AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ತುಪ್ಪದ ವಿಚಾರಕ್ಕೆ ಜಗಳ ಮಾಡಿಕೊಂಡಿದ್ದ ಪ್ರಶಾಂತ್​ಗೆ ಗೆಳೆಯರು ಕೊಟ್ರು ಅಚ್ಚರಿಯ ಗಿಫ್ಟ್​

ಬಿಗ್​ ಬಾಸ್​ ಮನೆಯಲ್ಲಿ ತುಪ್ಪ ಖಾಲಿ ಮಾಡಿದ್ದಾರೆ ಎನ್ನುವ ಆರೋಪ ಪ್ರಶಾಂತ್​ ಸಂಬರಗಿ ಅವರ ಮೇಲೆ ಬಂದಿತ್ತು. ಅಲ್ಲದೆ, ಮನೆಯಲ್ಲಿ ಎರಡು ದಿನ ಈ ವಿಚಾರ ಭಾರೀ ಚರ್ಚೆ ಆಗಿತ್ತು.

ಬಿಗ್​ ಬಾಸ್​ ಮನೆಯಲ್ಲಿ ತುಪ್ಪದ ವಿಚಾರಕ್ಕೆ ಜಗಳ ಮಾಡಿಕೊಂಡಿದ್ದ ಪ್ರಶಾಂತ್​ಗೆ ಗೆಳೆಯರು ಕೊಟ್ರು ಅಚ್ಚರಿಯ ಗಿಫ್ಟ್​
ಪ್ರಶಾಂತ್​ ಸಂಬರಗಿ
ರಾಜೇಶ್ ದುಗ್ಗುಮನೆ
| Edited By: |

Updated on: May 14, 2021 | 7:19 AM

Share

ಪ್ರಶಾಂತ್​ ಸಂಬರಗಿ ಸಾಮಾಜಿಕ ಕಾರ್ಯಕರ್ತನಾಗಿ ಗುರುತಿಸಿಕೊಂಡವರು. ಅವರು ಬಿಗ್​ ಬಾಸ್​ ಮನೆಗೆ ಹೋಗುವುದಕ್ಕೂ ಮೊದಲು ಸಾಕಷ್ಟು ವಿಚಾರಗಳ ಬಗ್ಗೆ ಧ್ವನಿ ಎತ್ತಿದ್ದರು. ಸಾಕಷ್ಟು ವಿವಾದಗಳನ್ನು ಕೂಡ ಮೈಮೇಲೆ ಎಳೆದುಕೊಂಡಿದ್ದರು. ಹೀಗಾಗಿ, ಬಿಗ್​ ಬಾಸ್​ ಮನೆಗೆ ಸೇರಿದ ನಂತರ ಅವರು ವಿವಾದ ಮಾಡಿಯೇ ಮಾಡುತ್ತಾರೆ ಎನ್ನುವುದು ಅನೇಕರ ನಂಬಿಕೆ ಆಗಿತ್ತು. ಮನೆಯಲ್ಲಿ ಸದಾ ಧ್ವನಿ ಏರಿಸಿಕೊಂಡು ಮಾತನಾಡುವ ಪ್ರಶಾಂತ್​ ತುಪ್ಪದ ವಿಚಾರಕ್ಕೆ ಹೆಚ್ಚು ಸುದ್ದಿಯಾಗಿದ್ದರು. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ಅವರಿಗೆ ಅಚ್ಚರಿಯ ಗಿಫ್ಟ್ ಒಂದು ಸಿಕ್ಕಿದೆ.

ಬಿಗ್​ ಬಾಸ್​ ಮನೆಯಲ್ಲಿ ತುಪ್ಪ ಖಾಲಿ ಮಾಡಿದ್ದಾರೆ ಎನ್ನುವ ಆರೋಪ ಪ್ರಶಾಂತ್​ ಸಂಬರಗಿ ಅವರ ಮೇಲೆ ಬಂದಿತ್ತು. ಅಲ್ಲದೆ, ಮನೆಯಲ್ಲಿ ಎರಡು ದಿನ ಈ ವಿಚಾರ ಭಾರೀ ಚರ್ಚೆ ಆಗಿತ್ತು. ಇದಕ್ಕೆ ಪ್ರಶಾಂತ್​ ತುಂಬಾನೇ ಬೇಸರಗೊಂಡಿದ್ದರು. ಅಷ್ಟೇ ಅಲ್ಲ, ‘ತುಪ್ಪಾ ತಿಂದಿದ್ದೇ ತಪ್ಪಾ?’ ಎನ್ನುವ ಪುಸ್ತಕ ಬರೆಯುವುದಾಗಿ ಹೇಳಿದ್ದರು. ವೀಕೆಂಡ್​ನಲ್ಲೂ ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗಿತ್ತು.

ಈಗ ಎಲ್ಲಾ ಸ್ಪರ್ಧಿಗಳು ಮನೆಯಿಂದ ಹೊರ ಬಂದಿದ್ದಾರೆ. ಪ್ರತೀ ಸ್ಪರ್ಧಿಗಳು ಲೈವ್​​ನಲ್ಲಿ ಬಂದು ಅಭಿಮಾನಿಗಳ ಜತೆ ಮಾತುಕತೆ ನಡೆಸುತ್ತಿದ್ದಾರೆ. ಪ್ರಶಾಂತ್​ ಸಂಬರಗಿ ಕೂಡ ಕಲರ್ಸ್​ ಕನ್ನಡ ವಾಹಿನಿ ಫೇಸ್​ಬುಕ್​ಲೈವ್​ನಲ್ಲಿ ಬಂದು ಮಾತನಾಡಿದ್ದಾರೆ. ಈ ವೇಳೆ ಅವರು ಗೆಳೆಯರು ಕಳಿಸಿಕೊಟ್ಟ ವಸ್ತು ಒಂದರ ಬಗ್ಗೆ ಮಾತನಾಡಿದ್ದಾರೆ.

ನನ್ನ ಬೆಸ್ಟ್​ ಫ್ರೆಂಡ್ಸ್​ 5 ಕೆಜಿ ತುಪ್ಪ ಕಳಿಸಿಕೊಟ್ಟಿದ್ದಾರೆ. ನೀನು ತುಂಬಾ ಸಣ್ಣ ಆಗಿದೀಯಾ. ಅಲ್ಲಿ ನಿನಗೆ ಊಟ ಸರಿ ಸಿಕ್ಕಿದೆಯೋ ಇಲ್ಲವೋ ಅನ್ನೋದು ಗೊತ್ತಿಲ್ಲ. ಹೀಗಾಗಿ, ಇದನ್ನು ಬಳಸಿಕೋ ಎಂದು ಕೊಟ್ಟಿದ್ದಾರೆ. ಅವರು ಸರ್ಕ್ಯಾಸ್ಟಿಕ್​ ಆಗಿ ತಂದುಕೊಟ್ಟರೋ ಗೊತ್ತಿಲ್ಲ. ಒಟ್ಟಿನಲ್ಲಿ ಕೊಟ್ಟಿದ್ದಾರೆ ಎಂದು ಪ್ರಶಾಂತ್ ಲೈವ್​ನಲ್ಲಿ ಹೇಳಿಕೊಂಡರು.

ಇದೇ ಲೈವ್​ನಲ್ಲಿ ಮಂಜು ಬಗ್ಗೆ ಪ್ರಶಾಂತ್​ ಮಾತನಾಡಿದ್ದಾರೆ. ‘ಮಂಜು ಸ್ಕ್ರಿಪ್ಟೆಡ್​ ಲೈನ್​ಗಳನ್ನು ಹೆಚ್ಚು ಬಳಕೆ ಮಾಡುತ್ತಿದ್ದರು. ಹೀಗಾಗಿ, ಬಿಗ್​ ಬಾಸ್​ ಮನೆಯಲ್ಲಿ ಅವರಿಗೆ ಕಷ್ಟವಾಗುತ್ತಿತ್ತು. ಯಾವುದಾದರೂ ಸಿನಿಮಾ ತೆಗೆದುಕೊಂಡರೆ ಹೀರೋ ಹೀರೋನೆ, ಕಾಮಿಡಿಯನ್​ ಕಾಮಿಡಿಯನ್ನೇ. ಕಾಮಿಡಿಯನ್​ ಯಾವಾಗಲೂ ಹೀರೋ ಆಗೋಕೆ ಆಗಲ್ಲ. ಮಂಜು ಅವರ ಸ್ಟಫ್​ ಬರುಬರುತ್ತಾ ಕಡಿಮೆ ಆಯಿತು’ ಎಂದು ಪ್ರಶಾಂತ್ ಹೇಳಿದ್ದರು.

ಇದನ್ನೂ ಓದಿ: ಮಂಜು ಕೇವಲ ಕಾಮಿಡಿಯನ್​, ಹೀರೋ ಆಗಲ್ಲ; ಮನೆಯಿಂದ ಹೊರ ಬಂದ ಸಂಬರಗಿ ಮಾತು

‘ನಾನು ಕಿತ್ತೂರು ರಾಣಿ ಚೆನ್ನಮ್ಮ ಕುಟುಂಬದವನು’; ಕೊನೆಯ ದಿನ ಅಚ್ಚರಿಯ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ಸಂಬರಗಿ

Follow Us
'ಶ್ರಮ ವ್ಯರ್ಥವಾಯಿತು': ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ
'ಶ್ರಮ ವ್ಯರ್ಥವಾಯಿತು': ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ