸ್ ಮನೆಗೆ ಬಂದಾಗಿನಿಂದಲೂ ತಮ್ಮ ವಿಚಿತ್ರ ವಾದದ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಅನೇಕ ವಿಚಾರಗಳಲ್ಲಿ ಅವರು ಮನೆಯ ಸ್ಪರ್ಧಿಗಳ ಜತೆ ವಾದಕ್ಕೆ ಇಳಿದಿದ್ದಿದೆ. ಕೊನೆಯ ದಿನ ಪ್ರಶಾಂತ್ ಸಂಬರಗಿ ಅಚ್ಚರಿಯ ವಿಚಾರ ಒಂದನ್ನು ಬಿಚ್ಚಿಟ್ಟಿದ್ದಾರೆ. ಈ ವಿಚಾರ ಕೇಳಿ ಮನೆಯವರು ಅಚ್ಚರಿಪಟ್ಟಿದ್ದಾರೆ. | ಕೊರೊನಾ ವೈರಸ್ ಎರಡನೇ ಅಲೆ ಜೋರಾಗಿದೆ. ಬಿಗ್ ಬಾಸ್ ಸೀಸನ್ 8 ಅರ್ಧಕ್ಕೆ ನಿಂತಿದೆ. ಅಂತಿಮ ದಿನದ ಎಪಿಸೋಡ್​​ಗಳನ್ನು ಮೇ 11 ಹಾಗೂ 12ರಂದು ಪ್ರಸಾರ ಮಾಡಲಾಗಿದೆ. ಕೊನೆಯ ದಿನ ಎಲ್ಲಾ ಸ್ಪರ್ಧಿಗಳು ತುಂಬಾನೇ ಆಪ್ತವಾಗಿದ್ದರು. ಈ ವೇಳೆ ಪ್ರಶಾಂತ್ ಸಂಬರಗಿ ತಮ್ಮ ಕುಟುಂಬದ ಹಿನ್ನೆಲೆ ಬಗ್ಗೆ ಹೇಳಿಕೊಂಡಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಅವರ ಕುಟುಂಬದವರು ಎಂದು ಪ್ರಶಾಂತ್ ಹೇಳಿಕೊಂಡಿದ್ದಾರೆ.

‘ಮನೆಯ ಸ್ಪರ್ಧಿಗಳು ಊಟಕ್ಕೆ ಕೂತಿದ್ದರು. ಈ ವೇಳೆ ಪ್ರಶಾಂತ್ ಮಾತು ಆರಂಭಿಸಿದರು. ನಾನು ಕಿತ್ತೂರು ರಾಣಿ ಚೆನ್ನಮ್ಮ ಕುಟುಂಬದವನು. ರಾಣಿ ಚೆನ್ನಮ್ಮ ನನ್ನ ಅಜ್ಜಿಯ ಅಜ್ಜಿ’ ಎಂದರು ಅವರು. ಈ ವೇಳೆ ಮನೆ ಮಂದಿ ಅನುಮಾನ ಹೊರ ಹಾಕಿದರು. ‘ನಾನು ಹೇಳುತ್ತಿರುವುದು ಸುಳ್ಳಲ್ಲ. ಇದನ್ನು ನಾನು ಹೊಸದಾಗಿ ಹೇಳುತ್ತಾ ಇಲ್ಲ. ಈ ಮೊದಲು ವಿಡಿಯೋ ಮಾಡಿ ಹೇಳಿದ್ದೆ. ಇದಕ್ಕೆ ದಾಖಲೆಗಳನ್ನು ನೀಡಿದ್ದೇವೆ. ನಮ್ಮ ಜಮೀನು ಕಿತ್ತೂರಿನಿಂದ ಇನಾಮು ಬಂದಿದೆ’ ಎಂದರು ಪ್ರಶಾಂತ್.

ಪ್ರತಿಬಾರಿ ಬಿಗ್ ಬಾಸ್ ಕೊನೆಯ ದಿನ ಗ್ರ್ಯಾಂಡ್ ಆಗಿ ಫಿನಾಲೆ ಏರ್ಪಡಿಸಲಾಗುತ್ತಿತ್ತು. ಆದರೆ, ಈ ಬಾರಿ ಬಿಗ್ ಬಾಸ್ ಅರ್ಧಕ್ಕೆ ನಿಲ್ಲಿಸಲಾಗುತ್ತಿರುವುದರಿಂದ ಯಾವುದೇ ರೀತಿಯ ಸಂಭ್ರಮ ಇಲ್ಲ. ಎಷ್ಟು ಸಾಧ್ಯವೋ ಅಷ್ಟು ಅಚ್ಚುಕಟ್ಟಾಗಿ ಕೊನೆಯ ದಿನದ ಕಾರ್ಯಕ್ರಮವನ್ನು ಮಾಡಲಾಗಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಕೊನೆಯ ಎಪಿಸೋಡ್​ನಲ್ಲಿ ವಿನ್ನರ್​ ಘೋಷಿಸಿದ ಸುದೀಪ್​; ಅಚ್ಚರಿ ಮೂಡಿಸಿದ ಕಿಚ್ಚನ ಮಾತು

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ