AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿಗೆ ಆದ ಅವಮಾನವನ್ನು ಅವರು ಸಹಿಸಿಕೊಳ್ತಾರಾ?

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ತುಂಬಾನೇ ಸ್ಟ್ರೆಟಿಜಿಕ್​ ಆಗಿ ಆಡುತ್ತಿದ್ದಾರೆ. ಚಕ್ರವರ್ತಿ ಚಂದ್ರಚೂಡ ಜತೆ ಸೇರಿಕೊಂಡು ಯಾರನ್ನು ಹೇಗೆ ಸೋಲಿಸಬೇಕು ಎನ್ನುವುದನ್ನು ಸಂಬರಗಿ ಚರ್ಚೆ ಮಾಡುತ್ತಲೇ ಇರುತ್ತಾರೆ.

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿಗೆ ಆದ ಅವಮಾನವನ್ನು ಅವರು ಸಹಿಸಿಕೊಳ್ತಾರಾ?
ಪ್ರಶಾಂತ್​ ಸಂಬರಗಿ
ರಾಜೇಶ್ ದುಗ್ಗುಮನೆ
| Edited By: |

Updated on: Apr 19, 2021 | 8:43 AM

Share

ಬಿಗ್ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ ಅತಿ ಹೆಚ್ಚು ಸುಳ್ಳು ಹೇಳುತ್ತಾರೆ. ಒಬ್ಬರ ಎದುರು ಒಮ್ಮೆ ಒಳ್ಳೆ ರೀತಿಯಲ್ಲಿ ನಡೆದುಕೊಂಡರೆ ಹಿಂದಿನಿಂದ ಅವರ ಬಗ್ಗೆಯೇ ಕೆಟ್ಟದಾಗಿ ಮಾತನಾಡುತ್ತಾರೆ. ಇದು ಮನೆ ಮಂದಿಗೆಲ್ಲ ಗೊತ್ತಾದರೂ ಸುಮ್ಮನಿದ್ದಾರೆ. ಆದರೆ, ವೀಕ್ಷಕರು ಇದೆಲ್ಲವನ್ನೂ ಗಮನಿಸುತ್ತಲೇ ಇರುತ್ತಾರೆ. ಈಗ ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ಗೆ ತೀವ್ರ ಅವಮಾನ ಆಗುವಂತಹ ಘಟನೆ ಒಂದು ನಡೆದಿದೆ. ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ತುಂಬಾನೇ ಸ್ಟ್ರೆಟಿಜಿಕ್​ ಆಗಿ ಆಡುತ್ತಿದ್ದಾರೆ. ಚಕ್ರವರ್ತಿ ಚಂದ್ರಚೂಡ ಜತೆ ಸೇರಿಕೊಂಡು ಯಾರನ್ನು ಹೇಗೆ ಸೋಲಿಸಬೇಕು ಎನ್ನುವುದನ್ನು ಸಂಬರಗಿ ಚರ್ಚೆ ಮಾಡುತ್ತಲೇ ಇರುತ್ತಾರೆ. ಕೆಲವೊಮ್ಮೆ ದಿವ್ಯಾ ಸುರೇಶ್​ ಬಳಿ ತೆರಳಿ ಒಳ್ಳೆಯ ಮಾತನಾಡುವ ಚಕ್ರವರ್ತಿ ನಂತರ ಹಿಂದಿನಿಂದ ಅವರ ಬಗ್ಗೆಯೇ ಕೆಟ್ಟದಾಗಿ ಮಾತನಾಡುತ್ತಾರೆ.

ವೀಕ್ಷಕರು ಬಿಗ್​ ಬಾಸ್​ ಮನೆ ಸ್ಪರ್ಧಿಗಳ ಜತೆ ಮಾತನಾಡುವ ಅವಕಾಶವನ್ನು ಕಲ್ಪಿಸಿಕೊಡಲಾಗಿತ್ತು. ಕಾಲರ್​ ಒಬ್ಬರು ಅರವಿಂದ್​ ಜತೆ ಮಾತನಾಡಿದ್ದರು. ಯುಗಾದಿ ಹಬ್ಬದ ದಿನದಂದು ಅರವಿಂದ್​ ಸಣ್ಣ ವಿಚಾರಕ್ಕೆ ಪ್ರಶಾಂತ್​ ಜತೆ ಜಗಳ ಮಾಡಿಕೊಂಡಿದ್ದರು. ದೂರವಾಣಿ ಕರೆ ಮಾಡಿದವರು ಇದೇ ವಿಚಾರವನ್ನು ಪ್ರಸ್ತಾಪ ಮಾಡಿದ್ದರು. ಅಷ್ಟೇ ಅಲ್ಲ, ಪ್ರಶಾಂತ್​ಗೆ ಅವಮಾನ ಕೂಡ ಮಾಡಿದ್ದರು.

ಪ್ರಶಾಂತ್​ ಸುಳ್ಳುಗಾರ. ಮುಂದೆ ಒಂದು ರೀತಿ ಇರುತ್ತಾರೆ, ಹಿಂದೊಂದು ರೀತಿ ನಡೆದುಕೊಳ್ಳುತ್ತಾರೆ. ಅದೇನೆ ಇರಬಹುದು. ಆದರೆ, ಯುಗಾದಿ ದಿನ ಅವರು ಏನನ್ನೂ ಮಾತನಾಡಿರಲಿಲ್ಲವಲ್ಲ ಎನ್ನುವ ಅಭಿಪ್ರಾಯವನ್ನು ಹೊರ ಹಾಕಿದರು. ಹೌದು, ಅವರ ಜತೆ ಕೂಗಾಡಬಾರದಿತ್ತು ಎಂದು ಅರವಿಂದ್ ಒಪ್ಪಿಕೊಂಡರು.

ಸುಳ್ಳುಗಾರ ಎಂದು ಹೇಳುವಾಗ ಪ್ರಶಾಂತ್​ ಮುಖ ಕೆಂಪುಗಟ್ಟಿತ್ತು. ಅವರಿಗೆ ಈ ಪದ ಅವಮಾನ ತರಿಸಿದೆ. ವೀಕ್ಷಕರು ತಮ್ಮನ್ನು ಗಮನಿಸುತ್ತಿರುವ ವಿಚಾರ ಅವರಿಗೆ ಮನದಟ್ಟಾದಂತೆ ಕಾಣುತ್ತಿದೆ.

ಇದನ್ನೂ ಓದಿ: Kichcha Sudep: ಬಿಗ್​ ಬಾಸ್​ ಸ್ಪರ್ಧಿಗಳಿಗೆ ಸರ್​ಪ್ರೈಸ್​; ಮನೆಯಲ್ಲಿ ಕೊನೆಗೂ ಕೇಳ್ತು ಸುದೀಪ್​ ಧ್ವನಿ!

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ