ಸ್ಪರ್ಧಿಗಳ ವಿರುದ್ಧ ಸಿಟ್ಟಿಗೆದ್ದ ಪ್ರಶಾಂತ್​; ಬಿಗ್​ ಬಾಸ್​ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ!

ಈ ವಾರ ಅತೀ ಕಳಪೆ ಪ್ರದರ್ಶನ ನೀಡಿದವರು ಯಾರು ಎಂದು ಕೇಳಲಾಯಿತು. ಇದಕ್ಕೆ ಮನೆ ಮಂದಿಯಲ್ಲಿ ಬಹುತೇಕರು ಪ್ರಶಾಂತ್​ ಹೆಸರನ್ನು ತೆಗೆದುಕೊಂಡರು.

ಸ್ಪರ್ಧಿಗಳ ವಿರುದ್ಧ ಸಿಟ್ಟಿಗೆದ್ದ ಪ್ರಶಾಂತ್​; ಬಿಗ್​ ಬಾಸ್​ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ!
ಪ್ರಶಾಂತ್​ ಸಂಬರಗಿ
Follow us
| Updated By: guruganesh bhat

Updated on: Mar 27, 2021 | 8:46 AM

ಬಿಗ್​ ಬಾಸ್​ ಮನೆಯಲ್ಲಿ ವಾರದ ಅತಿ ಕಳಪೆ ಪ್ರದರ್ಶನ ನೀಡಿದವರನ್ನು ಜೈಲಿಗೆ ಹಾಕಲಾಗುತ್ತದೆ. ಈ ಮೊದಲು ಬಿಗ್​ ಬಾಸ್​ನ ಸಾಕಷ್ಟು ಸ್ಪರ್ಧಿಗಳು ಬಿಗ್​ ಬಾಸ್​ ಮನೆಯಲ್ಲಿ ಜೈಲು ಶಿಕ್ಷೆ ಅನುಭವಿಸಿ ಬಂದಿದ್ದಾರೆ. ಈ ವಾರ ಪ್ರಶಾಂತ್ ಸಂಬರಗಿ ಸರದಿ. ಅವರನ್ನು ಈ ವಾರ ಜೈಲಿಗೆ ಹಾಕಲಾಗಿದೆ. ಅಚ್ಚರಿ ಎಂದರೆ, ತಮ್ಮನ್ನು ಕಳಪೆ ಎಂದು ಘೋಷಣೆ ಮಾಡಿದ ಸ್ಪರ್ಧಿಗಳ ವಿರುದ್ಧ ಪ್ರಶಾಂತ್​ ಸಿಟ್ಟಿಗೆದ್ದಿದ್ದಾರೆ. ಅಷ್ಟೇ ಅಲ್ಲ, ಬಿಗ್​ ಬಾಸ್​ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಈ ವಾರ ಅತೀ ಕಳಪೆ ಪ್ರದರ್ಶನ ನೀಡಿದವರು ಯಾರು ಎಂದು ಕೇಳಲಾಯಿತು. ಇದಕ್ಕೆ ಮನೆ ಮಂದಿಯಲ್ಲಿ ಬಹುತೇಕರು ಪ್ರಶಾಂತ್​ ಹೆಸರನ್ನು ತೆಗೆದುಕೊಂಡರು. ಮಂಜು ಪಾವಗಡ, ದಿವ್ಯಾ ಉರುಡುಗ, ರಘು ಗೌಡ, ವೈಷ್ಣವಿ ಗೌಡ, ಶಮಂತ್​, ಶಂಕರ್​ ಅಶ್ವತ್ಥ್​, ನಿಧಿ ಸುಬ್ಬಯ್ಯ ಹಾಗೂ ಕ್ಯಾಪ್ಟನ್​ ವಿಶ್ವನಾಥ್​ ಅವರು ಕಳಪೆ ಎಂದು ಪ್ರಶಾಂತ್​ ಅವರ ಹೆಸರನ್ನು ತೆಗೆದುಕೊಂಡರು. ಪ್ರಶಾಂತ್​ ಈ ವಾರ ಸರಿಯಾಗಿ ಆಟವಾಡಿಲ್ಲ. ಅವರು ಎಲ್ಲರನ್ನೂ ಡಿಮೋಟ್​ ಮಾಡಿದರು. ಅವರು ಕೂಗಾಟ ನಡೆಸಿದರು ಎಂಬಿತ್ಯಾದಿ ಕಾರಣವನ್ನು ಮನೆ ಮಂದಿ ನೀಡಿದರು.

ಇದನ್ನು ಪ್ರಶಾಂತ್​ ಬಳಿ ಸಹಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ. ಎಲ್ಲರ ವಿರುದ್ಧವೂ ಕೂಗಾಡುತ್ತಾ ಬಿಗ್​ ಬಾಸ್​ ಮನೆ ಜೈಲಿನ ಒಳಗೆ ಹೋದರು. ಎಲ್ಲರೂ ಸೇರಿ ನನ್ನ ವಿರುದ್ಧ ಷಢ್ಯಂತರ ಮಾಡುತ್ತಿದ್ದಾರೆ ಎಂದು ಕೂಗಾಡಿದರು. ಮನೆಯ ಗುಂಪುಗಾರಿಕೆ ಸಹಿಸಿಕೊಳ್ಳಲು ನನ್ನ ಬಳಿ ಆಗುತ್ತಿಲ್ಲ. ನಾನು ಮೌನಿಯಾಗಿರುತ್ತೇನೆ. 24 ಗಂಟೆಗಳ ಜೈಲು ವಾಸದಲ್ಲಿ ಉಪವಾಸ ಮಾಡುತ್ತೇನೆ. ಊಟವನ್ನು ಮಾಡುವುದೇ ಇಲ್ಲ ಎಂದು ಬಿಗ್​ ಬಾಸ್​ ಕ್ಯಾಮಾರ ಬಳಿ ತೆರಳಿ ಪ್ರಶಾಂತ್​ ಹೇಳಿದರು.

ಪ್ರಶಾಂತ್​ ನಡವಳಿಕೆ ಬಿಗ್​ ಬಾಸ್​ ಮನೆಯಲ್ಲಿದ್ದ ಯಾರಿಗೂ ಇಷ್ಟವಾಗಿಲ್ಲ. ಅವರ ವಿರುದ್ಧ ಮನೆ ಮಂದಿ ಕೂಡ ಬೇಸರ ಹೊರಹಾಕಿದ್ದಾರೆ. ಅಲ್ಲದೆ, ಪ್ರಶಾಂತ್ ನೀವು ಊಟ ಮಾಡಬೇಕು ಎಂದು ಎಲ್ಲರನ್ನೂ ಮನ ಒಲಿಸುವ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: Divya Uruduga: ಬಿಗ್​ ಬಾಸ್​ ಮನೆಯಲ್ಲಿರುವ ದಿವ್ಯಾ ಉರುಡುಗಗೆ ಪ್ರಾಣ ಬೆದರಿಕೆ!

‘ಸ್ಕರ್ಟ್​ ಹಾಕ್ಕೊಂಡು ಮಲಗಿದ್ದಾಗ ನಮ್ಮ ತಂದೆಯೇ ಕೆಟ್ಟದಾಗಿ ನಡೆದುಕೊಂಡ್ರು’: ಬಿಗ್​ ಬಾಸ್​ ಚಂದ್ರಕಲಾ ಬದುಕಿನ ಕಹಿ ಘಟನೆ!

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ