AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಕಿತ್ತೂರು ರಾಣಿ ಚೆನ್ನಮ್ಮ ಕುಟುಂಬದವನು’; ಕೊನೆಯ ದಿನ ಅಚ್ಚರಿಯ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ಸಂಬರಗಿ

|ಕೊರೊನಾ ವೈರಸ್ ಎರಡನೇ ಅಲೆ ಜೋರಾಗಿದೆ. ಬಿಗ್ ಬಾಸ್ ಸೀಸನ್ 8 ಅರ್ಧಕ್ಕೆ ನಿಂತಿದೆ. ಅಂತಿಮ ದಿನದ ಎಪಿಸೋಡ್ಗಳನ್ನು ಮೇ 11 ಹಾಗೂ 12ರಂದು ಪ್ರಸಾರ ಮಾಡಲಾಗಿದೆ.

‘ನಾನು ಕಿತ್ತೂರು ರಾಣಿ ಚೆನ್ನಮ್ಮ ಕುಟುಂಬದವನು’; ಕೊನೆಯ ದಿನ ಅಚ್ಚರಿಯ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ಸಂಬರಗಿ
ಪ್ರಶಾಂತ್ ಸಂಬರಗಿ
ರಾಜೇಶ್ ದುಗ್ಗುಮನೆ
|

Updated on: May 12, 2021 | 9:57 PM

Share

ಪ್ರಶಾಂತ್ ಸಂಬರಗಿ ಬಿಗ್ ಬಾಸ್ ಮನೆಗೆ ಬಂದಾಗಿನಿಂದಲೂ ತಮ್ಮ ವಿಚಿತ್ರ ವಾದದ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಅನೇಕ ವಿಚಾರಗಳಲ್ಲಿ ಅವರು ಮನೆಯ ಸ್ಪರ್ಧಿಗಳ ಜತೆ ವಾದಕ್ಕೆ ಇಳಿದಿದ್ದಿದೆ. ಕೊನೆಯ ದಿನ ಪ್ರಶಾಂತ್ ಸಂಬರಗಿ ಅಚ್ಚರಿಯ ವಿಚಾರ ಒಂದನ್ನು ಬಿಚ್ಚಿಟ್ಟಿದ್ದಾರೆ. ಈ ವಿಚಾರ ಕೇಳಿ ಮನೆಯವರು ಅಚ್ಚರಿಪಟ್ಟಿದ್ದಾರೆ. | ಕೊರೊನಾ ವೈರಸ್ ಎರಡನೇ ಅಲೆ ಜೋರಾಗಿದೆ. ಬಿಗ್ ಬಾಸ್ ಸೀಸನ್ 8 ಅರ್ಧಕ್ಕೆ ನಿಂತಿದೆ. ಅಂತಿಮ ದಿನದ ಎಪಿಸೋಡ್​​ಗಳನ್ನು ಮೇ 11 ಹಾಗೂ 12ರಂದು ಪ್ರಸಾರ ಮಾಡಲಾಗಿದೆ. ಕೊನೆಯ ದಿನ ಎಲ್ಲಾ ಸ್ಪರ್ಧಿಗಳು ತುಂಬಾನೇ ಆಪ್ತವಾಗಿದ್ದರು. ಈ ವೇಳೆ ಪ್ರಶಾಂತ್ ಸಂಬರಗಿ ತಮ್ಮ ಕುಟುಂಬದ ಹಿನ್ನೆಲೆ ಬಗ್ಗೆ ಹೇಳಿಕೊಂಡಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಅವರ ಕುಟುಂಬದವರು ಎಂದು ಪ್ರಶಾಂತ್ ಹೇಳಿಕೊಂಡಿದ್ದಾರೆ.

‘ಮನೆಯ ಸ್ಪರ್ಧಿಗಳು ಊಟಕ್ಕೆ ಕೂತಿದ್ದರು. ಈ ವೇಳೆ ಪ್ರಶಾಂತ್ ಮಾತು ಆರಂಭಿಸಿದರು. ನಾನು ಕಿತ್ತೂರು ರಾಣಿ ಚೆನ್ನಮ್ಮ ಕುಟುಂಬದವನು. ರಾಣಿ ಚೆನ್ನಮ್ಮ ನನ್ನ ಅಜ್ಜಿಯ ಅಜ್ಜಿ’ ಎಂದರು ಅವರು. ಈ ವೇಳೆ ಮನೆ ಮಂದಿ ಅನುಮಾನ ಹೊರ ಹಾಕಿದರು. ‘ನಾನು ಹೇಳುತ್ತಿರುವುದು ಸುಳ್ಳಲ್ಲ. ಇದನ್ನು ನಾನು ಹೊಸದಾಗಿ ಹೇಳುತ್ತಾ ಇಲ್ಲ. ಈ ಮೊದಲು ವಿಡಿಯೋ ಮಾಡಿ ಹೇಳಿದ್ದೆ. ಇದಕ್ಕೆ ದಾಖಲೆಗಳನ್ನು ನೀಡಿದ್ದೇವೆ. ನಮ್ಮ ಜಮೀನು ಕಿತ್ತೂರಿನಿಂದ ಇನಾಮು ಬಂದಿದೆ’ ಎಂದರು ಪ್ರಶಾಂತ್.

ಪ್ರತಿಬಾರಿ ಬಿಗ್ ಬಾಸ್ ಕೊನೆಯ ದಿನ ಗ್ರ್ಯಾಂಡ್ ಆಗಿ ಫಿನಾಲೆ ಏರ್ಪಡಿಸಲಾಗುತ್ತಿತ್ತು. ಆದರೆ, ಈ ಬಾರಿ ಬಿಗ್ ಬಾಸ್ ಅರ್ಧಕ್ಕೆ ನಿಲ್ಲಿಸಲಾಗುತ್ತಿರುವುದರಿಂದ ಯಾವುದೇ ರೀತಿಯ ಸಂಭ್ರಮ ಇಲ್ಲ. ಎಷ್ಟು ಸಾಧ್ಯವೋ ಅಷ್ಟು ಅಚ್ಚುಕಟ್ಟಾಗಿ ಕೊನೆಯ ದಿನದ ಕಾರ್ಯಕ್ರಮವನ್ನು ಮಾಡಲಾಗಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಕೊನೆಯ ಎಪಿಸೋಡ್​ನಲ್ಲಿ ವಿನ್ನರ್​ ಘೋಷಿಸಿದ ಸುದೀಪ್​; ಅಚ್ಚರಿ ಮೂಡಿಸಿದ ಕಿಚ್ಚನ ಮಾತು

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ