AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್​ ಸಂಬರ್ಗಿಗೆ ಆ್ಯಸಿಡ್​ ಹಾಕುವುದಾಗಿ ಬೆದರಿಕೆ; ಎಫ್​ಐಆರ್​ ದಾಖಲು

ರಾಮೇಶ್ವರಂ ಕೆಫೆ ಬಾಂಬ್​ ಸ್ಫೋಟದ ನಂಟು ಹೊಂದಿರುವ ವ್ಯಕ್ತಿಗಳಿಂದಲೇ ಪ್ರಶಾಂತ್​ ಸಂಬರ್ಗಿಗೆ ಬೆದರಿಕೆ ಸಂದೇಶ ಬಂದಿದೆ. ಕೆಫೆ ರೀ-ಓಪನಿಂಗ್​ ದಿನ ಮಾಧ್ಯಮಗಳಿಗೆ ಪ್ರಶಾಂತ್​ ಸಂಬರ್ಗಿ ಹೇಳಿಕೆ ನೀಡಿದ ಬಳಿಕ ಈ ರೀತಿಯ ಬೆದರಿಕೆ ಬರಲು ಆರಂಭ ಆಗಿದೆ. ವಿದೇಶದ ವಾಟ್ಸಪ್​ ನಂಬರ್​ ಮತ್ತು ಇಮೇಲ್​ ಮೂಲಕ ಪ್ರಶಾಂತ್​ ಹಾಗೂ ಅವರ ಕುಟುಂಬಕ್ಕೆ ಕೊಲೆ ಬೆದರಿಕೆ ಬಂದಿದೆ.

ಪ್ರಶಾಂತ್​ ಸಂಬರ್ಗಿಗೆ ಆ್ಯಸಿಡ್​ ಹಾಕುವುದಾಗಿ ಬೆದರಿಕೆ; ಎಫ್​ಐಆರ್​ ದಾಖಲು
ಪ್ರಶಾಂತ್​ ಸಂಬರ್ಗಿ
Follow us
ರಾಚಪ್ಪಾಜಿ ನಾಯ್ಕ್
| Updated By: ಮದನ್​ ಕುಮಾರ್​

Updated on: Mar 29, 2024 | 4:52 PM

ಮಾಜಿ ಬಿಗ್​ ಬಾಸ್​ ಸ್ಪರ್ಧಿ ಪ್ರಶಾಂತ್​ ಸಂಬರ್ಗಿ (Prashanth Sambargi) ಅವರಿಗೆ ಕಿಡಿಗೇಡಿಗಳು ಕೊಲೆ ಬೆದರಿಕೆ ಹಾಕಿದ್ದಾರೆ. ವಾಟ್ಸಪ್​ ಮತ್ತು ಇ-ಮೇಲ್​ ಮೂಲಕ ಬೆದರಿಕೆ ಹಾಕಲಾಗಿದೆ. ಆ್ಯಸಿಡ್​​ ಹಾಕುವುದಾಗಿ ಅಪರಿಚಿತರು ಎಚ್ಚರಿಸಿದ್ದಾರೆ. ಈ ಸಂಬಂಧವಾಗಿ ಪ್ರಶಾಂತ್​ ಸಂಬರ್ಗಿ ಅವರು ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಬೆದರಿಕೆ (Life Threat) ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ತಮಗೆ ರಕ್ಷಣೆ ನೀಡಬೇಕು ಎಂದು ಪ್ರಶಾಂತ್​ ಸಂಬರ್ಗಿ ಅವರು ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ. ರಾಮೇಶ್ವರಂ ಕೆಫೆ (Rameshwaram Cafe) ಬಗ್ಗೆ ಪಸ್ತಾಪಿಸಿ ಪ್ರಶಾಂತ್​ ಸಂಬರ್ಗಿಗೆ ಬೆದರಿಕೆ ಹಾಕಲಾಗಿದೆ.

ವಿದೇಶದ ಮೊಬೈಲ್​ ಸಂಖ್ಯೆಗಳಿಂದ ಪ್ರಶಾಂತ್ ಸಂಬರ್ಗಿ ಅವರಿಗೆ ಬೆದರಿಕೆ ಸಂದೇಶ ಬಂದಿದೆ. ಅಮೆರಿಕ, ಕ್ರೊಯೇಷ್ಯಾ ಮುಂತಾದ ದೇಶಗಳ ವಾಟ್ಸಪ್​ ಸಂಖ್ಯೆಗಳನ್ನು ಬಳಸಿ ಬೆದರಿಕೆ ಸಂದೇಶ ಕಳಿಸಲಾಗಿದೆ. ಪ್ರಶಾಂತ್​ ಸಂಬರ್ಗಿ ಅವರ ಫ್ಯಾಮಿಲಿ ಫೋಟೋವನ್ನು ಕಳಿಸಿ, ‘ಟಾರ್ಗೆಟ್​’ ಎಂದು ಬರೆಯಲಾಗಿದೆ. ಪತ್ನಿ ಮತ್ತು ಮಕ್ಕಳನ್ನು ಕೂಡ ಬಲಿ ತೆಗೆದುಕೊಳ್ಳುವುದಾಗಿ ಬೆದರಿಕೆ ಸಂದೇಶ ಕಳಿಸಲಾಗಿದೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ಕೇಸ್​ಗೂ ಕಾಫಿನಾಡಿಗೂ ನಂಟು: ಬಂಧಿತ ಬ್ಲಾಸ್ಟ್​ನ ಮಾಸ್ಟರ್ ಮೈಂಡ್ ಕಳಸ ಮೂಲದವನು

‘ಮಾರ್ಚ್​ 10ರ ಮಧ್ಯರಾತ್ರಿಯಿಂದ ನನಗೆ ಮೇಲ್ಕಂಡ ಮೊಬೈಲ್​ ಸಂಖ್ಯೆಗಳಿಂದ ಬೆದರಿಕೆ ಸಂದೇಶ ಬಂದಿದೆ. ನಮ್ಮ ಫೋಟೋ ಕಳಿಸಿ ನನಗೆ ಮತ್ತು ನನ್ನ ಕುಟುಂಬದವರಿಗೆ ಜೀವ ಬೆದರಿಕೆ ಹಾಕಲಾಗಿದೆ. ನಮ್ಮ ಮೊಬೈಲ್​ ಹ್ಯಾಕ್​ ಮಾಡಲಾಗಿದೆ. ಅದರಲ್ಲಿನ ಖಾಸಗಿ ಮಾಹಿತಿಯನ್ನು ಕದಿಯಲಾಗಿದೆ. ವೈಯಕ್ತಿಕ ಫೋಟೋ, ಕಾಲ್​ ರೆಕಾರ್ಡ್, ಎಸ್​ಎಂಎಸ್​ ಹಾಗೂ ಇಮೇಲ್​ಗಳನ್ನು ಟ್ರಾನ್ಸ್​ಫರ್​ ಮಾಡಲಾಗಿದೆ’ ಎಂದು ಪ್ರಶಾಂತ್​ ಸಂಬರ್ಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ ಸ್ಫೋಟಕ ವಿಚಾರ ಬಯಲಿಗೆ; ಬೆಂಗಳೂರಿನ ಸಮೀಪವೇ ಬಾಂಬ್ ತಯಾರಿ

ರಾಮೇಶ್ವರಂ ಬಾಂಬ್​ ಸ್ಫೋಟದ ನಂಟು:

ಪ್ರಶಾಂತ್ ಸಂಬರ್ಗಿಗೆ ಬೆದರಿಕೆ ಹಾಕಿದ ಕಿಡಿಗೇಡಿಗಳಿಗೆ ರಾಮೇಶ್ವರಂ ಕೆಫೆ ಬಾಂಬ್​ ಸ್ಪೋಟದ ನಂಟು ಇರುವುದು ಕಂಡುಬಂದಿದೆ. ಯಾಕೆಂದರೆ, ಬೆದರಿಕೆ ಸಂದೇಶದಲ್ಲಿ ರಾಮೇಶ್ವರಂ ಕೆಫೆ ಬಗ್ಗೆ ಉಲ್ಲೇಖ ಮಾಡಲಾಗಿದೆ. ದೂರಿನಲ್ಲಿ ತಿಳಿಸಿರುವಂತೆ, ಪ್ರಶಾಂತ್​ ಸಂಬರ್ಗಿ ಅವರು ಮಾರ್ಚ್ 8ರಂದು ರಾಮೇಶ್ವರಂ ಕೆಫೆ ರೀ-ಓಪನಿಂಗ್​ಗೆ ತೆರಳಿದ್ದರು. ಆಗ ಕೆಲವು ಸುದ್ದಿ ವಾಹಿನಿಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಆ ಬಳಿಕ ಕಿಡಿಗೇಡಿಗಳಿಂದ ಬೆದರಿಕೆ ಸಂದೇಶ ಬರಲು ಆರಂಭ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು