AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಒಂದಾದ ಹಾವು-ಮುಂಗುಸಿ; ಮಂಜುಗೆ ಪ್ರೀತಿಯಿಂದ ಕೈ ತುತ್ತು ತಿನ್ನಿಸಿದ ಪ್ರಶಾಂತ್​

ಜಗಳವಾಡೋದು ತಪ್ಪು ಅನ್ನೋದು ಪ್ರಶಾಂತ್​ಗೆ ಅರಿವಾದಂತೆ ಕಾಣುತ್ತಿದೆ. ಈ ಕಾರಣಕ್ಕೆ ಅವರು ಮಂಜು ಸೇರಿ ಮನೆಯ ಎಲ್ಲಾ ಸದಸ್ಯರ ಜತೆ ಮೃದುವಾಗಿ ನಡೆದುಕೊಳ್ಳುತ್ತಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಒಂದಾದ ಹಾವು-ಮುಂಗುಸಿ; ಮಂಜುಗೆ ಪ್ರೀತಿಯಿಂದ ಕೈ ತುತ್ತು ತಿನ್ನಿಸಿದ ಪ್ರಶಾಂತ್​
ಬಿಗ್​ ಬಾಸ್​ ಮನೆಯಲ್ಲಿ ಒಂದಾದ ಹಾವು-ಮುಂಗುಸಿ; ಮಂಜುಗೆ ಪ್ರೀತಿಯಿಂದ ಕೈತುತ್ತು ತಿನ್ನಿಸಿದ ಪ್ರಶಾಂತ್​
TV9 Web
| Edited By: |

Updated on:Jul 15, 2021 | 2:48 PM

Share

‘ಕನ್ನಡ ಬಿಗ್ ಬಾಸ್ ಸೀಸನ್​ 8’ರ ಮೊದಲ ಇನ್ನಿಂಗ್ಸ್​ನ ಆರಂಭದ ದಿನಗಳಲ್ಲಿ ಪ್ರಶಾಂತ್​ ಸಂಬರಗಿ ಹಾಗೂ ಮಂಜು ಪಾವಗಡ ಚೆನ್ನಾಗಿಯೇ ಇದ್ದರು. ಪ್ರಶಾಂತ್​ ಅವರನ್ನು ಮಂಜು ಪ್ರೀತಿಯಿಂದ ಮಾವ ಎಂದು ಕರೆಯುತ್ತಿದ್ದರು. ಚಕ್ರವರ್ತಿ ಚಂದ್ರಚೂಡ್​ ಯಾವಾಗ ಮನೆ ಒಳಗೆ ಎಂಟ್ರಿ ಕೊಟ್ಟರೋ ಅಂದಿನಿಂದ ಮಂಜು ಹಾಗೂ ಪ್ರಶಾಂತ್​ ನಡುವೆ ಯಾವುದೂ ಸರಿ ಇಲ್ಲ. ಆದರೆ, ಈಗ ಇಬ್ಬರೂ ಒಂದಾಗಿದ್ದಾರೆ. ಅದೆಷ್ಟರ ಮಟ್ಟಿಗೆ ಎಂದರೆ, ಮಂಜುಗೆ ಕೈತುತ್ತು ತಿನ್ನಿಸುವಷ್ಟು.

ಬಿಗ್ ಬಾಸ್ ಎರಡನೆ ಇನ್ನಿಂಗ್ಸ್​ನಲ್ಲಿ ಮಂಜು ಪಾವಗಡ ಹಾಗೂ ಪ್ರಶಾಂತ್​ ಸಂಬರಗಿ ನಡುವೆ ದ್ವೇಷ ಮುಂದುವರಿದಿತ್ತು. ಮೊದಲ ವಾರದಲ್ಲಿ ಮಂಜು ಹಾಗೂ ದಿವ್ಯಾ ಸುರೇಶ್​ ಆಡಿದ ಮಾತುಗಳು ಪ್ರಶಾಂತ್​ ಸಿಟ್ಟಿಗೆ ಕಾರಣವಾಗಿತ್ತು. ಹೀಗಾಗಿ, ಸಿಕ್ಕಸಿಕ್ಕಲ್ಲಿ ಅವರು ಜಗಳವಾಡುತ್ತಿದ್ದರು. ಆದರೆ, ಇದು ತಪ್ಪು ಅನ್ನೋದು ಪ್ರಶಾಂತ್​ಗೆ ಅರಿವಾದಂತೆ ಕಾಣುತ್ತಿದೆ. ಈ ಕಾರಣಕ್ಕೆ ಅವರು ಮಂಜು ಸೇರಿ ಮನೆಯ ಎಲ್ಲಾ ಸದಸ್ಯರ ಜತೆ ಮೃದುವಾಗಿ ನಡೆದುಕೊಳ್ಳುತ್ತಿದ್ದಾರೆ.

ಬಿಗ್​ ಬಾಸ್​ನಲ್ಲಿ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಈ ಟಾಸ್ಕ್​ನ ಅನುಸಾರ, ‘ವಿಜಯ ಯಾತ್ರೆ’ ತಂಡದ ಇಬ್ಬರು ಸದಸ್ಯರು, ‘ನಿಂಗ್​​ ಐತೆ’ ತಂಡದ ಸದಸ್ಯರಿಗೆ ಊಟ ಮಾಡಿಸಬೇಕು. ವಿಜಯ ಯಾತ್ರೆ ತಂಡದ ವೈಷ್ಣವಿ ಹಾಗೂ ಪ್ರಶಾಂತ್​ ಸಂಬರಗಿ​ ಅವರು ಮಂಜುಗೆ ಕರೆದು ಕರೆದು ಊಟ ಮಾಡಿಸಿದ್ದಾರೆ. ಪ್ರಶಾಂತ್​ ಅವರಂತೂ ಮಂಜುಗೆ ಬಹಳ ಪ್ರೀತಿಯಿಂದ ಕೈ ತುತ್ತು ತಿನ್ನಿಸಿದ್ದಾರೆ. ಈ ಮೂಲಕ ಇಬ್ಬರ ನಡುವೆ ಒಳ್ಳೆಯ ಗೆಳೆತನ ಬೆಳೆದಿರೋದು ಸಾಬೀತಾಗಿದೆ. ಮನೆಯಲ್ಲಿ ಈ ಮೊದಲು ಹಾವು ಮುಂಗುಸಿಯಂತೆ ಇದ್ದ ಇಬ್ಬರೂ ಈಗ ತುಂಬಾನೇ ಬದಲಾಗಿದ್ದಾರೆ ಎನ್ನುತ್ತಿದ್ದಾರೆ ವೀಕ್ಷಕರು. ಕಲರ್ಸ್​ ಕನ್ನಡ ವಾಹಿನಿ ಈ ಬಗ್ಗೆ ಪ್ರೋಮೋ ಹಂಚಿಕೊಂಡಿದ್ದು, ಇಂದು (ಜುಲೈ 15) ಪೂರ್ತಿ ಎಪಿಸೋಡ್​ ಪ್ರಸಾರವಾಗಲಿದೆ.

ಚಕ್ರವರ್ತಿ ಅವರಿಂದ ಪ್ರಶಾಂತ್​ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಪ್ರಶಾಂತ್​ ಕೂಲ್​ ಆಗಿರೋಕು ಇದೂ ಕೂಡ ಒಂದು ಕಾರಣ ಇದ್ದರೂ ಇರಬಹುದು.

ಇದನ್ನೂ ಓದಿ: ಪ್ರಶಾಂತ್​-ಅರವಿಂದ್ ಕೈ ಮಿಲಾಯಿಸಿಕೊಳ್ಳುವುದನ್ನು ತಪ್ಪಿಸಿದ ಮನೆ ಮಂದಿ; ಬಿಗ್​ ಬಾಸ್​ ಮನೆಯಲ್ಲಿ ದೊಡ್ಡ ಜಗಳ

ಬಿಗ್​ ಬಾಸ್​ನಿಂದ ರಘು ಎಲಿಮಿನೇಟ್​ ಆಗೋಕೆ ಕಾರಣವಾಯ್ತು ಈ ಒಂದು ವಿಚಾರ 

Published On - 2:42 pm, Thu, 15 July 21

ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು