AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳೆಯ ಎನ್ನುತ್ತಲೇ ಚಂದ್ರಚೂಡ್​ಗೆ ನಂಬಿಕೆ ದ್ರೋಹ ಬಗೆದ ಸಂಬರಗಿ; ಇಲ್ಲಿದೆ ವಿಡಿಯೋ ಸಾಕ್ಷಿ

ಚಕ್ರವರ್ತಿ ಚಂದ್ರಚೂಡ್​ ನನ್ನ ಆಪ್ತ ಗೆಳೆಯ. ನಮ್ಮಿಬ್ಬರಿಗೂ ಪರಸ್ಪರ ಪರಿಚಯ ಇದೆ ಎಂದು ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಹೇಳಿಕೊಂಡಿದ್ದರು. ಅಷ್ಟೇ ಅಲ್ಲ, ಮನೆಯಲ್ಲಿ ಇಬ್ಬರೂ ಒಟ್ಟಿಗೆ ಇರುತ್ತಿದ್ದರು.

ಗೆಳೆಯ ಎನ್ನುತ್ತಲೇ ಚಂದ್ರಚೂಡ್​ಗೆ ನಂಬಿಕೆ ದ್ರೋಹ ಬಗೆದ ಸಂಬರಗಿ; ಇಲ್ಲಿದೆ ವಿಡಿಯೋ ಸಾಕ್ಷಿ
ಚಕ್ರವರ್ತಿ ಚಂದ್ರಚೂಡ್​-ಪ್ರಶಾಂತ್​ ಸಂಬರಗಿ
ರಾಜೇಶ್ ದುಗ್ಗುಮನೆ
| Updated By: ganapathi bhat|

Updated on: Apr 03, 2021 | 6:05 PM

Share

ಪತ್ರಕರ್ತ ಹಾಗೂ ಸಿನಿಮಾ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್​ ಬಿಗ್​ ಬಾಸ್​ ಮನೆಯಲ್ಲಿ ವೈಲ್ಡ್​ ಕಾರ್ಡ್​ ಎಂಟ್ರಿ ತೆಗೆದುಕೊಂಡಿದ್ದಾರೆ. ಬಂದ ದಿನವೇ ಮನೆಯವರ ಮೇಲೆ ಡಾಮಿನೇಟ್​ ಮಾಡೋಕೆ ಪ್ರಯತ್ನ ಮಾಡಿದ್ದಾರೆ. ಅಷ್ಟೇ ಅಲ್ಲ, ಬಂದ ದಿನ ಎಲ್ಲರ ಸಾಮರ್ಥ್ಯವನ್ನು ಆಡಿಕೊಂಡಿದ್ದಾರೆ. ಇದು ಬಿಗ್​ ಬಾಸ್​ ಸ್ಪರ್ಧಿಗಳಿಗೆ ಇಷ್ಟವಾಗಿಲ್ಲ. ಅಷ್ಟೇ ಏಕೆ, ಆಪ್ತ ಎನಿಸಿಕೊಂಡಿರುವ ಪ್ರಶಾಂತ್​ ಸಂಬರಗಿಯೇ ಈಗ ಚಕ್ರವರ್ತಿಗೆ ನಂಬಿಕೆ ದ್ರೋಹ ಬಗೆದಿದ್ದಾರೆ.

ಚಕ್ರವರ್ತಿ ಚಂದ್ರಚೂಡ್​ ನನ್ನ ಆಪ್ತ ಗೆಳೆಯ. ನಮ್ಮಿಬ್ಬರಿಗೂ ಪರಸ್ಪರ ಪರಿಚಯ ಇದೆ ಎಂದು ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಹೇಳಿಕೊಂಡಿದ್ದರು. ಅಷ್ಟೇ ಅಲ್ಲ, ಮನೆಯಲ್ಲಿ ಇಬ್ಬರೂ ಒಟ್ಟಿಗೆ ಇರುತ್ತಿದ್ದರು. ಇವರಿಬ್ಬರ ಗೆಳೆತನ ನೋಡಿದ ಮನೆ ಮಂದಿ, ಪ್ರಶಾಂತ್​ಗೆ ಹೊಸ ಗೆಳೆಯ ಸಿಕ್ಕಿದ್ದಾರೆ ಎಂದು ನಕ್ಕಿದ್ದಾರೆ. ಆದರೆ, ವೀಕೆಂಡ್​ನಲ್ಲಿ ಸುದೀಪ್​ ಎದುರು ಸಂಬರಗಿ ಉಲ್ಟಾ ಹೊಡೆದಿದ್ದಾರೆ.

ಬಿಗ್​ ಬಾಸ್ ಮನೆಗೆ ಬಂದಾಗ ಹೇಗೆ ಚಂದ್ರಚೂಡ್​ ಎಲ್ಲರನ್ನೂ ತೀರ್ಮಾನಿಸಿದ್ದರೋ ಅದೇ ರೀತಿ ಚಂದ್ರಚೂಡ್​ ಬಗ್ಗೆ ಅಭಿಪ್ರಾಯ ಹೊರ ಹಾಕಲು ಮನೆಯವರಿಗೆ ಅವಕಾಶ ನೀಡಲಾಗಿತ್ತು. ಆಗ ಕೆಲವರು ಚಂದ್ರಚೂಡ್​ಗೆ ಕೊಟ್ಟ ಅಂಕ ತುಂಬಾನೇ ಕಡಿಮೆ ಆಗಿತ್ತು!

ಬಿಗ್​ ಬಾಸ್​ ಮನೆಯಲ್ಲಿ ಚಂದ್ರಚೂಡ್​ಗೆ ಅರವಿಂದ್ ಕೆ.ಪಿ. ಶೂನ್ಯ ಅಂಕವನ್ನು ನೀಡಿದರು. ಬೇರೆಯವರ ಬಗ್ಗೆ ಕಮೆಂಟ್​ ಮಾಡೋದು ತುಂಬಾನೇ ಸುಲಭ. ತಾವು ಸರಿಯಾಗಿ ನಡೆಯೋದು ತುಂಬಾನೇ ಕಷ್ಟ ಎಂದರು. ಅವರು ತುಂಬಾನೇ ಡಾಮಿನೇಟ್​ ಮಾಡುತ್ತಾರೆ ಎನ್ನುವ ಆರೋಪವನ್ನು ವಿಶ್ವ ಹಾಗೂ ದಿವ್ಯಾ ಉರುಡುಗ ಮಾಡಿದರು. ಚಂದ್ರಚೂಡ್​ ಬಗ್ಗೆ ಮಾತನಾಡಿದ ರಾಜೀವ್​, ಅವರಿಗೆ ಭಾಷೆಯ ಮೇಲೆ ಹಿಡಿತ ಇದೆ. ಅದನ್ನ ಇಟ್ಟುಕೊಂಡು ಬೇರೆಯ ಟ್ಯಾಲೆಂಟ್​ ರೂಲ್​ ಮಾಡೋಕೆ ಆಗಲ್ಲ ಎಂದರು.

ಅಚ್ಚರಿ ಎಂದರೆ ಪ್ರಶಾಂತ್​-ಚಂದ್ರಚೂಡ್​ ಆಪ್ತರು. ಆದಾಗ್ಯೂ ಅವರಿಗೆ ಪ್ರಶಾಂತ್​ ನೀಡಿದ್ದು ಮೈನಸ್​ ಒಂದು ಅಂಕ! ಇದು ಸಾಕಷ್ಟು ಜನರಿಗೆ ಅಚ್ಚರಿ ಮೂಡಿಸಿದೆ. ಅಷ್ಟಕ್ಕೂ ಪ್ರಶಾಂತ್ ಅಷ್ಟು ಕಡಿಮೆ ಅಂಕ ನೀಡೋಕೆ ಕಾರಣವೇನು ಎನ್ನುವುದನ್ನು ಇಂದಿನ (ಮಾರ್ಚ್​​ 03) ಸಂಚಿಕೆಯಲ್ಲಿ ನೋಡಬೇಕಿದೆ.

ಇದನ್ನೂ ಓದಿ: ಐದನೇ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ

ನಾಗರ ಪಂಚಮಿಯ ಆಚರಣೆಯ ಮಹತ್ವ ಹಾಗೂ ಅದರ ಫಲ ತಿಳಿಯಿರಿ
ನಾಗರ ಪಂಚಮಿಯ ಆಚರಣೆಯ ಮಹತ್ವ ಹಾಗೂ ಅದರ ಫಲ ತಿಳಿಯಿರಿ
ನಾಗರ ಪಂಚಮಿ ಹಬ್ಬದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ನಾಗರ ಪಂಚಮಿ ಹಬ್ಬದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ