AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳೆಯ ಎನ್ನುತ್ತಲೇ ಚಂದ್ರಚೂಡ್​ಗೆ ನಂಬಿಕೆ ದ್ರೋಹ ಬಗೆದ ಸಂಬರಗಿ; ಇಲ್ಲಿದೆ ವಿಡಿಯೋ ಸಾಕ್ಷಿ

ಚಕ್ರವರ್ತಿ ಚಂದ್ರಚೂಡ್​ ನನ್ನ ಆಪ್ತ ಗೆಳೆಯ. ನಮ್ಮಿಬ್ಬರಿಗೂ ಪರಸ್ಪರ ಪರಿಚಯ ಇದೆ ಎಂದು ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಹೇಳಿಕೊಂಡಿದ್ದರು. ಅಷ್ಟೇ ಅಲ್ಲ, ಮನೆಯಲ್ಲಿ ಇಬ್ಬರೂ ಒಟ್ಟಿಗೆ ಇರುತ್ತಿದ್ದರು.

ಗೆಳೆಯ ಎನ್ನುತ್ತಲೇ ಚಂದ್ರಚೂಡ್​ಗೆ ನಂಬಿಕೆ ದ್ರೋಹ ಬಗೆದ ಸಂಬರಗಿ; ಇಲ್ಲಿದೆ ವಿಡಿಯೋ ಸಾಕ್ಷಿ
ಚಕ್ರವರ್ತಿ ಚಂದ್ರಚೂಡ್​-ಪ್ರಶಾಂತ್​ ಸಂಬರಗಿ
ರಾಜೇಶ್ ದುಗ್ಗುಮನೆ
| Edited By: |

Updated on: Apr 03, 2021 | 6:05 PM

Share

ಪತ್ರಕರ್ತ ಹಾಗೂ ಸಿನಿಮಾ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್​ ಬಿಗ್​ ಬಾಸ್​ ಮನೆಯಲ್ಲಿ ವೈಲ್ಡ್​ ಕಾರ್ಡ್​ ಎಂಟ್ರಿ ತೆಗೆದುಕೊಂಡಿದ್ದಾರೆ. ಬಂದ ದಿನವೇ ಮನೆಯವರ ಮೇಲೆ ಡಾಮಿನೇಟ್​ ಮಾಡೋಕೆ ಪ್ರಯತ್ನ ಮಾಡಿದ್ದಾರೆ. ಅಷ್ಟೇ ಅಲ್ಲ, ಬಂದ ದಿನ ಎಲ್ಲರ ಸಾಮರ್ಥ್ಯವನ್ನು ಆಡಿಕೊಂಡಿದ್ದಾರೆ. ಇದು ಬಿಗ್​ ಬಾಸ್​ ಸ್ಪರ್ಧಿಗಳಿಗೆ ಇಷ್ಟವಾಗಿಲ್ಲ. ಅಷ್ಟೇ ಏಕೆ, ಆಪ್ತ ಎನಿಸಿಕೊಂಡಿರುವ ಪ್ರಶಾಂತ್​ ಸಂಬರಗಿಯೇ ಈಗ ಚಕ್ರವರ್ತಿಗೆ ನಂಬಿಕೆ ದ್ರೋಹ ಬಗೆದಿದ್ದಾರೆ.

ಚಕ್ರವರ್ತಿ ಚಂದ್ರಚೂಡ್​ ನನ್ನ ಆಪ್ತ ಗೆಳೆಯ. ನಮ್ಮಿಬ್ಬರಿಗೂ ಪರಸ್ಪರ ಪರಿಚಯ ಇದೆ ಎಂದು ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಹೇಳಿಕೊಂಡಿದ್ದರು. ಅಷ್ಟೇ ಅಲ್ಲ, ಮನೆಯಲ್ಲಿ ಇಬ್ಬರೂ ಒಟ್ಟಿಗೆ ಇರುತ್ತಿದ್ದರು. ಇವರಿಬ್ಬರ ಗೆಳೆತನ ನೋಡಿದ ಮನೆ ಮಂದಿ, ಪ್ರಶಾಂತ್​ಗೆ ಹೊಸ ಗೆಳೆಯ ಸಿಕ್ಕಿದ್ದಾರೆ ಎಂದು ನಕ್ಕಿದ್ದಾರೆ. ಆದರೆ, ವೀಕೆಂಡ್​ನಲ್ಲಿ ಸುದೀಪ್​ ಎದುರು ಸಂಬರಗಿ ಉಲ್ಟಾ ಹೊಡೆದಿದ್ದಾರೆ.

ಬಿಗ್​ ಬಾಸ್ ಮನೆಗೆ ಬಂದಾಗ ಹೇಗೆ ಚಂದ್ರಚೂಡ್​ ಎಲ್ಲರನ್ನೂ ತೀರ್ಮಾನಿಸಿದ್ದರೋ ಅದೇ ರೀತಿ ಚಂದ್ರಚೂಡ್​ ಬಗ್ಗೆ ಅಭಿಪ್ರಾಯ ಹೊರ ಹಾಕಲು ಮನೆಯವರಿಗೆ ಅವಕಾಶ ನೀಡಲಾಗಿತ್ತು. ಆಗ ಕೆಲವರು ಚಂದ್ರಚೂಡ್​ಗೆ ಕೊಟ್ಟ ಅಂಕ ತುಂಬಾನೇ ಕಡಿಮೆ ಆಗಿತ್ತು!

ಬಿಗ್​ ಬಾಸ್​ ಮನೆಯಲ್ಲಿ ಚಂದ್ರಚೂಡ್​ಗೆ ಅರವಿಂದ್ ಕೆ.ಪಿ. ಶೂನ್ಯ ಅಂಕವನ್ನು ನೀಡಿದರು. ಬೇರೆಯವರ ಬಗ್ಗೆ ಕಮೆಂಟ್​ ಮಾಡೋದು ತುಂಬಾನೇ ಸುಲಭ. ತಾವು ಸರಿಯಾಗಿ ನಡೆಯೋದು ತುಂಬಾನೇ ಕಷ್ಟ ಎಂದರು. ಅವರು ತುಂಬಾನೇ ಡಾಮಿನೇಟ್​ ಮಾಡುತ್ತಾರೆ ಎನ್ನುವ ಆರೋಪವನ್ನು ವಿಶ್ವ ಹಾಗೂ ದಿವ್ಯಾ ಉರುಡುಗ ಮಾಡಿದರು. ಚಂದ್ರಚೂಡ್​ ಬಗ್ಗೆ ಮಾತನಾಡಿದ ರಾಜೀವ್​, ಅವರಿಗೆ ಭಾಷೆಯ ಮೇಲೆ ಹಿಡಿತ ಇದೆ. ಅದನ್ನ ಇಟ್ಟುಕೊಂಡು ಬೇರೆಯ ಟ್ಯಾಲೆಂಟ್​ ರೂಲ್​ ಮಾಡೋಕೆ ಆಗಲ್ಲ ಎಂದರು.

ಅಚ್ಚರಿ ಎಂದರೆ ಪ್ರಶಾಂತ್​-ಚಂದ್ರಚೂಡ್​ ಆಪ್ತರು. ಆದಾಗ್ಯೂ ಅವರಿಗೆ ಪ್ರಶಾಂತ್​ ನೀಡಿದ್ದು ಮೈನಸ್​ ಒಂದು ಅಂಕ! ಇದು ಸಾಕಷ್ಟು ಜನರಿಗೆ ಅಚ್ಚರಿ ಮೂಡಿಸಿದೆ. ಅಷ್ಟಕ್ಕೂ ಪ್ರಶಾಂತ್ ಅಷ್ಟು ಕಡಿಮೆ ಅಂಕ ನೀಡೋಕೆ ಕಾರಣವೇನು ಎನ್ನುವುದನ್ನು ಇಂದಿನ (ಮಾರ್ಚ್​​ 03) ಸಂಚಿಕೆಯಲ್ಲಿ ನೋಡಬೇಕಿದೆ.

ಇದನ್ನೂ ಓದಿ: ಐದನೇ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ

Follow Us
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ