AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯ ದೊಡ್ಡ ಹಗರಣವನ್ನು ಭೇದಿಸಿದ ಪ್ರಶಾಂತ್​ ಸಂಬರಗಿ

ಬಿಗ್​ ಬಾಸ್​ ಸದಸ್ಯರು ಮನೆಯಲ್ಲಿ ಏನೆಲ್ಲ ಮಾಡುತ್ತಾರೆ ಎಂಬುದು ವೀಕ್ಷಕರಿಗೆ ಗೊತ್ತಾಗುತ್ತದೆ. ಮನೆಯ ಸದಸ್ಯರು ಏನು ಮಾತನಾಡುತ್ತಾರೆ, ಯಾರ ಜತೆ ಇರುತ್ತಾರೆ ಎಂಬುದರ ಮೇಲೆ ಮನೆಯ ಕ್ಯಾಮೆರಾಗಳು ಕಣ್ಣಿಟ್ಟಿರುತ್ತವೆ.

ಬಿಗ್​ ಬಾಸ್​ ಮನೆಯ ದೊಡ್ಡ ಹಗರಣವನ್ನು ಭೇದಿಸಿದ ಪ್ರಶಾಂತ್​ ಸಂಬರಗಿ
ಪ್ರಶಾಂತ್​ ಸಂಬರಗಿ
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Apr 10, 2021 | 7:22 AM

Share

ಕೆಲ ಪಕ್ಷಗಳು ಅಧಿಕಾರಕ್ಕೆ ಬಂದ ನಂತರದಲ್ಲಿ ಸಾಕಷ್ಟು ಹಗರಣಗಳನ್ನು ಮಾಡುತ್ತವೆ. ಹಲವು ವರ್ಷಗಳ ನಂತರ ಅದು ಹೊರಗೆ ಬರುತ್ತವೆ. ಆದರೆ, ಬಿಗ್​ ಬಾಸ್ ಮನೆಯಲ್ಲಿ ಹಗರಣ ಮಾಡೋದು ಎಂದರೆ? ಅಂಥ ಹಗರಣವೊಂದು ಈ ಬಾರಿ ನಡೆದಿದೆ. ಪ್ರಶಾಂತ್​ ಸಂಬರಗಿ ಇದನ್ನು ಭೇದಿಸಿದ್ದಾರೆ. ಬಿಗ್​ ಬಾಸ್​ ಸದಸ್ಯರು ಮನೆಯಲ್ಲಿ ಏನೆಲ್ಲ ಮಾಡುತ್ತಾರೆ ಎಂಬುದು ವೀಕ್ಷಕರಿಗೆ ಗೊತ್ತಾಗುತ್ತದೆ. ಮನೆಯ ಸದಸ್ಯರು ಏನು ಮಾತನಾಡುತ್ತಾರೆ, ಯಾರ ಜತೆ ಇರುತ್ತಾರೆ ಎಂಬುದರ ಮೇಲೆ ಮನೆಯ ಕ್ಯಾಮೆರಾಗಳು ಕಣ್ಣಿಟ್ಟಿರುತ್ತವೆ. ಹೀಗಾಗಿ, ಯಾರೂ ಕದ್ದು-ಮುಚ್ಚಿ ಏನನ್ನೂ ಮಾಡಲು ಸಾಧ್ಯವಿಲ್ಲ. ಹೀಗಿರುವಾಗ ಮನೆಯಲ್ಲಿ ಹಗರಣ ನಡೆಯೋದು ಅಂದರೆ?

ಈ ಬಾರಿ ಮನೆಯಲ್ಲಿ ನಡೆದಿರೋದು ಅಡುಗೆ ಮನೆಗೆ ಸಂಬಂಧಿಸಿದ ಹಗರಣ. ಈ ಹಗರಣ ನಡೆದಿರೋದು ಕಾಫಿ ವಿಭಾಗದಲ್ಲಿ. ಮನೆಯಲ್ಲಿ ಸಾಕಷ್ಟು ಮಂದಿ ಕಾಫಿ ಪ್ರಿಯರಿದ್ದಾರೆ. ಪ್ರಶಾಂತ್​, ಅರವಿಂದ್, ನಿಧಿ ಸುಬ್ಬಯ್ಯ ಆಗಾಗ ಕಾಫಿ ಹೀರುತ್ತಲೇ ಇರುತ್ತಾರೆ. ಹೀಗಾಗಿ, ಕಾಫಿ ಪೌಡರ್​ಗೆ ಎಲ್ಲಿಲ್ಲದ ಬೇಡಿಕೆ. ಹೀಗಾಗಿ, ಮನೆಯ ಸದಸ್ಯರು ಕಾಫಿ ಪೌಡರ್​ ಬಚ್ಚಿಡುತ್ತಿದ್ದಾರೆ.

ಈ ಬಾರಿ ಕ್ಯಾಪ್ಟನ್​ ಆಗಿರುವ ಪ್ರಶಾಂತ್ ಸಂಬರಗಿ ಗಮನಕ್ಕೆ ಈ ವಿಚಾರ ಬಂದಿದೆ. ಅವರು ಬಚ್ಚಿಟ್ಟಿದ್ದ ಕಾಫಿ ಪುಡಿ ಕೈಗೆತ್ತಿಕೊಂಡು ಇದೊಂದು ದೊಡ್ಡ ಹಗರಣ ಎಂದಿದ್ದಾರೆ. ಕಾಫಿ ಪೌಡರ್​​ಅನ್ನು ಹೇಗೆ ಮುಚ್ಚಿಡುತ್ತಾರೆ? ಊಟ ಮಾತ್ರ ಎಲ್ಲರಿಗೂ ಸಮವಾಗಿ ಸಿಗಬೇಕು ಎಂದು ಹೇಳಿದ್ದಾರೆ.

ಇನ್ನು ಶಮಂತ್​ ಕೂಡ ಬಿಗ್​ ಬಾಸ್​ ಮನೆಯಲ್ಲಿ ಕಾಫಿ ಪೌಡರ್​​ ಬಚ್ಚಿಟ್ಟಿದ್ದರು. ಈ ವಿಚಾರದಲ್ಲಿ ಪ್ರಶಾಂತ್​ ಸೈಲೆಂಟ್​ ಆಗಿದ್ದರು. ಹೀಗೇಕೆ ಮಾತನಾಡುತ್ತಿದ್ದಾರೆ ಎಂದು ವೀಕ್ಷಕರು ಪ್ರಶ್ನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಪ್ರಶಾಂತ್​ ಸಂಬರಗಿ ವೀಕ್​ನೆಸ್​ ಮನೆಯವರಿಗೆ ಗೊತ್ತಾಗಿಹೋಯ್ತು; ಇನ್ನು ಎಲ್ಲವೂ ಸುಲಭ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ