AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯ ದೊಡ್ಡ ಹಗರಣವನ್ನು ಭೇದಿಸಿದ ಪ್ರಶಾಂತ್​ ಸಂಬರಗಿ

ಬಿಗ್​ ಬಾಸ್​ ಸದಸ್ಯರು ಮನೆಯಲ್ಲಿ ಏನೆಲ್ಲ ಮಾಡುತ್ತಾರೆ ಎಂಬುದು ವೀಕ್ಷಕರಿಗೆ ಗೊತ್ತಾಗುತ್ತದೆ. ಮನೆಯ ಸದಸ್ಯರು ಏನು ಮಾತನಾಡುತ್ತಾರೆ, ಯಾರ ಜತೆ ಇರುತ್ತಾರೆ ಎಂಬುದರ ಮೇಲೆ ಮನೆಯ ಕ್ಯಾಮೆರಾಗಳು ಕಣ್ಣಿಟ್ಟಿರುತ್ತವೆ.

ಬಿಗ್​ ಬಾಸ್​ ಮನೆಯ ದೊಡ್ಡ ಹಗರಣವನ್ನು ಭೇದಿಸಿದ ಪ್ರಶಾಂತ್​ ಸಂಬರಗಿ
ಪ್ರಶಾಂತ್​ ಸಂಬರಗಿ
ರಾಜೇಶ್ ದುಗ್ಗುಮನೆ
| Edited By: |

Updated on: Apr 10, 2021 | 7:22 AM

Share

ಕೆಲ ಪಕ್ಷಗಳು ಅಧಿಕಾರಕ್ಕೆ ಬಂದ ನಂತರದಲ್ಲಿ ಸಾಕಷ್ಟು ಹಗರಣಗಳನ್ನು ಮಾಡುತ್ತವೆ. ಹಲವು ವರ್ಷಗಳ ನಂತರ ಅದು ಹೊರಗೆ ಬರುತ್ತವೆ. ಆದರೆ, ಬಿಗ್​ ಬಾಸ್ ಮನೆಯಲ್ಲಿ ಹಗರಣ ಮಾಡೋದು ಎಂದರೆ? ಅಂಥ ಹಗರಣವೊಂದು ಈ ಬಾರಿ ನಡೆದಿದೆ. ಪ್ರಶಾಂತ್​ ಸಂಬರಗಿ ಇದನ್ನು ಭೇದಿಸಿದ್ದಾರೆ. ಬಿಗ್​ ಬಾಸ್​ ಸದಸ್ಯರು ಮನೆಯಲ್ಲಿ ಏನೆಲ್ಲ ಮಾಡುತ್ತಾರೆ ಎಂಬುದು ವೀಕ್ಷಕರಿಗೆ ಗೊತ್ತಾಗುತ್ತದೆ. ಮನೆಯ ಸದಸ್ಯರು ಏನು ಮಾತನಾಡುತ್ತಾರೆ, ಯಾರ ಜತೆ ಇರುತ್ತಾರೆ ಎಂಬುದರ ಮೇಲೆ ಮನೆಯ ಕ್ಯಾಮೆರಾಗಳು ಕಣ್ಣಿಟ್ಟಿರುತ್ತವೆ. ಹೀಗಾಗಿ, ಯಾರೂ ಕದ್ದು-ಮುಚ್ಚಿ ಏನನ್ನೂ ಮಾಡಲು ಸಾಧ್ಯವಿಲ್ಲ. ಹೀಗಿರುವಾಗ ಮನೆಯಲ್ಲಿ ಹಗರಣ ನಡೆಯೋದು ಅಂದರೆ?

ಈ ಬಾರಿ ಮನೆಯಲ್ಲಿ ನಡೆದಿರೋದು ಅಡುಗೆ ಮನೆಗೆ ಸಂಬಂಧಿಸಿದ ಹಗರಣ. ಈ ಹಗರಣ ನಡೆದಿರೋದು ಕಾಫಿ ವಿಭಾಗದಲ್ಲಿ. ಮನೆಯಲ್ಲಿ ಸಾಕಷ್ಟು ಮಂದಿ ಕಾಫಿ ಪ್ರಿಯರಿದ್ದಾರೆ. ಪ್ರಶಾಂತ್​, ಅರವಿಂದ್, ನಿಧಿ ಸುಬ್ಬಯ್ಯ ಆಗಾಗ ಕಾಫಿ ಹೀರುತ್ತಲೇ ಇರುತ್ತಾರೆ. ಹೀಗಾಗಿ, ಕಾಫಿ ಪೌಡರ್​ಗೆ ಎಲ್ಲಿಲ್ಲದ ಬೇಡಿಕೆ. ಹೀಗಾಗಿ, ಮನೆಯ ಸದಸ್ಯರು ಕಾಫಿ ಪೌಡರ್​ ಬಚ್ಚಿಡುತ್ತಿದ್ದಾರೆ.

ಈ ಬಾರಿ ಕ್ಯಾಪ್ಟನ್​ ಆಗಿರುವ ಪ್ರಶಾಂತ್ ಸಂಬರಗಿ ಗಮನಕ್ಕೆ ಈ ವಿಚಾರ ಬಂದಿದೆ. ಅವರು ಬಚ್ಚಿಟ್ಟಿದ್ದ ಕಾಫಿ ಪುಡಿ ಕೈಗೆತ್ತಿಕೊಂಡು ಇದೊಂದು ದೊಡ್ಡ ಹಗರಣ ಎಂದಿದ್ದಾರೆ. ಕಾಫಿ ಪೌಡರ್​​ಅನ್ನು ಹೇಗೆ ಮುಚ್ಚಿಡುತ್ತಾರೆ? ಊಟ ಮಾತ್ರ ಎಲ್ಲರಿಗೂ ಸಮವಾಗಿ ಸಿಗಬೇಕು ಎಂದು ಹೇಳಿದ್ದಾರೆ.

ಇನ್ನು ಶಮಂತ್​ ಕೂಡ ಬಿಗ್​ ಬಾಸ್​ ಮನೆಯಲ್ಲಿ ಕಾಫಿ ಪೌಡರ್​​ ಬಚ್ಚಿಟ್ಟಿದ್ದರು. ಈ ವಿಚಾರದಲ್ಲಿ ಪ್ರಶಾಂತ್​ ಸೈಲೆಂಟ್​ ಆಗಿದ್ದರು. ಹೀಗೇಕೆ ಮಾತನಾಡುತ್ತಿದ್ದಾರೆ ಎಂದು ವೀಕ್ಷಕರು ಪ್ರಶ್ನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಪ್ರಶಾಂತ್​ ಸಂಬರಗಿ ವೀಕ್​ನೆಸ್​ ಮನೆಯವರಿಗೆ ಗೊತ್ತಾಗಿಹೋಯ್ತು; ಇನ್ನು ಎಲ್ಲವೂ ಸುಲಭ

ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ