AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪರ್ಧಿಗಳ ವಿರುದ್ಧ ಸಿಟ್ಟಿಗೆದ್ದ ಪ್ರಶಾಂತ್​; ಬಿಗ್​ ಬಾಸ್​ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ!

ಈ ವಾರ ಅತೀ ಕಳಪೆ ಪ್ರದರ್ಶನ ನೀಡಿದವರು ಯಾರು ಎಂದು ಕೇಳಲಾಯಿತು. ಇದಕ್ಕೆ ಮನೆ ಮಂದಿಯಲ್ಲಿ ಬಹುತೇಕರು ಪ್ರಶಾಂತ್​ ಹೆಸರನ್ನು ತೆಗೆದುಕೊಂಡರು.

ಸ್ಪರ್ಧಿಗಳ ವಿರುದ್ಧ ಸಿಟ್ಟಿಗೆದ್ದ ಪ್ರಶಾಂತ್​; ಬಿಗ್​ ಬಾಸ್​ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ!
ಪ್ರಶಾಂತ್​ ಸಂಬರಗಿ
ರಾಜೇಶ್ ದುಗ್ಗುಮನೆ
| Edited By: |

Updated on: Mar 27, 2021 | 8:46 AM

Share

ಬಿಗ್​ ಬಾಸ್​ ಮನೆಯಲ್ಲಿ ವಾರದ ಅತಿ ಕಳಪೆ ಪ್ರದರ್ಶನ ನೀಡಿದವರನ್ನು ಜೈಲಿಗೆ ಹಾಕಲಾಗುತ್ತದೆ. ಈ ಮೊದಲು ಬಿಗ್​ ಬಾಸ್​ನ ಸಾಕಷ್ಟು ಸ್ಪರ್ಧಿಗಳು ಬಿಗ್​ ಬಾಸ್​ ಮನೆಯಲ್ಲಿ ಜೈಲು ಶಿಕ್ಷೆ ಅನುಭವಿಸಿ ಬಂದಿದ್ದಾರೆ. ಈ ವಾರ ಪ್ರಶಾಂತ್ ಸಂಬರಗಿ ಸರದಿ. ಅವರನ್ನು ಈ ವಾರ ಜೈಲಿಗೆ ಹಾಕಲಾಗಿದೆ. ಅಚ್ಚರಿ ಎಂದರೆ, ತಮ್ಮನ್ನು ಕಳಪೆ ಎಂದು ಘೋಷಣೆ ಮಾಡಿದ ಸ್ಪರ್ಧಿಗಳ ವಿರುದ್ಧ ಪ್ರಶಾಂತ್​ ಸಿಟ್ಟಿಗೆದ್ದಿದ್ದಾರೆ. ಅಷ್ಟೇ ಅಲ್ಲ, ಬಿಗ್​ ಬಾಸ್​ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಈ ವಾರ ಅತೀ ಕಳಪೆ ಪ್ರದರ್ಶನ ನೀಡಿದವರು ಯಾರು ಎಂದು ಕೇಳಲಾಯಿತು. ಇದಕ್ಕೆ ಮನೆ ಮಂದಿಯಲ್ಲಿ ಬಹುತೇಕರು ಪ್ರಶಾಂತ್​ ಹೆಸರನ್ನು ತೆಗೆದುಕೊಂಡರು. ಮಂಜು ಪಾವಗಡ, ದಿವ್ಯಾ ಉರುಡುಗ, ರಘು ಗೌಡ, ವೈಷ್ಣವಿ ಗೌಡ, ಶಮಂತ್​, ಶಂಕರ್​ ಅಶ್ವತ್ಥ್​, ನಿಧಿ ಸುಬ್ಬಯ್ಯ ಹಾಗೂ ಕ್ಯಾಪ್ಟನ್​ ವಿಶ್ವನಾಥ್​ ಅವರು ಕಳಪೆ ಎಂದು ಪ್ರಶಾಂತ್​ ಅವರ ಹೆಸರನ್ನು ತೆಗೆದುಕೊಂಡರು. ಪ್ರಶಾಂತ್​ ಈ ವಾರ ಸರಿಯಾಗಿ ಆಟವಾಡಿಲ್ಲ. ಅವರು ಎಲ್ಲರನ್ನೂ ಡಿಮೋಟ್​ ಮಾಡಿದರು. ಅವರು ಕೂಗಾಟ ನಡೆಸಿದರು ಎಂಬಿತ್ಯಾದಿ ಕಾರಣವನ್ನು ಮನೆ ಮಂದಿ ನೀಡಿದರು.

ಇದನ್ನು ಪ್ರಶಾಂತ್​ ಬಳಿ ಸಹಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ. ಎಲ್ಲರ ವಿರುದ್ಧವೂ ಕೂಗಾಡುತ್ತಾ ಬಿಗ್​ ಬಾಸ್​ ಮನೆ ಜೈಲಿನ ಒಳಗೆ ಹೋದರು. ಎಲ್ಲರೂ ಸೇರಿ ನನ್ನ ವಿರುದ್ಧ ಷಢ್ಯಂತರ ಮಾಡುತ್ತಿದ್ದಾರೆ ಎಂದು ಕೂಗಾಡಿದರು. ಮನೆಯ ಗುಂಪುಗಾರಿಕೆ ಸಹಿಸಿಕೊಳ್ಳಲು ನನ್ನ ಬಳಿ ಆಗುತ್ತಿಲ್ಲ. ನಾನು ಮೌನಿಯಾಗಿರುತ್ತೇನೆ. 24 ಗಂಟೆಗಳ ಜೈಲು ವಾಸದಲ್ಲಿ ಉಪವಾಸ ಮಾಡುತ್ತೇನೆ. ಊಟವನ್ನು ಮಾಡುವುದೇ ಇಲ್ಲ ಎಂದು ಬಿಗ್​ ಬಾಸ್​ ಕ್ಯಾಮಾರ ಬಳಿ ತೆರಳಿ ಪ್ರಶಾಂತ್​ ಹೇಳಿದರು.

ಪ್ರಶಾಂತ್​ ನಡವಳಿಕೆ ಬಿಗ್​ ಬಾಸ್​ ಮನೆಯಲ್ಲಿದ್ದ ಯಾರಿಗೂ ಇಷ್ಟವಾಗಿಲ್ಲ. ಅವರ ವಿರುದ್ಧ ಮನೆ ಮಂದಿ ಕೂಡ ಬೇಸರ ಹೊರಹಾಕಿದ್ದಾರೆ. ಅಲ್ಲದೆ, ಪ್ರಶಾಂತ್ ನೀವು ಊಟ ಮಾಡಬೇಕು ಎಂದು ಎಲ್ಲರನ್ನೂ ಮನ ಒಲಿಸುವ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: Divya Uruduga: ಬಿಗ್​ ಬಾಸ್​ ಮನೆಯಲ್ಲಿರುವ ದಿವ್ಯಾ ಉರುಡುಗಗೆ ಪ್ರಾಣ ಬೆದರಿಕೆ!

‘ಸ್ಕರ್ಟ್​ ಹಾಕ್ಕೊಂಡು ಮಲಗಿದ್ದಾಗ ನಮ್ಮ ತಂದೆಯೇ ಕೆಟ್ಟದಾಗಿ ನಡೆದುಕೊಂಡ್ರು’: ಬಿಗ್​ ಬಾಸ್​ ಚಂದ್ರಕಲಾ ಬದುಕಿನ ಕಹಿ ಘಟನೆ!

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್