AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯ ದೊಡ್ಡ ಹಗರಣವನ್ನು ಭೇದಿಸಿದ ಪ್ರಶಾಂತ್​ ಸಂಬರಗಿ

ಬಿಗ್​ ಬಾಸ್​ ಸದಸ್ಯರು ಮನೆಯಲ್ಲಿ ಏನೆಲ್ಲ ಮಾಡುತ್ತಾರೆ ಎಂಬುದು ವೀಕ್ಷಕರಿಗೆ ಗೊತ್ತಾಗುತ್ತದೆ. ಮನೆಯ ಸದಸ್ಯರು ಏನು ಮಾತನಾಡುತ್ತಾರೆ, ಯಾರ ಜತೆ ಇರುತ್ತಾರೆ ಎಂಬುದರ ಮೇಲೆ ಮನೆಯ ಕ್ಯಾಮೆರಾಗಳು ಕಣ್ಣಿಟ್ಟಿರುತ್ತವೆ.

ಬಿಗ್​ ಬಾಸ್​ ಮನೆಯ ದೊಡ್ಡ ಹಗರಣವನ್ನು ಭೇದಿಸಿದ ಪ್ರಶಾಂತ್​ ಸಂಬರಗಿ
ಪ್ರಶಾಂತ್​ ಸಂಬರಗಿ
ರಾಜೇಶ್ ದುಗ್ಗುಮನೆ
| Edited By: |

Updated on: Apr 10, 2021 | 7:22 AM

Share

ಕೆಲ ಪಕ್ಷಗಳು ಅಧಿಕಾರಕ್ಕೆ ಬಂದ ನಂತರದಲ್ಲಿ ಸಾಕಷ್ಟು ಹಗರಣಗಳನ್ನು ಮಾಡುತ್ತವೆ. ಹಲವು ವರ್ಷಗಳ ನಂತರ ಅದು ಹೊರಗೆ ಬರುತ್ತವೆ. ಆದರೆ, ಬಿಗ್​ ಬಾಸ್ ಮನೆಯಲ್ಲಿ ಹಗರಣ ಮಾಡೋದು ಎಂದರೆ? ಅಂಥ ಹಗರಣವೊಂದು ಈ ಬಾರಿ ನಡೆದಿದೆ. ಪ್ರಶಾಂತ್​ ಸಂಬರಗಿ ಇದನ್ನು ಭೇದಿಸಿದ್ದಾರೆ. ಬಿಗ್​ ಬಾಸ್​ ಸದಸ್ಯರು ಮನೆಯಲ್ಲಿ ಏನೆಲ್ಲ ಮಾಡುತ್ತಾರೆ ಎಂಬುದು ವೀಕ್ಷಕರಿಗೆ ಗೊತ್ತಾಗುತ್ತದೆ. ಮನೆಯ ಸದಸ್ಯರು ಏನು ಮಾತನಾಡುತ್ತಾರೆ, ಯಾರ ಜತೆ ಇರುತ್ತಾರೆ ಎಂಬುದರ ಮೇಲೆ ಮನೆಯ ಕ್ಯಾಮೆರಾಗಳು ಕಣ್ಣಿಟ್ಟಿರುತ್ತವೆ. ಹೀಗಾಗಿ, ಯಾರೂ ಕದ್ದು-ಮುಚ್ಚಿ ಏನನ್ನೂ ಮಾಡಲು ಸಾಧ್ಯವಿಲ್ಲ. ಹೀಗಿರುವಾಗ ಮನೆಯಲ್ಲಿ ಹಗರಣ ನಡೆಯೋದು ಅಂದರೆ?

ಈ ಬಾರಿ ಮನೆಯಲ್ಲಿ ನಡೆದಿರೋದು ಅಡುಗೆ ಮನೆಗೆ ಸಂಬಂಧಿಸಿದ ಹಗರಣ. ಈ ಹಗರಣ ನಡೆದಿರೋದು ಕಾಫಿ ವಿಭಾಗದಲ್ಲಿ. ಮನೆಯಲ್ಲಿ ಸಾಕಷ್ಟು ಮಂದಿ ಕಾಫಿ ಪ್ರಿಯರಿದ್ದಾರೆ. ಪ್ರಶಾಂತ್​, ಅರವಿಂದ್, ನಿಧಿ ಸುಬ್ಬಯ್ಯ ಆಗಾಗ ಕಾಫಿ ಹೀರುತ್ತಲೇ ಇರುತ್ತಾರೆ. ಹೀಗಾಗಿ, ಕಾಫಿ ಪೌಡರ್​ಗೆ ಎಲ್ಲಿಲ್ಲದ ಬೇಡಿಕೆ. ಹೀಗಾಗಿ, ಮನೆಯ ಸದಸ್ಯರು ಕಾಫಿ ಪೌಡರ್​ ಬಚ್ಚಿಡುತ್ತಿದ್ದಾರೆ.

ಈ ಬಾರಿ ಕ್ಯಾಪ್ಟನ್​ ಆಗಿರುವ ಪ್ರಶಾಂತ್ ಸಂಬರಗಿ ಗಮನಕ್ಕೆ ಈ ವಿಚಾರ ಬಂದಿದೆ. ಅವರು ಬಚ್ಚಿಟ್ಟಿದ್ದ ಕಾಫಿ ಪುಡಿ ಕೈಗೆತ್ತಿಕೊಂಡು ಇದೊಂದು ದೊಡ್ಡ ಹಗರಣ ಎಂದಿದ್ದಾರೆ. ಕಾಫಿ ಪೌಡರ್​​ಅನ್ನು ಹೇಗೆ ಮುಚ್ಚಿಡುತ್ತಾರೆ? ಊಟ ಮಾತ್ರ ಎಲ್ಲರಿಗೂ ಸಮವಾಗಿ ಸಿಗಬೇಕು ಎಂದು ಹೇಳಿದ್ದಾರೆ.

ಇನ್ನು ಶಮಂತ್​ ಕೂಡ ಬಿಗ್​ ಬಾಸ್​ ಮನೆಯಲ್ಲಿ ಕಾಫಿ ಪೌಡರ್​​ ಬಚ್ಚಿಟ್ಟಿದ್ದರು. ಈ ವಿಚಾರದಲ್ಲಿ ಪ್ರಶಾಂತ್​ ಸೈಲೆಂಟ್​ ಆಗಿದ್ದರು. ಹೀಗೇಕೆ ಮಾತನಾಡುತ್ತಿದ್ದಾರೆ ಎಂದು ವೀಕ್ಷಕರು ಪ್ರಶ್ನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಪ್ರಶಾಂತ್​ ಸಂಬರಗಿ ವೀಕ್​ನೆಸ್​ ಮನೆಯವರಿಗೆ ಗೊತ್ತಾಗಿಹೋಯ್ತು; ಇನ್ನು ಎಲ್ಲವೂ ಸುಲಭ

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್