AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪರ್ಧಿಗಳ ವಿರುದ್ಧ ಸಿಟ್ಟಿಗೆದ್ದ ಪ್ರಶಾಂತ್​; ಬಿಗ್​ ಬಾಸ್​ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ!

ಈ ವಾರ ಅತೀ ಕಳಪೆ ಪ್ರದರ್ಶನ ನೀಡಿದವರು ಯಾರು ಎಂದು ಕೇಳಲಾಯಿತು. ಇದಕ್ಕೆ ಮನೆ ಮಂದಿಯಲ್ಲಿ ಬಹುತೇಕರು ಪ್ರಶಾಂತ್​ ಹೆಸರನ್ನು ತೆಗೆದುಕೊಂಡರು.

ಸ್ಪರ್ಧಿಗಳ ವಿರುದ್ಧ ಸಿಟ್ಟಿಗೆದ್ದ ಪ್ರಶಾಂತ್​; ಬಿಗ್​ ಬಾಸ್​ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ!
ಪ್ರಶಾಂತ್​ ಸಂಬರಗಿ
ರಾಜೇಶ್ ದುಗ್ಗುಮನೆ
| Edited By: |

Updated on: Mar 27, 2021 | 8:46 AM

Share

ಬಿಗ್​ ಬಾಸ್​ ಮನೆಯಲ್ಲಿ ವಾರದ ಅತಿ ಕಳಪೆ ಪ್ರದರ್ಶನ ನೀಡಿದವರನ್ನು ಜೈಲಿಗೆ ಹಾಕಲಾಗುತ್ತದೆ. ಈ ಮೊದಲು ಬಿಗ್​ ಬಾಸ್​ನ ಸಾಕಷ್ಟು ಸ್ಪರ್ಧಿಗಳು ಬಿಗ್​ ಬಾಸ್​ ಮನೆಯಲ್ಲಿ ಜೈಲು ಶಿಕ್ಷೆ ಅನುಭವಿಸಿ ಬಂದಿದ್ದಾರೆ. ಈ ವಾರ ಪ್ರಶಾಂತ್ ಸಂಬರಗಿ ಸರದಿ. ಅವರನ್ನು ಈ ವಾರ ಜೈಲಿಗೆ ಹಾಕಲಾಗಿದೆ. ಅಚ್ಚರಿ ಎಂದರೆ, ತಮ್ಮನ್ನು ಕಳಪೆ ಎಂದು ಘೋಷಣೆ ಮಾಡಿದ ಸ್ಪರ್ಧಿಗಳ ವಿರುದ್ಧ ಪ್ರಶಾಂತ್​ ಸಿಟ್ಟಿಗೆದ್ದಿದ್ದಾರೆ. ಅಷ್ಟೇ ಅಲ್ಲ, ಬಿಗ್​ ಬಾಸ್​ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಈ ವಾರ ಅತೀ ಕಳಪೆ ಪ್ರದರ್ಶನ ನೀಡಿದವರು ಯಾರು ಎಂದು ಕೇಳಲಾಯಿತು. ಇದಕ್ಕೆ ಮನೆ ಮಂದಿಯಲ್ಲಿ ಬಹುತೇಕರು ಪ್ರಶಾಂತ್​ ಹೆಸರನ್ನು ತೆಗೆದುಕೊಂಡರು. ಮಂಜು ಪಾವಗಡ, ದಿವ್ಯಾ ಉರುಡುಗ, ರಘು ಗೌಡ, ವೈಷ್ಣವಿ ಗೌಡ, ಶಮಂತ್​, ಶಂಕರ್​ ಅಶ್ವತ್ಥ್​, ನಿಧಿ ಸುಬ್ಬಯ್ಯ ಹಾಗೂ ಕ್ಯಾಪ್ಟನ್​ ವಿಶ್ವನಾಥ್​ ಅವರು ಕಳಪೆ ಎಂದು ಪ್ರಶಾಂತ್​ ಅವರ ಹೆಸರನ್ನು ತೆಗೆದುಕೊಂಡರು. ಪ್ರಶಾಂತ್​ ಈ ವಾರ ಸರಿಯಾಗಿ ಆಟವಾಡಿಲ್ಲ. ಅವರು ಎಲ್ಲರನ್ನೂ ಡಿಮೋಟ್​ ಮಾಡಿದರು. ಅವರು ಕೂಗಾಟ ನಡೆಸಿದರು ಎಂಬಿತ್ಯಾದಿ ಕಾರಣವನ್ನು ಮನೆ ಮಂದಿ ನೀಡಿದರು.

ಇದನ್ನು ಪ್ರಶಾಂತ್​ ಬಳಿ ಸಹಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ. ಎಲ್ಲರ ವಿರುದ್ಧವೂ ಕೂಗಾಡುತ್ತಾ ಬಿಗ್​ ಬಾಸ್​ ಮನೆ ಜೈಲಿನ ಒಳಗೆ ಹೋದರು. ಎಲ್ಲರೂ ಸೇರಿ ನನ್ನ ವಿರುದ್ಧ ಷಢ್ಯಂತರ ಮಾಡುತ್ತಿದ್ದಾರೆ ಎಂದು ಕೂಗಾಡಿದರು. ಮನೆಯ ಗುಂಪುಗಾರಿಕೆ ಸಹಿಸಿಕೊಳ್ಳಲು ನನ್ನ ಬಳಿ ಆಗುತ್ತಿಲ್ಲ. ನಾನು ಮೌನಿಯಾಗಿರುತ್ತೇನೆ. 24 ಗಂಟೆಗಳ ಜೈಲು ವಾಸದಲ್ಲಿ ಉಪವಾಸ ಮಾಡುತ್ತೇನೆ. ಊಟವನ್ನು ಮಾಡುವುದೇ ಇಲ್ಲ ಎಂದು ಬಿಗ್​ ಬಾಸ್​ ಕ್ಯಾಮಾರ ಬಳಿ ತೆರಳಿ ಪ್ರಶಾಂತ್​ ಹೇಳಿದರು.

ಪ್ರಶಾಂತ್​ ನಡವಳಿಕೆ ಬಿಗ್​ ಬಾಸ್​ ಮನೆಯಲ್ಲಿದ್ದ ಯಾರಿಗೂ ಇಷ್ಟವಾಗಿಲ್ಲ. ಅವರ ವಿರುದ್ಧ ಮನೆ ಮಂದಿ ಕೂಡ ಬೇಸರ ಹೊರಹಾಕಿದ್ದಾರೆ. ಅಲ್ಲದೆ, ಪ್ರಶಾಂತ್ ನೀವು ಊಟ ಮಾಡಬೇಕು ಎಂದು ಎಲ್ಲರನ್ನೂ ಮನ ಒಲಿಸುವ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: Divya Uruduga: ಬಿಗ್​ ಬಾಸ್​ ಮನೆಯಲ್ಲಿರುವ ದಿವ್ಯಾ ಉರುಡುಗಗೆ ಪ್ರಾಣ ಬೆದರಿಕೆ!

‘ಸ್ಕರ್ಟ್​ ಹಾಕ್ಕೊಂಡು ಮಲಗಿದ್ದಾಗ ನಮ್ಮ ತಂದೆಯೇ ಕೆಟ್ಟದಾಗಿ ನಡೆದುಕೊಂಡ್ರು’: ಬಿಗ್​ ಬಾಸ್​ ಚಂದ್ರಕಲಾ ಬದುಕಿನ ಕಹಿ ಘಟನೆ!

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್