Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯ ದೊಡ್ಡ ಹಗರಣವನ್ನು ಭೇದಿಸಿದ ಪ್ರಶಾಂತ್​ ಸಂಬರಗಿ

ಬಿಗ್​ ಬಾಸ್​ ಸದಸ್ಯರು ಮನೆಯಲ್ಲಿ ಏನೆಲ್ಲ ಮಾಡುತ್ತಾರೆ ಎಂಬುದು ವೀಕ್ಷಕರಿಗೆ ಗೊತ್ತಾಗುತ್ತದೆ. ಮನೆಯ ಸದಸ್ಯರು ಏನು ಮಾತನಾಡುತ್ತಾರೆ, ಯಾರ ಜತೆ ಇರುತ್ತಾರೆ ಎಂಬುದರ ಮೇಲೆ ಮನೆಯ ಕ್ಯಾಮೆರಾಗಳು ಕಣ್ಣಿಟ್ಟಿರುತ್ತವೆ.

ಬಿಗ್​ ಬಾಸ್​ ಮನೆಯ ದೊಡ್ಡ ಹಗರಣವನ್ನು ಭೇದಿಸಿದ ಪ್ರಶಾಂತ್​ ಸಂಬರಗಿ
ಪ್ರಶಾಂತ್​ ಸಂಬರಗಿ
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Apr 10, 2021 | 7:22 AM

ಕೆಲ ಪಕ್ಷಗಳು ಅಧಿಕಾರಕ್ಕೆ ಬಂದ ನಂತರದಲ್ಲಿ ಸಾಕಷ್ಟು ಹಗರಣಗಳನ್ನು ಮಾಡುತ್ತವೆ. ಹಲವು ವರ್ಷಗಳ ನಂತರ ಅದು ಹೊರಗೆ ಬರುತ್ತವೆ. ಆದರೆ, ಬಿಗ್​ ಬಾಸ್ ಮನೆಯಲ್ಲಿ ಹಗರಣ ಮಾಡೋದು ಎಂದರೆ? ಅಂಥ ಹಗರಣವೊಂದು ಈ ಬಾರಿ ನಡೆದಿದೆ. ಪ್ರಶಾಂತ್​ ಸಂಬರಗಿ ಇದನ್ನು ಭೇದಿಸಿದ್ದಾರೆ. ಬಿಗ್​ ಬಾಸ್​ ಸದಸ್ಯರು ಮನೆಯಲ್ಲಿ ಏನೆಲ್ಲ ಮಾಡುತ್ತಾರೆ ಎಂಬುದು ವೀಕ್ಷಕರಿಗೆ ಗೊತ್ತಾಗುತ್ತದೆ. ಮನೆಯ ಸದಸ್ಯರು ಏನು ಮಾತನಾಡುತ್ತಾರೆ, ಯಾರ ಜತೆ ಇರುತ್ತಾರೆ ಎಂಬುದರ ಮೇಲೆ ಮನೆಯ ಕ್ಯಾಮೆರಾಗಳು ಕಣ್ಣಿಟ್ಟಿರುತ್ತವೆ. ಹೀಗಾಗಿ, ಯಾರೂ ಕದ್ದು-ಮುಚ್ಚಿ ಏನನ್ನೂ ಮಾಡಲು ಸಾಧ್ಯವಿಲ್ಲ. ಹೀಗಿರುವಾಗ ಮನೆಯಲ್ಲಿ ಹಗರಣ ನಡೆಯೋದು ಅಂದರೆ?

ಈ ಬಾರಿ ಮನೆಯಲ್ಲಿ ನಡೆದಿರೋದು ಅಡುಗೆ ಮನೆಗೆ ಸಂಬಂಧಿಸಿದ ಹಗರಣ. ಈ ಹಗರಣ ನಡೆದಿರೋದು ಕಾಫಿ ವಿಭಾಗದಲ್ಲಿ. ಮನೆಯಲ್ಲಿ ಸಾಕಷ್ಟು ಮಂದಿ ಕಾಫಿ ಪ್ರಿಯರಿದ್ದಾರೆ. ಪ್ರಶಾಂತ್​, ಅರವಿಂದ್, ನಿಧಿ ಸುಬ್ಬಯ್ಯ ಆಗಾಗ ಕಾಫಿ ಹೀರುತ್ತಲೇ ಇರುತ್ತಾರೆ. ಹೀಗಾಗಿ, ಕಾಫಿ ಪೌಡರ್​ಗೆ ಎಲ್ಲಿಲ್ಲದ ಬೇಡಿಕೆ. ಹೀಗಾಗಿ, ಮನೆಯ ಸದಸ್ಯರು ಕಾಫಿ ಪೌಡರ್​ ಬಚ್ಚಿಡುತ್ತಿದ್ದಾರೆ.

ಈ ಬಾರಿ ಕ್ಯಾಪ್ಟನ್​ ಆಗಿರುವ ಪ್ರಶಾಂತ್ ಸಂಬರಗಿ ಗಮನಕ್ಕೆ ಈ ವಿಚಾರ ಬಂದಿದೆ. ಅವರು ಬಚ್ಚಿಟ್ಟಿದ್ದ ಕಾಫಿ ಪುಡಿ ಕೈಗೆತ್ತಿಕೊಂಡು ಇದೊಂದು ದೊಡ್ಡ ಹಗರಣ ಎಂದಿದ್ದಾರೆ. ಕಾಫಿ ಪೌಡರ್​​ಅನ್ನು ಹೇಗೆ ಮುಚ್ಚಿಡುತ್ತಾರೆ? ಊಟ ಮಾತ್ರ ಎಲ್ಲರಿಗೂ ಸಮವಾಗಿ ಸಿಗಬೇಕು ಎಂದು ಹೇಳಿದ್ದಾರೆ.

ಇನ್ನು ಶಮಂತ್​ ಕೂಡ ಬಿಗ್​ ಬಾಸ್​ ಮನೆಯಲ್ಲಿ ಕಾಫಿ ಪೌಡರ್​​ ಬಚ್ಚಿಟ್ಟಿದ್ದರು. ಈ ವಿಚಾರದಲ್ಲಿ ಪ್ರಶಾಂತ್​ ಸೈಲೆಂಟ್​ ಆಗಿದ್ದರು. ಹೀಗೇಕೆ ಮಾತನಾಡುತ್ತಿದ್ದಾರೆ ಎಂದು ವೀಕ್ಷಕರು ಪ್ರಶ್ನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಪ್ರಶಾಂತ್​ ಸಂಬರಗಿ ವೀಕ್​ನೆಸ್​ ಮನೆಯವರಿಗೆ ಗೊತ್ತಾಗಿಹೋಯ್ತು; ಇನ್ನು ಎಲ್ಲವೂ ಸುಲಭ

ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್