AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ತುಪ್ಪದ ವಿಚಾರಕ್ಕೆ ಜಗಳ ಮಾಡಿಕೊಂಡಿದ್ದ ಪ್ರಶಾಂತ್​ಗೆ ಗೆಳೆಯರು ಕೊಟ್ರು ಅಚ್ಚರಿಯ ಗಿಫ್ಟ್​

ಬಿಗ್​ ಬಾಸ್​ ಮನೆಯಲ್ಲಿ ತುಪ್ಪ ಖಾಲಿ ಮಾಡಿದ್ದಾರೆ ಎನ್ನುವ ಆರೋಪ ಪ್ರಶಾಂತ್​ ಸಂಬರಗಿ ಅವರ ಮೇಲೆ ಬಂದಿತ್ತು. ಅಲ್ಲದೆ, ಮನೆಯಲ್ಲಿ ಎರಡು ದಿನ ಈ ವಿಚಾರ ಭಾರೀ ಚರ್ಚೆ ಆಗಿತ್ತು.

ಬಿಗ್​ ಬಾಸ್​ ಮನೆಯಲ್ಲಿ ತುಪ್ಪದ ವಿಚಾರಕ್ಕೆ ಜಗಳ ಮಾಡಿಕೊಂಡಿದ್ದ ಪ್ರಶಾಂತ್​ಗೆ ಗೆಳೆಯರು ಕೊಟ್ರು ಅಚ್ಚರಿಯ ಗಿಫ್ಟ್​
ಪ್ರಶಾಂತ್​ ಸಂಬರಗಿ
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: May 14, 2021 | 7:19 AM

Share

ಪ್ರಶಾಂತ್​ ಸಂಬರಗಿ ಸಾಮಾಜಿಕ ಕಾರ್ಯಕರ್ತನಾಗಿ ಗುರುತಿಸಿಕೊಂಡವರು. ಅವರು ಬಿಗ್​ ಬಾಸ್​ ಮನೆಗೆ ಹೋಗುವುದಕ್ಕೂ ಮೊದಲು ಸಾಕಷ್ಟು ವಿಚಾರಗಳ ಬಗ್ಗೆ ಧ್ವನಿ ಎತ್ತಿದ್ದರು. ಸಾಕಷ್ಟು ವಿವಾದಗಳನ್ನು ಕೂಡ ಮೈಮೇಲೆ ಎಳೆದುಕೊಂಡಿದ್ದರು. ಹೀಗಾಗಿ, ಬಿಗ್​ ಬಾಸ್​ ಮನೆಗೆ ಸೇರಿದ ನಂತರ ಅವರು ವಿವಾದ ಮಾಡಿಯೇ ಮಾಡುತ್ತಾರೆ ಎನ್ನುವುದು ಅನೇಕರ ನಂಬಿಕೆ ಆಗಿತ್ತು. ಮನೆಯಲ್ಲಿ ಸದಾ ಧ್ವನಿ ಏರಿಸಿಕೊಂಡು ಮಾತನಾಡುವ ಪ್ರಶಾಂತ್​ ತುಪ್ಪದ ವಿಚಾರಕ್ಕೆ ಹೆಚ್ಚು ಸುದ್ದಿಯಾಗಿದ್ದರು. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ಅವರಿಗೆ ಅಚ್ಚರಿಯ ಗಿಫ್ಟ್ ಒಂದು ಸಿಕ್ಕಿದೆ.

ಬಿಗ್​ ಬಾಸ್​ ಮನೆಯಲ್ಲಿ ತುಪ್ಪ ಖಾಲಿ ಮಾಡಿದ್ದಾರೆ ಎನ್ನುವ ಆರೋಪ ಪ್ರಶಾಂತ್​ ಸಂಬರಗಿ ಅವರ ಮೇಲೆ ಬಂದಿತ್ತು. ಅಲ್ಲದೆ, ಮನೆಯಲ್ಲಿ ಎರಡು ದಿನ ಈ ವಿಚಾರ ಭಾರೀ ಚರ್ಚೆ ಆಗಿತ್ತು. ಇದಕ್ಕೆ ಪ್ರಶಾಂತ್​ ತುಂಬಾನೇ ಬೇಸರಗೊಂಡಿದ್ದರು. ಅಷ್ಟೇ ಅಲ್ಲ, ‘ತುಪ್ಪಾ ತಿಂದಿದ್ದೇ ತಪ್ಪಾ?’ ಎನ್ನುವ ಪುಸ್ತಕ ಬರೆಯುವುದಾಗಿ ಹೇಳಿದ್ದರು. ವೀಕೆಂಡ್​ನಲ್ಲೂ ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗಿತ್ತು.

ಈಗ ಎಲ್ಲಾ ಸ್ಪರ್ಧಿಗಳು ಮನೆಯಿಂದ ಹೊರ ಬಂದಿದ್ದಾರೆ. ಪ್ರತೀ ಸ್ಪರ್ಧಿಗಳು ಲೈವ್​​ನಲ್ಲಿ ಬಂದು ಅಭಿಮಾನಿಗಳ ಜತೆ ಮಾತುಕತೆ ನಡೆಸುತ್ತಿದ್ದಾರೆ. ಪ್ರಶಾಂತ್​ ಸಂಬರಗಿ ಕೂಡ ಕಲರ್ಸ್​ ಕನ್ನಡ ವಾಹಿನಿ ಫೇಸ್​ಬುಕ್​ಲೈವ್​ನಲ್ಲಿ ಬಂದು ಮಾತನಾಡಿದ್ದಾರೆ. ಈ ವೇಳೆ ಅವರು ಗೆಳೆಯರು ಕಳಿಸಿಕೊಟ್ಟ ವಸ್ತು ಒಂದರ ಬಗ್ಗೆ ಮಾತನಾಡಿದ್ದಾರೆ.

ನನ್ನ ಬೆಸ್ಟ್​ ಫ್ರೆಂಡ್ಸ್​ 5 ಕೆಜಿ ತುಪ್ಪ ಕಳಿಸಿಕೊಟ್ಟಿದ್ದಾರೆ. ನೀನು ತುಂಬಾ ಸಣ್ಣ ಆಗಿದೀಯಾ. ಅಲ್ಲಿ ನಿನಗೆ ಊಟ ಸರಿ ಸಿಕ್ಕಿದೆಯೋ ಇಲ್ಲವೋ ಅನ್ನೋದು ಗೊತ್ತಿಲ್ಲ. ಹೀಗಾಗಿ, ಇದನ್ನು ಬಳಸಿಕೋ ಎಂದು ಕೊಟ್ಟಿದ್ದಾರೆ. ಅವರು ಸರ್ಕ್ಯಾಸ್ಟಿಕ್​ ಆಗಿ ತಂದುಕೊಟ್ಟರೋ ಗೊತ್ತಿಲ್ಲ. ಒಟ್ಟಿನಲ್ಲಿ ಕೊಟ್ಟಿದ್ದಾರೆ ಎಂದು ಪ್ರಶಾಂತ್ ಲೈವ್​ನಲ್ಲಿ ಹೇಳಿಕೊಂಡರು.

ಇದೇ ಲೈವ್​ನಲ್ಲಿ ಮಂಜು ಬಗ್ಗೆ ಪ್ರಶಾಂತ್​ ಮಾತನಾಡಿದ್ದಾರೆ. ‘ಮಂಜು ಸ್ಕ್ರಿಪ್ಟೆಡ್​ ಲೈನ್​ಗಳನ್ನು ಹೆಚ್ಚು ಬಳಕೆ ಮಾಡುತ್ತಿದ್ದರು. ಹೀಗಾಗಿ, ಬಿಗ್​ ಬಾಸ್​ ಮನೆಯಲ್ಲಿ ಅವರಿಗೆ ಕಷ್ಟವಾಗುತ್ತಿತ್ತು. ಯಾವುದಾದರೂ ಸಿನಿಮಾ ತೆಗೆದುಕೊಂಡರೆ ಹೀರೋ ಹೀರೋನೆ, ಕಾಮಿಡಿಯನ್​ ಕಾಮಿಡಿಯನ್ನೇ. ಕಾಮಿಡಿಯನ್​ ಯಾವಾಗಲೂ ಹೀರೋ ಆಗೋಕೆ ಆಗಲ್ಲ. ಮಂಜು ಅವರ ಸ್ಟಫ್​ ಬರುಬರುತ್ತಾ ಕಡಿಮೆ ಆಯಿತು’ ಎಂದು ಪ್ರಶಾಂತ್ ಹೇಳಿದ್ದರು.

ಇದನ್ನೂ ಓದಿ: ಮಂಜು ಕೇವಲ ಕಾಮಿಡಿಯನ್​, ಹೀರೋ ಆಗಲ್ಲ; ಮನೆಯಿಂದ ಹೊರ ಬಂದ ಸಂಬರಗಿ ಮಾತು

‘ನಾನು ಕಿತ್ತೂರು ರಾಣಿ ಚೆನ್ನಮ್ಮ ಕುಟುಂಬದವನು’; ಕೊನೆಯ ದಿನ ಅಚ್ಚರಿಯ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ಸಂಬರಗಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ