ಗೆಳೆಯ ಎನ್ನುತ್ತಲೇ ಚಂದ್ರಚೂಡ್​ಗೆ ನಂಬಿಕೆ ದ್ರೋಹ ಬಗೆದ ಸಂಬರಗಿ; ಇಲ್ಲಿದೆ ವಿಡಿಯೋ ಸಾಕ್ಷಿ

ಚಕ್ರವರ್ತಿ ಚಂದ್ರಚೂಡ್​ ನನ್ನ ಆಪ್ತ ಗೆಳೆಯ. ನಮ್ಮಿಬ್ಬರಿಗೂ ಪರಸ್ಪರ ಪರಿಚಯ ಇದೆ ಎಂದು ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಹೇಳಿಕೊಂಡಿದ್ದರು. ಅಷ್ಟೇ ಅಲ್ಲ, ಮನೆಯಲ್ಲಿ ಇಬ್ಬರೂ ಒಟ್ಟಿಗೆ ಇರುತ್ತಿದ್ದರು.

ಗೆಳೆಯ ಎನ್ನುತ್ತಲೇ ಚಂದ್ರಚೂಡ್​ಗೆ ನಂಬಿಕೆ ದ್ರೋಹ ಬಗೆದ ಸಂಬರಗಿ; ಇಲ್ಲಿದೆ ವಿಡಿಯೋ ಸಾಕ್ಷಿ
ಚಕ್ರವರ್ತಿ ಚಂದ್ರಚೂಡ್​-ಪ್ರಶಾಂತ್​ ಸಂಬರಗಿ
Follow us
| Updated By: ganapathi bhat

Updated on: Apr 03, 2021 | 6:05 PM

ಪತ್ರಕರ್ತ ಹಾಗೂ ಸಿನಿಮಾ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್​ ಬಿಗ್​ ಬಾಸ್​ ಮನೆಯಲ್ಲಿ ವೈಲ್ಡ್​ ಕಾರ್ಡ್​ ಎಂಟ್ರಿ ತೆಗೆದುಕೊಂಡಿದ್ದಾರೆ. ಬಂದ ದಿನವೇ ಮನೆಯವರ ಮೇಲೆ ಡಾಮಿನೇಟ್​ ಮಾಡೋಕೆ ಪ್ರಯತ್ನ ಮಾಡಿದ್ದಾರೆ. ಅಷ್ಟೇ ಅಲ್ಲ, ಬಂದ ದಿನ ಎಲ್ಲರ ಸಾಮರ್ಥ್ಯವನ್ನು ಆಡಿಕೊಂಡಿದ್ದಾರೆ. ಇದು ಬಿಗ್​ ಬಾಸ್​ ಸ್ಪರ್ಧಿಗಳಿಗೆ ಇಷ್ಟವಾಗಿಲ್ಲ. ಅಷ್ಟೇ ಏಕೆ, ಆಪ್ತ ಎನಿಸಿಕೊಂಡಿರುವ ಪ್ರಶಾಂತ್​ ಸಂಬರಗಿಯೇ ಈಗ ಚಕ್ರವರ್ತಿಗೆ ನಂಬಿಕೆ ದ್ರೋಹ ಬಗೆದಿದ್ದಾರೆ.

ಚಕ್ರವರ್ತಿ ಚಂದ್ರಚೂಡ್​ ನನ್ನ ಆಪ್ತ ಗೆಳೆಯ. ನಮ್ಮಿಬ್ಬರಿಗೂ ಪರಸ್ಪರ ಪರಿಚಯ ಇದೆ ಎಂದು ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಹೇಳಿಕೊಂಡಿದ್ದರು. ಅಷ್ಟೇ ಅಲ್ಲ, ಮನೆಯಲ್ಲಿ ಇಬ್ಬರೂ ಒಟ್ಟಿಗೆ ಇರುತ್ತಿದ್ದರು. ಇವರಿಬ್ಬರ ಗೆಳೆತನ ನೋಡಿದ ಮನೆ ಮಂದಿ, ಪ್ರಶಾಂತ್​ಗೆ ಹೊಸ ಗೆಳೆಯ ಸಿಕ್ಕಿದ್ದಾರೆ ಎಂದು ನಕ್ಕಿದ್ದಾರೆ. ಆದರೆ, ವೀಕೆಂಡ್​ನಲ್ಲಿ ಸುದೀಪ್​ ಎದುರು ಸಂಬರಗಿ ಉಲ್ಟಾ ಹೊಡೆದಿದ್ದಾರೆ.

ಬಿಗ್​ ಬಾಸ್ ಮನೆಗೆ ಬಂದಾಗ ಹೇಗೆ ಚಂದ್ರಚೂಡ್​ ಎಲ್ಲರನ್ನೂ ತೀರ್ಮಾನಿಸಿದ್ದರೋ ಅದೇ ರೀತಿ ಚಂದ್ರಚೂಡ್​ ಬಗ್ಗೆ ಅಭಿಪ್ರಾಯ ಹೊರ ಹಾಕಲು ಮನೆಯವರಿಗೆ ಅವಕಾಶ ನೀಡಲಾಗಿತ್ತು. ಆಗ ಕೆಲವರು ಚಂದ್ರಚೂಡ್​ಗೆ ಕೊಟ್ಟ ಅಂಕ ತುಂಬಾನೇ ಕಡಿಮೆ ಆಗಿತ್ತು!

ಬಿಗ್​ ಬಾಸ್​ ಮನೆಯಲ್ಲಿ ಚಂದ್ರಚೂಡ್​ಗೆ ಅರವಿಂದ್ ಕೆ.ಪಿ. ಶೂನ್ಯ ಅಂಕವನ್ನು ನೀಡಿದರು. ಬೇರೆಯವರ ಬಗ್ಗೆ ಕಮೆಂಟ್​ ಮಾಡೋದು ತುಂಬಾನೇ ಸುಲಭ. ತಾವು ಸರಿಯಾಗಿ ನಡೆಯೋದು ತುಂಬಾನೇ ಕಷ್ಟ ಎಂದರು. ಅವರು ತುಂಬಾನೇ ಡಾಮಿನೇಟ್​ ಮಾಡುತ್ತಾರೆ ಎನ್ನುವ ಆರೋಪವನ್ನು ವಿಶ್ವ ಹಾಗೂ ದಿವ್ಯಾ ಉರುಡುಗ ಮಾಡಿದರು. ಚಂದ್ರಚೂಡ್​ ಬಗ್ಗೆ ಮಾತನಾಡಿದ ರಾಜೀವ್​, ಅವರಿಗೆ ಭಾಷೆಯ ಮೇಲೆ ಹಿಡಿತ ಇದೆ. ಅದನ್ನ ಇಟ್ಟುಕೊಂಡು ಬೇರೆಯ ಟ್ಯಾಲೆಂಟ್​ ರೂಲ್​ ಮಾಡೋಕೆ ಆಗಲ್ಲ ಎಂದರು.

ಅಚ್ಚರಿ ಎಂದರೆ ಪ್ರಶಾಂತ್​-ಚಂದ್ರಚೂಡ್​ ಆಪ್ತರು. ಆದಾಗ್ಯೂ ಅವರಿಗೆ ಪ್ರಶಾಂತ್​ ನೀಡಿದ್ದು ಮೈನಸ್​ ಒಂದು ಅಂಕ! ಇದು ಸಾಕಷ್ಟು ಜನರಿಗೆ ಅಚ್ಚರಿ ಮೂಡಿಸಿದೆ. ಅಷ್ಟಕ್ಕೂ ಪ್ರಶಾಂತ್ ಅಷ್ಟು ಕಡಿಮೆ ಅಂಕ ನೀಡೋಕೆ ಕಾರಣವೇನು ಎನ್ನುವುದನ್ನು ಇಂದಿನ (ಮಾರ್ಚ್​​ 03) ಸಂಚಿಕೆಯಲ್ಲಿ ನೋಡಬೇಕಿದೆ.

ಇದನ್ನೂ ಓದಿ: ಐದನೇ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ

ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್