AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪರ್ಧಿಗಳ ವಿರುದ್ಧ ಸಿಟ್ಟಿಗೆದ್ದ ಪ್ರಶಾಂತ್​; ಬಿಗ್​ ಬಾಸ್​ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ!

ಈ ವಾರ ಅತೀ ಕಳಪೆ ಪ್ರದರ್ಶನ ನೀಡಿದವರು ಯಾರು ಎಂದು ಕೇಳಲಾಯಿತು. ಇದಕ್ಕೆ ಮನೆ ಮಂದಿಯಲ್ಲಿ ಬಹುತೇಕರು ಪ್ರಶಾಂತ್​ ಹೆಸರನ್ನು ತೆಗೆದುಕೊಂಡರು.

ಸ್ಪರ್ಧಿಗಳ ವಿರುದ್ಧ ಸಿಟ್ಟಿಗೆದ್ದ ಪ್ರಶಾಂತ್​; ಬಿಗ್​ ಬಾಸ್​ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ!
ಪ್ರಶಾಂತ್​ ಸಂಬರಗಿ
ರಾಜೇಶ್ ದುಗ್ಗುಮನೆ
| Edited By: |

Updated on: Mar 27, 2021 | 8:46 AM

Share

ಬಿಗ್​ ಬಾಸ್​ ಮನೆಯಲ್ಲಿ ವಾರದ ಅತಿ ಕಳಪೆ ಪ್ರದರ್ಶನ ನೀಡಿದವರನ್ನು ಜೈಲಿಗೆ ಹಾಕಲಾಗುತ್ತದೆ. ಈ ಮೊದಲು ಬಿಗ್​ ಬಾಸ್​ನ ಸಾಕಷ್ಟು ಸ್ಪರ್ಧಿಗಳು ಬಿಗ್​ ಬಾಸ್​ ಮನೆಯಲ್ಲಿ ಜೈಲು ಶಿಕ್ಷೆ ಅನುಭವಿಸಿ ಬಂದಿದ್ದಾರೆ. ಈ ವಾರ ಪ್ರಶಾಂತ್ ಸಂಬರಗಿ ಸರದಿ. ಅವರನ್ನು ಈ ವಾರ ಜೈಲಿಗೆ ಹಾಕಲಾಗಿದೆ. ಅಚ್ಚರಿ ಎಂದರೆ, ತಮ್ಮನ್ನು ಕಳಪೆ ಎಂದು ಘೋಷಣೆ ಮಾಡಿದ ಸ್ಪರ್ಧಿಗಳ ವಿರುದ್ಧ ಪ್ರಶಾಂತ್​ ಸಿಟ್ಟಿಗೆದ್ದಿದ್ದಾರೆ. ಅಷ್ಟೇ ಅಲ್ಲ, ಬಿಗ್​ ಬಾಸ್​ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಈ ವಾರ ಅತೀ ಕಳಪೆ ಪ್ರದರ್ಶನ ನೀಡಿದವರು ಯಾರು ಎಂದು ಕೇಳಲಾಯಿತು. ಇದಕ್ಕೆ ಮನೆ ಮಂದಿಯಲ್ಲಿ ಬಹುತೇಕರು ಪ್ರಶಾಂತ್​ ಹೆಸರನ್ನು ತೆಗೆದುಕೊಂಡರು. ಮಂಜು ಪಾವಗಡ, ದಿವ್ಯಾ ಉರುಡುಗ, ರಘು ಗೌಡ, ವೈಷ್ಣವಿ ಗೌಡ, ಶಮಂತ್​, ಶಂಕರ್​ ಅಶ್ವತ್ಥ್​, ನಿಧಿ ಸುಬ್ಬಯ್ಯ ಹಾಗೂ ಕ್ಯಾಪ್ಟನ್​ ವಿಶ್ವನಾಥ್​ ಅವರು ಕಳಪೆ ಎಂದು ಪ್ರಶಾಂತ್​ ಅವರ ಹೆಸರನ್ನು ತೆಗೆದುಕೊಂಡರು. ಪ್ರಶಾಂತ್​ ಈ ವಾರ ಸರಿಯಾಗಿ ಆಟವಾಡಿಲ್ಲ. ಅವರು ಎಲ್ಲರನ್ನೂ ಡಿಮೋಟ್​ ಮಾಡಿದರು. ಅವರು ಕೂಗಾಟ ನಡೆಸಿದರು ಎಂಬಿತ್ಯಾದಿ ಕಾರಣವನ್ನು ಮನೆ ಮಂದಿ ನೀಡಿದರು.

ಇದನ್ನು ಪ್ರಶಾಂತ್​ ಬಳಿ ಸಹಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ. ಎಲ್ಲರ ವಿರುದ್ಧವೂ ಕೂಗಾಡುತ್ತಾ ಬಿಗ್​ ಬಾಸ್​ ಮನೆ ಜೈಲಿನ ಒಳಗೆ ಹೋದರು. ಎಲ್ಲರೂ ಸೇರಿ ನನ್ನ ವಿರುದ್ಧ ಷಢ್ಯಂತರ ಮಾಡುತ್ತಿದ್ದಾರೆ ಎಂದು ಕೂಗಾಡಿದರು. ಮನೆಯ ಗುಂಪುಗಾರಿಕೆ ಸಹಿಸಿಕೊಳ್ಳಲು ನನ್ನ ಬಳಿ ಆಗುತ್ತಿಲ್ಲ. ನಾನು ಮೌನಿಯಾಗಿರುತ್ತೇನೆ. 24 ಗಂಟೆಗಳ ಜೈಲು ವಾಸದಲ್ಲಿ ಉಪವಾಸ ಮಾಡುತ್ತೇನೆ. ಊಟವನ್ನು ಮಾಡುವುದೇ ಇಲ್ಲ ಎಂದು ಬಿಗ್​ ಬಾಸ್​ ಕ್ಯಾಮಾರ ಬಳಿ ತೆರಳಿ ಪ್ರಶಾಂತ್​ ಹೇಳಿದರು.

ಪ್ರಶಾಂತ್​ ನಡವಳಿಕೆ ಬಿಗ್​ ಬಾಸ್​ ಮನೆಯಲ್ಲಿದ್ದ ಯಾರಿಗೂ ಇಷ್ಟವಾಗಿಲ್ಲ. ಅವರ ವಿರುದ್ಧ ಮನೆ ಮಂದಿ ಕೂಡ ಬೇಸರ ಹೊರಹಾಕಿದ್ದಾರೆ. ಅಲ್ಲದೆ, ಪ್ರಶಾಂತ್ ನೀವು ಊಟ ಮಾಡಬೇಕು ಎಂದು ಎಲ್ಲರನ್ನೂ ಮನ ಒಲಿಸುವ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: Divya Uruduga: ಬಿಗ್​ ಬಾಸ್​ ಮನೆಯಲ್ಲಿರುವ ದಿವ್ಯಾ ಉರುಡುಗಗೆ ಪ್ರಾಣ ಬೆದರಿಕೆ!

‘ಸ್ಕರ್ಟ್​ ಹಾಕ್ಕೊಂಡು ಮಲಗಿದ್ದಾಗ ನಮ್ಮ ತಂದೆಯೇ ಕೆಟ್ಟದಾಗಿ ನಡೆದುಕೊಂಡ್ರು’: ಬಿಗ್​ ಬಾಸ್​ ಚಂದ್ರಕಲಾ ಬದುಕಿನ ಕಹಿ ಘಟನೆ!

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!