AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಒಂದಾದ ಹಾವು-ಮುಂಗುಸಿ; ಮಂಜುಗೆ ಪ್ರೀತಿಯಿಂದ ಕೈ ತುತ್ತು ತಿನ್ನಿಸಿದ ಪ್ರಶಾಂತ್​

ಜಗಳವಾಡೋದು ತಪ್ಪು ಅನ್ನೋದು ಪ್ರಶಾಂತ್​ಗೆ ಅರಿವಾದಂತೆ ಕಾಣುತ್ತಿದೆ. ಈ ಕಾರಣಕ್ಕೆ ಅವರು ಮಂಜು ಸೇರಿ ಮನೆಯ ಎಲ್ಲಾ ಸದಸ್ಯರ ಜತೆ ಮೃದುವಾಗಿ ನಡೆದುಕೊಳ್ಳುತ್ತಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಒಂದಾದ ಹಾವು-ಮುಂಗುಸಿ; ಮಂಜುಗೆ ಪ್ರೀತಿಯಿಂದ ಕೈ ತುತ್ತು ತಿನ್ನಿಸಿದ ಪ್ರಶಾಂತ್​
ಬಿಗ್​ ಬಾಸ್​ ಮನೆಯಲ್ಲಿ ಒಂದಾದ ಹಾವು-ಮುಂಗುಸಿ; ಮಂಜುಗೆ ಪ್ರೀತಿಯಿಂದ ಕೈತುತ್ತು ತಿನ್ನಿಸಿದ ಪ್ರಶಾಂತ್​
TV9 Web
| Edited By: |

Updated on:Jul 15, 2021 | 2:48 PM

Share

‘ಕನ್ನಡ ಬಿಗ್ ಬಾಸ್ ಸೀಸನ್​ 8’ರ ಮೊದಲ ಇನ್ನಿಂಗ್ಸ್​ನ ಆರಂಭದ ದಿನಗಳಲ್ಲಿ ಪ್ರಶಾಂತ್​ ಸಂಬರಗಿ ಹಾಗೂ ಮಂಜು ಪಾವಗಡ ಚೆನ್ನಾಗಿಯೇ ಇದ್ದರು. ಪ್ರಶಾಂತ್​ ಅವರನ್ನು ಮಂಜು ಪ್ರೀತಿಯಿಂದ ಮಾವ ಎಂದು ಕರೆಯುತ್ತಿದ್ದರು. ಚಕ್ರವರ್ತಿ ಚಂದ್ರಚೂಡ್​ ಯಾವಾಗ ಮನೆ ಒಳಗೆ ಎಂಟ್ರಿ ಕೊಟ್ಟರೋ ಅಂದಿನಿಂದ ಮಂಜು ಹಾಗೂ ಪ್ರಶಾಂತ್​ ನಡುವೆ ಯಾವುದೂ ಸರಿ ಇಲ್ಲ. ಆದರೆ, ಈಗ ಇಬ್ಬರೂ ಒಂದಾಗಿದ್ದಾರೆ. ಅದೆಷ್ಟರ ಮಟ್ಟಿಗೆ ಎಂದರೆ, ಮಂಜುಗೆ ಕೈತುತ್ತು ತಿನ್ನಿಸುವಷ್ಟು.

ಬಿಗ್ ಬಾಸ್ ಎರಡನೆ ಇನ್ನಿಂಗ್ಸ್​ನಲ್ಲಿ ಮಂಜು ಪಾವಗಡ ಹಾಗೂ ಪ್ರಶಾಂತ್​ ಸಂಬರಗಿ ನಡುವೆ ದ್ವೇಷ ಮುಂದುವರಿದಿತ್ತು. ಮೊದಲ ವಾರದಲ್ಲಿ ಮಂಜು ಹಾಗೂ ದಿವ್ಯಾ ಸುರೇಶ್​ ಆಡಿದ ಮಾತುಗಳು ಪ್ರಶಾಂತ್​ ಸಿಟ್ಟಿಗೆ ಕಾರಣವಾಗಿತ್ತು. ಹೀಗಾಗಿ, ಸಿಕ್ಕಸಿಕ್ಕಲ್ಲಿ ಅವರು ಜಗಳವಾಡುತ್ತಿದ್ದರು. ಆದರೆ, ಇದು ತಪ್ಪು ಅನ್ನೋದು ಪ್ರಶಾಂತ್​ಗೆ ಅರಿವಾದಂತೆ ಕಾಣುತ್ತಿದೆ. ಈ ಕಾರಣಕ್ಕೆ ಅವರು ಮಂಜು ಸೇರಿ ಮನೆಯ ಎಲ್ಲಾ ಸದಸ್ಯರ ಜತೆ ಮೃದುವಾಗಿ ನಡೆದುಕೊಳ್ಳುತ್ತಿದ್ದಾರೆ.

ಬಿಗ್​ ಬಾಸ್​ನಲ್ಲಿ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಈ ಟಾಸ್ಕ್​ನ ಅನುಸಾರ, ‘ವಿಜಯ ಯಾತ್ರೆ’ ತಂಡದ ಇಬ್ಬರು ಸದಸ್ಯರು, ‘ನಿಂಗ್​​ ಐತೆ’ ತಂಡದ ಸದಸ್ಯರಿಗೆ ಊಟ ಮಾಡಿಸಬೇಕು. ವಿಜಯ ಯಾತ್ರೆ ತಂಡದ ವೈಷ್ಣವಿ ಹಾಗೂ ಪ್ರಶಾಂತ್​ ಸಂಬರಗಿ​ ಅವರು ಮಂಜುಗೆ ಕರೆದು ಕರೆದು ಊಟ ಮಾಡಿಸಿದ್ದಾರೆ. ಪ್ರಶಾಂತ್​ ಅವರಂತೂ ಮಂಜುಗೆ ಬಹಳ ಪ್ರೀತಿಯಿಂದ ಕೈ ತುತ್ತು ತಿನ್ನಿಸಿದ್ದಾರೆ. ಈ ಮೂಲಕ ಇಬ್ಬರ ನಡುವೆ ಒಳ್ಳೆಯ ಗೆಳೆತನ ಬೆಳೆದಿರೋದು ಸಾಬೀತಾಗಿದೆ. ಮನೆಯಲ್ಲಿ ಈ ಮೊದಲು ಹಾವು ಮುಂಗುಸಿಯಂತೆ ಇದ್ದ ಇಬ್ಬರೂ ಈಗ ತುಂಬಾನೇ ಬದಲಾಗಿದ್ದಾರೆ ಎನ್ನುತ್ತಿದ್ದಾರೆ ವೀಕ್ಷಕರು. ಕಲರ್ಸ್​ ಕನ್ನಡ ವಾಹಿನಿ ಈ ಬಗ್ಗೆ ಪ್ರೋಮೋ ಹಂಚಿಕೊಂಡಿದ್ದು, ಇಂದು (ಜುಲೈ 15) ಪೂರ್ತಿ ಎಪಿಸೋಡ್​ ಪ್ರಸಾರವಾಗಲಿದೆ.

ಚಕ್ರವರ್ತಿ ಅವರಿಂದ ಪ್ರಶಾಂತ್​ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಪ್ರಶಾಂತ್​ ಕೂಲ್​ ಆಗಿರೋಕು ಇದೂ ಕೂಡ ಒಂದು ಕಾರಣ ಇದ್ದರೂ ಇರಬಹುದು.

ಇದನ್ನೂ ಓದಿ: ಪ್ರಶಾಂತ್​-ಅರವಿಂದ್ ಕೈ ಮಿಲಾಯಿಸಿಕೊಳ್ಳುವುದನ್ನು ತಪ್ಪಿಸಿದ ಮನೆ ಮಂದಿ; ಬಿಗ್​ ಬಾಸ್​ ಮನೆಯಲ್ಲಿ ದೊಡ್ಡ ಜಗಳ

ಬಿಗ್​ ಬಾಸ್​ನಿಂದ ರಘು ಎಲಿಮಿನೇಟ್​ ಆಗೋಕೆ ಕಾರಣವಾಯ್ತು ಈ ಒಂದು ವಿಚಾರ 

Published On - 2:42 pm, Thu, 15 July 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್