AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯ ದೊಡ್ಡ ಹಗರಣವನ್ನು ಭೇದಿಸಿದ ಪ್ರಶಾಂತ್​ ಸಂಬರಗಿ

ಬಿಗ್​ ಬಾಸ್​ ಸದಸ್ಯರು ಮನೆಯಲ್ಲಿ ಏನೆಲ್ಲ ಮಾಡುತ್ತಾರೆ ಎಂಬುದು ವೀಕ್ಷಕರಿಗೆ ಗೊತ್ತಾಗುತ್ತದೆ. ಮನೆಯ ಸದಸ್ಯರು ಏನು ಮಾತನಾಡುತ್ತಾರೆ, ಯಾರ ಜತೆ ಇರುತ್ತಾರೆ ಎಂಬುದರ ಮೇಲೆ ಮನೆಯ ಕ್ಯಾಮೆರಾಗಳು ಕಣ್ಣಿಟ್ಟಿರುತ್ತವೆ.

ಬಿಗ್​ ಬಾಸ್​ ಮನೆಯ ದೊಡ್ಡ ಹಗರಣವನ್ನು ಭೇದಿಸಿದ ಪ್ರಶಾಂತ್​ ಸಂಬರಗಿ
ಪ್ರಶಾಂತ್​ ಸಂಬರಗಿ
ರಾಜೇಶ್ ದುಗ್ಗುಮನೆ
| Edited By: |

Updated on: Apr 10, 2021 | 7:22 AM

Share

ಕೆಲ ಪಕ್ಷಗಳು ಅಧಿಕಾರಕ್ಕೆ ಬಂದ ನಂತರದಲ್ಲಿ ಸಾಕಷ್ಟು ಹಗರಣಗಳನ್ನು ಮಾಡುತ್ತವೆ. ಹಲವು ವರ್ಷಗಳ ನಂತರ ಅದು ಹೊರಗೆ ಬರುತ್ತವೆ. ಆದರೆ, ಬಿಗ್​ ಬಾಸ್ ಮನೆಯಲ್ಲಿ ಹಗರಣ ಮಾಡೋದು ಎಂದರೆ? ಅಂಥ ಹಗರಣವೊಂದು ಈ ಬಾರಿ ನಡೆದಿದೆ. ಪ್ರಶಾಂತ್​ ಸಂಬರಗಿ ಇದನ್ನು ಭೇದಿಸಿದ್ದಾರೆ. ಬಿಗ್​ ಬಾಸ್​ ಸದಸ್ಯರು ಮನೆಯಲ್ಲಿ ಏನೆಲ್ಲ ಮಾಡುತ್ತಾರೆ ಎಂಬುದು ವೀಕ್ಷಕರಿಗೆ ಗೊತ್ತಾಗುತ್ತದೆ. ಮನೆಯ ಸದಸ್ಯರು ಏನು ಮಾತನಾಡುತ್ತಾರೆ, ಯಾರ ಜತೆ ಇರುತ್ತಾರೆ ಎಂಬುದರ ಮೇಲೆ ಮನೆಯ ಕ್ಯಾಮೆರಾಗಳು ಕಣ್ಣಿಟ್ಟಿರುತ್ತವೆ. ಹೀಗಾಗಿ, ಯಾರೂ ಕದ್ದು-ಮುಚ್ಚಿ ಏನನ್ನೂ ಮಾಡಲು ಸಾಧ್ಯವಿಲ್ಲ. ಹೀಗಿರುವಾಗ ಮನೆಯಲ್ಲಿ ಹಗರಣ ನಡೆಯೋದು ಅಂದರೆ?

ಈ ಬಾರಿ ಮನೆಯಲ್ಲಿ ನಡೆದಿರೋದು ಅಡುಗೆ ಮನೆಗೆ ಸಂಬಂಧಿಸಿದ ಹಗರಣ. ಈ ಹಗರಣ ನಡೆದಿರೋದು ಕಾಫಿ ವಿಭಾಗದಲ್ಲಿ. ಮನೆಯಲ್ಲಿ ಸಾಕಷ್ಟು ಮಂದಿ ಕಾಫಿ ಪ್ರಿಯರಿದ್ದಾರೆ. ಪ್ರಶಾಂತ್​, ಅರವಿಂದ್, ನಿಧಿ ಸುಬ್ಬಯ್ಯ ಆಗಾಗ ಕಾಫಿ ಹೀರುತ್ತಲೇ ಇರುತ್ತಾರೆ. ಹೀಗಾಗಿ, ಕಾಫಿ ಪೌಡರ್​ಗೆ ಎಲ್ಲಿಲ್ಲದ ಬೇಡಿಕೆ. ಹೀಗಾಗಿ, ಮನೆಯ ಸದಸ್ಯರು ಕಾಫಿ ಪೌಡರ್​ ಬಚ್ಚಿಡುತ್ತಿದ್ದಾರೆ.

ಈ ಬಾರಿ ಕ್ಯಾಪ್ಟನ್​ ಆಗಿರುವ ಪ್ರಶಾಂತ್ ಸಂಬರಗಿ ಗಮನಕ್ಕೆ ಈ ವಿಚಾರ ಬಂದಿದೆ. ಅವರು ಬಚ್ಚಿಟ್ಟಿದ್ದ ಕಾಫಿ ಪುಡಿ ಕೈಗೆತ್ತಿಕೊಂಡು ಇದೊಂದು ದೊಡ್ಡ ಹಗರಣ ಎಂದಿದ್ದಾರೆ. ಕಾಫಿ ಪೌಡರ್​​ಅನ್ನು ಹೇಗೆ ಮುಚ್ಚಿಡುತ್ತಾರೆ? ಊಟ ಮಾತ್ರ ಎಲ್ಲರಿಗೂ ಸಮವಾಗಿ ಸಿಗಬೇಕು ಎಂದು ಹೇಳಿದ್ದಾರೆ.

ಇನ್ನು ಶಮಂತ್​ ಕೂಡ ಬಿಗ್​ ಬಾಸ್​ ಮನೆಯಲ್ಲಿ ಕಾಫಿ ಪೌಡರ್​​ ಬಚ್ಚಿಟ್ಟಿದ್ದರು. ಈ ವಿಚಾರದಲ್ಲಿ ಪ್ರಶಾಂತ್​ ಸೈಲೆಂಟ್​ ಆಗಿದ್ದರು. ಹೀಗೇಕೆ ಮಾತನಾಡುತ್ತಿದ್ದಾರೆ ಎಂದು ವೀಕ್ಷಕರು ಪ್ರಶ್ನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಪ್ರಶಾಂತ್​ ಸಂಬರಗಿ ವೀಕ್​ನೆಸ್​ ಮನೆಯವರಿಗೆ ಗೊತ್ತಾಗಿಹೋಯ್ತು; ಇನ್ನು ಎಲ್ಲವೂ ಸುಲಭ

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ