AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪರ್ಧಿಗಳ ವಿರುದ್ಧ ಸಿಟ್ಟಿಗೆದ್ದ ಪ್ರಶಾಂತ್​; ಬಿಗ್​ ಬಾಸ್​ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ!

ಈ ವಾರ ಅತೀ ಕಳಪೆ ಪ್ರದರ್ಶನ ನೀಡಿದವರು ಯಾರು ಎಂದು ಕೇಳಲಾಯಿತು. ಇದಕ್ಕೆ ಮನೆ ಮಂದಿಯಲ್ಲಿ ಬಹುತೇಕರು ಪ್ರಶಾಂತ್​ ಹೆಸರನ್ನು ತೆಗೆದುಕೊಂಡರು.

ಸ್ಪರ್ಧಿಗಳ ವಿರುದ್ಧ ಸಿಟ್ಟಿಗೆದ್ದ ಪ್ರಶಾಂತ್​; ಬಿಗ್​ ಬಾಸ್​ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ!
ಪ್ರಶಾಂತ್​ ಸಂಬರಗಿ
ರಾಜೇಶ್ ದುಗ್ಗುಮನೆ
| Updated By: guruganesh bhat|

Updated on: Mar 27, 2021 | 8:46 AM

Share

ಬಿಗ್​ ಬಾಸ್​ ಮನೆಯಲ್ಲಿ ವಾರದ ಅತಿ ಕಳಪೆ ಪ್ರದರ್ಶನ ನೀಡಿದವರನ್ನು ಜೈಲಿಗೆ ಹಾಕಲಾಗುತ್ತದೆ. ಈ ಮೊದಲು ಬಿಗ್​ ಬಾಸ್​ನ ಸಾಕಷ್ಟು ಸ್ಪರ್ಧಿಗಳು ಬಿಗ್​ ಬಾಸ್​ ಮನೆಯಲ್ಲಿ ಜೈಲು ಶಿಕ್ಷೆ ಅನುಭವಿಸಿ ಬಂದಿದ್ದಾರೆ. ಈ ವಾರ ಪ್ರಶಾಂತ್ ಸಂಬರಗಿ ಸರದಿ. ಅವರನ್ನು ಈ ವಾರ ಜೈಲಿಗೆ ಹಾಕಲಾಗಿದೆ. ಅಚ್ಚರಿ ಎಂದರೆ, ತಮ್ಮನ್ನು ಕಳಪೆ ಎಂದು ಘೋಷಣೆ ಮಾಡಿದ ಸ್ಪರ್ಧಿಗಳ ವಿರುದ್ಧ ಪ್ರಶಾಂತ್​ ಸಿಟ್ಟಿಗೆದ್ದಿದ್ದಾರೆ. ಅಷ್ಟೇ ಅಲ್ಲ, ಬಿಗ್​ ಬಾಸ್​ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಈ ವಾರ ಅತೀ ಕಳಪೆ ಪ್ರದರ್ಶನ ನೀಡಿದವರು ಯಾರು ಎಂದು ಕೇಳಲಾಯಿತು. ಇದಕ್ಕೆ ಮನೆ ಮಂದಿಯಲ್ಲಿ ಬಹುತೇಕರು ಪ್ರಶಾಂತ್​ ಹೆಸರನ್ನು ತೆಗೆದುಕೊಂಡರು. ಮಂಜು ಪಾವಗಡ, ದಿವ್ಯಾ ಉರುಡುಗ, ರಘು ಗೌಡ, ವೈಷ್ಣವಿ ಗೌಡ, ಶಮಂತ್​, ಶಂಕರ್​ ಅಶ್ವತ್ಥ್​, ನಿಧಿ ಸುಬ್ಬಯ್ಯ ಹಾಗೂ ಕ್ಯಾಪ್ಟನ್​ ವಿಶ್ವನಾಥ್​ ಅವರು ಕಳಪೆ ಎಂದು ಪ್ರಶಾಂತ್​ ಅವರ ಹೆಸರನ್ನು ತೆಗೆದುಕೊಂಡರು. ಪ್ರಶಾಂತ್​ ಈ ವಾರ ಸರಿಯಾಗಿ ಆಟವಾಡಿಲ್ಲ. ಅವರು ಎಲ್ಲರನ್ನೂ ಡಿಮೋಟ್​ ಮಾಡಿದರು. ಅವರು ಕೂಗಾಟ ನಡೆಸಿದರು ಎಂಬಿತ್ಯಾದಿ ಕಾರಣವನ್ನು ಮನೆ ಮಂದಿ ನೀಡಿದರು.

ಇದನ್ನು ಪ್ರಶಾಂತ್​ ಬಳಿ ಸಹಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ. ಎಲ್ಲರ ವಿರುದ್ಧವೂ ಕೂಗಾಡುತ್ತಾ ಬಿಗ್​ ಬಾಸ್​ ಮನೆ ಜೈಲಿನ ಒಳಗೆ ಹೋದರು. ಎಲ್ಲರೂ ಸೇರಿ ನನ್ನ ವಿರುದ್ಧ ಷಢ್ಯಂತರ ಮಾಡುತ್ತಿದ್ದಾರೆ ಎಂದು ಕೂಗಾಡಿದರು. ಮನೆಯ ಗುಂಪುಗಾರಿಕೆ ಸಹಿಸಿಕೊಳ್ಳಲು ನನ್ನ ಬಳಿ ಆಗುತ್ತಿಲ್ಲ. ನಾನು ಮೌನಿಯಾಗಿರುತ್ತೇನೆ. 24 ಗಂಟೆಗಳ ಜೈಲು ವಾಸದಲ್ಲಿ ಉಪವಾಸ ಮಾಡುತ್ತೇನೆ. ಊಟವನ್ನು ಮಾಡುವುದೇ ಇಲ್ಲ ಎಂದು ಬಿಗ್​ ಬಾಸ್​ ಕ್ಯಾಮಾರ ಬಳಿ ತೆರಳಿ ಪ್ರಶಾಂತ್​ ಹೇಳಿದರು.

ಪ್ರಶಾಂತ್​ ನಡವಳಿಕೆ ಬಿಗ್​ ಬಾಸ್​ ಮನೆಯಲ್ಲಿದ್ದ ಯಾರಿಗೂ ಇಷ್ಟವಾಗಿಲ್ಲ. ಅವರ ವಿರುದ್ಧ ಮನೆ ಮಂದಿ ಕೂಡ ಬೇಸರ ಹೊರಹಾಕಿದ್ದಾರೆ. ಅಲ್ಲದೆ, ಪ್ರಶಾಂತ್ ನೀವು ಊಟ ಮಾಡಬೇಕು ಎಂದು ಎಲ್ಲರನ್ನೂ ಮನ ಒಲಿಸುವ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: Divya Uruduga: ಬಿಗ್​ ಬಾಸ್​ ಮನೆಯಲ್ಲಿರುವ ದಿವ್ಯಾ ಉರುಡುಗಗೆ ಪ್ರಾಣ ಬೆದರಿಕೆ!

‘ಸ್ಕರ್ಟ್​ ಹಾಕ್ಕೊಂಡು ಮಲಗಿದ್ದಾಗ ನಮ್ಮ ತಂದೆಯೇ ಕೆಟ್ಟದಾಗಿ ನಡೆದುಕೊಂಡ್ರು’: ಬಿಗ್​ ಬಾಸ್​ ಚಂದ್ರಕಲಾ ಬದುಕಿನ ಕಹಿ ಘಟನೆ!

ಆಂಗ್ಲರಿಗೆ ಉಚಿತವಾಗಿ ತನ್ನ ವಿಕೆಟ್ ನೀಡಿದ ಶುಭ್​ಮನ್ ಗಿಲ್
ಆಂಗ್ಲರಿಗೆ ಉಚಿತವಾಗಿ ತನ್ನ ವಿಕೆಟ್ ನೀಡಿದ ಶುಭ್​ಮನ್ ಗಿಲ್
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ
‘ಅದೃಷ್ಟ ದೇವತೆ ಬಟ್ಟೆ ಬಿಚ್ಚಿಸುವವರು ದೇವರಿಗೆ ವಂದಿಸುತ್ತಾರೆ’; ಪ್ರಥಮ್
‘ಅದೃಷ್ಟ ದೇವತೆ ಬಟ್ಟೆ ಬಿಚ್ಚಿಸುವವರು ದೇವರಿಗೆ ವಂದಿಸುತ್ತಾರೆ’; ಪ್ರಥಮ್