AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್​ ಸಂಬರ್ಗಿಗೆ ಆ್ಯಸಿಡ್​ ಹಾಕುವುದಾಗಿ ಬೆದರಿಕೆ; ಎಫ್​ಐಆರ್​ ದಾಖಲು

ರಾಮೇಶ್ವರಂ ಕೆಫೆ ಬಾಂಬ್​ ಸ್ಫೋಟದ ನಂಟು ಹೊಂದಿರುವ ವ್ಯಕ್ತಿಗಳಿಂದಲೇ ಪ್ರಶಾಂತ್​ ಸಂಬರ್ಗಿಗೆ ಬೆದರಿಕೆ ಸಂದೇಶ ಬಂದಿದೆ. ಕೆಫೆ ರೀ-ಓಪನಿಂಗ್​ ದಿನ ಮಾಧ್ಯಮಗಳಿಗೆ ಪ್ರಶಾಂತ್​ ಸಂಬರ್ಗಿ ಹೇಳಿಕೆ ನೀಡಿದ ಬಳಿಕ ಈ ರೀತಿಯ ಬೆದರಿಕೆ ಬರಲು ಆರಂಭ ಆಗಿದೆ. ವಿದೇಶದ ವಾಟ್ಸಪ್​ ನಂಬರ್​ ಮತ್ತು ಇಮೇಲ್​ ಮೂಲಕ ಪ್ರಶಾಂತ್​ ಹಾಗೂ ಅವರ ಕುಟುಂಬಕ್ಕೆ ಕೊಲೆ ಬೆದರಿಕೆ ಬಂದಿದೆ.

ಪ್ರಶಾಂತ್​ ಸಂಬರ್ಗಿಗೆ ಆ್ಯಸಿಡ್​ ಹಾಕುವುದಾಗಿ ಬೆದರಿಕೆ; ಎಫ್​ಐಆರ್​ ದಾಖಲು
ಪ್ರಶಾಂತ್​ ಸಂಬರ್ಗಿ
ರಾಚಪ್ಪಾಜಿ ನಾಯ್ಕ್
| Edited By: |

Updated on: Mar 29, 2024 | 4:52 PM

Share

ಮಾಜಿ ಬಿಗ್​ ಬಾಸ್​ ಸ್ಪರ್ಧಿ ಪ್ರಶಾಂತ್​ ಸಂಬರ್ಗಿ (Prashanth Sambargi) ಅವರಿಗೆ ಕಿಡಿಗೇಡಿಗಳು ಕೊಲೆ ಬೆದರಿಕೆ ಹಾಕಿದ್ದಾರೆ. ವಾಟ್ಸಪ್​ ಮತ್ತು ಇ-ಮೇಲ್​ ಮೂಲಕ ಬೆದರಿಕೆ ಹಾಕಲಾಗಿದೆ. ಆ್ಯಸಿಡ್​​ ಹಾಕುವುದಾಗಿ ಅಪರಿಚಿತರು ಎಚ್ಚರಿಸಿದ್ದಾರೆ. ಈ ಸಂಬಂಧವಾಗಿ ಪ್ರಶಾಂತ್​ ಸಂಬರ್ಗಿ ಅವರು ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಬೆದರಿಕೆ (Life Threat) ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ತಮಗೆ ರಕ್ಷಣೆ ನೀಡಬೇಕು ಎಂದು ಪ್ರಶಾಂತ್​ ಸಂಬರ್ಗಿ ಅವರು ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ. ರಾಮೇಶ್ವರಂ ಕೆಫೆ (Rameshwaram Cafe) ಬಗ್ಗೆ ಪಸ್ತಾಪಿಸಿ ಪ್ರಶಾಂತ್​ ಸಂಬರ್ಗಿಗೆ ಬೆದರಿಕೆ ಹಾಕಲಾಗಿದೆ.

ವಿದೇಶದ ಮೊಬೈಲ್​ ಸಂಖ್ಯೆಗಳಿಂದ ಪ್ರಶಾಂತ್ ಸಂಬರ್ಗಿ ಅವರಿಗೆ ಬೆದರಿಕೆ ಸಂದೇಶ ಬಂದಿದೆ. ಅಮೆರಿಕ, ಕ್ರೊಯೇಷ್ಯಾ ಮುಂತಾದ ದೇಶಗಳ ವಾಟ್ಸಪ್​ ಸಂಖ್ಯೆಗಳನ್ನು ಬಳಸಿ ಬೆದರಿಕೆ ಸಂದೇಶ ಕಳಿಸಲಾಗಿದೆ. ಪ್ರಶಾಂತ್​ ಸಂಬರ್ಗಿ ಅವರ ಫ್ಯಾಮಿಲಿ ಫೋಟೋವನ್ನು ಕಳಿಸಿ, ‘ಟಾರ್ಗೆಟ್​’ ಎಂದು ಬರೆಯಲಾಗಿದೆ. ಪತ್ನಿ ಮತ್ತು ಮಕ್ಕಳನ್ನು ಕೂಡ ಬಲಿ ತೆಗೆದುಕೊಳ್ಳುವುದಾಗಿ ಬೆದರಿಕೆ ಸಂದೇಶ ಕಳಿಸಲಾಗಿದೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ಕೇಸ್​ಗೂ ಕಾಫಿನಾಡಿಗೂ ನಂಟು: ಬಂಧಿತ ಬ್ಲಾಸ್ಟ್​ನ ಮಾಸ್ಟರ್ ಮೈಂಡ್ ಕಳಸ ಮೂಲದವನು

‘ಮಾರ್ಚ್​ 10ರ ಮಧ್ಯರಾತ್ರಿಯಿಂದ ನನಗೆ ಮೇಲ್ಕಂಡ ಮೊಬೈಲ್​ ಸಂಖ್ಯೆಗಳಿಂದ ಬೆದರಿಕೆ ಸಂದೇಶ ಬಂದಿದೆ. ನಮ್ಮ ಫೋಟೋ ಕಳಿಸಿ ನನಗೆ ಮತ್ತು ನನ್ನ ಕುಟುಂಬದವರಿಗೆ ಜೀವ ಬೆದರಿಕೆ ಹಾಕಲಾಗಿದೆ. ನಮ್ಮ ಮೊಬೈಲ್​ ಹ್ಯಾಕ್​ ಮಾಡಲಾಗಿದೆ. ಅದರಲ್ಲಿನ ಖಾಸಗಿ ಮಾಹಿತಿಯನ್ನು ಕದಿಯಲಾಗಿದೆ. ವೈಯಕ್ತಿಕ ಫೋಟೋ, ಕಾಲ್​ ರೆಕಾರ್ಡ್, ಎಸ್​ಎಂಎಸ್​ ಹಾಗೂ ಇಮೇಲ್​ಗಳನ್ನು ಟ್ರಾನ್ಸ್​ಫರ್​ ಮಾಡಲಾಗಿದೆ’ ಎಂದು ಪ್ರಶಾಂತ್​ ಸಂಬರ್ಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ ಸ್ಫೋಟಕ ವಿಚಾರ ಬಯಲಿಗೆ; ಬೆಂಗಳೂರಿನ ಸಮೀಪವೇ ಬಾಂಬ್ ತಯಾರಿ

ರಾಮೇಶ್ವರಂ ಬಾಂಬ್​ ಸ್ಫೋಟದ ನಂಟು:

ಪ್ರಶಾಂತ್ ಸಂಬರ್ಗಿಗೆ ಬೆದರಿಕೆ ಹಾಕಿದ ಕಿಡಿಗೇಡಿಗಳಿಗೆ ರಾಮೇಶ್ವರಂ ಕೆಫೆ ಬಾಂಬ್​ ಸ್ಪೋಟದ ನಂಟು ಇರುವುದು ಕಂಡುಬಂದಿದೆ. ಯಾಕೆಂದರೆ, ಬೆದರಿಕೆ ಸಂದೇಶದಲ್ಲಿ ರಾಮೇಶ್ವರಂ ಕೆಫೆ ಬಗ್ಗೆ ಉಲ್ಲೇಖ ಮಾಡಲಾಗಿದೆ. ದೂರಿನಲ್ಲಿ ತಿಳಿಸಿರುವಂತೆ, ಪ್ರಶಾಂತ್​ ಸಂಬರ್ಗಿ ಅವರು ಮಾರ್ಚ್ 8ರಂದು ರಾಮೇಶ್ವರಂ ಕೆಫೆ ರೀ-ಓಪನಿಂಗ್​ಗೆ ತೆರಳಿದ್ದರು. ಆಗ ಕೆಲವು ಸುದ್ದಿ ವಾಹಿನಿಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಆ ಬಳಿಕ ಕಿಡಿಗೇಡಿಗಳಿಂದ ಬೆದರಿಕೆ ಸಂದೇಶ ಬರಲು ಆರಂಭ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್