ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿಗೆ ಆದ ಅವಮಾನವನ್ನು ಅವರು ಸಹಿಸಿಕೊಳ್ತಾರಾ?

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ತುಂಬಾನೇ ಸ್ಟ್ರೆಟಿಜಿಕ್​ ಆಗಿ ಆಡುತ್ತಿದ್ದಾರೆ. ಚಕ್ರವರ್ತಿ ಚಂದ್ರಚೂಡ ಜತೆ ಸೇರಿಕೊಂಡು ಯಾರನ್ನು ಹೇಗೆ ಸೋಲಿಸಬೇಕು ಎನ್ನುವುದನ್ನು ಸಂಬರಗಿ ಚರ್ಚೆ ಮಾಡುತ್ತಲೇ ಇರುತ್ತಾರೆ.

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿಗೆ ಆದ ಅವಮಾನವನ್ನು ಅವರು ಸಹಿಸಿಕೊಳ್ತಾರಾ?
ಪ್ರಶಾಂತ್​ ಸಂಬರಗಿ
Follow us
| Updated By: ಮದನ್​ ಕುಮಾರ್​

Updated on: Apr 19, 2021 | 8:43 AM

ಬಿಗ್ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ ಅತಿ ಹೆಚ್ಚು ಸುಳ್ಳು ಹೇಳುತ್ತಾರೆ. ಒಬ್ಬರ ಎದುರು ಒಮ್ಮೆ ಒಳ್ಳೆ ರೀತಿಯಲ್ಲಿ ನಡೆದುಕೊಂಡರೆ ಹಿಂದಿನಿಂದ ಅವರ ಬಗ್ಗೆಯೇ ಕೆಟ್ಟದಾಗಿ ಮಾತನಾಡುತ್ತಾರೆ. ಇದು ಮನೆ ಮಂದಿಗೆಲ್ಲ ಗೊತ್ತಾದರೂ ಸುಮ್ಮನಿದ್ದಾರೆ. ಆದರೆ, ವೀಕ್ಷಕರು ಇದೆಲ್ಲವನ್ನೂ ಗಮನಿಸುತ್ತಲೇ ಇರುತ್ತಾರೆ. ಈಗ ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ಗೆ ತೀವ್ರ ಅವಮಾನ ಆಗುವಂತಹ ಘಟನೆ ಒಂದು ನಡೆದಿದೆ. ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ತುಂಬಾನೇ ಸ್ಟ್ರೆಟಿಜಿಕ್​ ಆಗಿ ಆಡುತ್ತಿದ್ದಾರೆ. ಚಕ್ರವರ್ತಿ ಚಂದ್ರಚೂಡ ಜತೆ ಸೇರಿಕೊಂಡು ಯಾರನ್ನು ಹೇಗೆ ಸೋಲಿಸಬೇಕು ಎನ್ನುವುದನ್ನು ಸಂಬರಗಿ ಚರ್ಚೆ ಮಾಡುತ್ತಲೇ ಇರುತ್ತಾರೆ. ಕೆಲವೊಮ್ಮೆ ದಿವ್ಯಾ ಸುರೇಶ್​ ಬಳಿ ತೆರಳಿ ಒಳ್ಳೆಯ ಮಾತನಾಡುವ ಚಕ್ರವರ್ತಿ ನಂತರ ಹಿಂದಿನಿಂದ ಅವರ ಬಗ್ಗೆಯೇ ಕೆಟ್ಟದಾಗಿ ಮಾತನಾಡುತ್ತಾರೆ.

ವೀಕ್ಷಕರು ಬಿಗ್​ ಬಾಸ್​ ಮನೆ ಸ್ಪರ್ಧಿಗಳ ಜತೆ ಮಾತನಾಡುವ ಅವಕಾಶವನ್ನು ಕಲ್ಪಿಸಿಕೊಡಲಾಗಿತ್ತು. ಕಾಲರ್​ ಒಬ್ಬರು ಅರವಿಂದ್​ ಜತೆ ಮಾತನಾಡಿದ್ದರು. ಯುಗಾದಿ ಹಬ್ಬದ ದಿನದಂದು ಅರವಿಂದ್​ ಸಣ್ಣ ವಿಚಾರಕ್ಕೆ ಪ್ರಶಾಂತ್​ ಜತೆ ಜಗಳ ಮಾಡಿಕೊಂಡಿದ್ದರು. ದೂರವಾಣಿ ಕರೆ ಮಾಡಿದವರು ಇದೇ ವಿಚಾರವನ್ನು ಪ್ರಸ್ತಾಪ ಮಾಡಿದ್ದರು. ಅಷ್ಟೇ ಅಲ್ಲ, ಪ್ರಶಾಂತ್​ಗೆ ಅವಮಾನ ಕೂಡ ಮಾಡಿದ್ದರು.

ಪ್ರಶಾಂತ್​ ಸುಳ್ಳುಗಾರ. ಮುಂದೆ ಒಂದು ರೀತಿ ಇರುತ್ತಾರೆ, ಹಿಂದೊಂದು ರೀತಿ ನಡೆದುಕೊಳ್ಳುತ್ತಾರೆ. ಅದೇನೆ ಇರಬಹುದು. ಆದರೆ, ಯುಗಾದಿ ದಿನ ಅವರು ಏನನ್ನೂ ಮಾತನಾಡಿರಲಿಲ್ಲವಲ್ಲ ಎನ್ನುವ ಅಭಿಪ್ರಾಯವನ್ನು ಹೊರ ಹಾಕಿದರು. ಹೌದು, ಅವರ ಜತೆ ಕೂಗಾಡಬಾರದಿತ್ತು ಎಂದು ಅರವಿಂದ್ ಒಪ್ಪಿಕೊಂಡರು.

ಸುಳ್ಳುಗಾರ ಎಂದು ಹೇಳುವಾಗ ಪ್ರಶಾಂತ್​ ಮುಖ ಕೆಂಪುಗಟ್ಟಿತ್ತು. ಅವರಿಗೆ ಈ ಪದ ಅವಮಾನ ತರಿಸಿದೆ. ವೀಕ್ಷಕರು ತಮ್ಮನ್ನು ಗಮನಿಸುತ್ತಿರುವ ವಿಚಾರ ಅವರಿಗೆ ಮನದಟ್ಟಾದಂತೆ ಕಾಣುತ್ತಿದೆ.

ಇದನ್ನೂ ಓದಿ: Kichcha Sudep: ಬಿಗ್​ ಬಾಸ್​ ಸ್ಪರ್ಧಿಗಳಿಗೆ ಸರ್​ಪ್ರೈಸ್​; ಮನೆಯಲ್ಲಿ ಕೊನೆಗೂ ಕೇಳ್ತು ಸುದೀಪ್​ ಧ್ವನಿ!

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ