ಗೆಳೆಯ ಎನ್ನುತ್ತಲೇ ಚಂದ್ರಚೂಡ್​ಗೆ ನಂಬಿಕೆ ದ್ರೋಹ ಬಗೆದ ಸಂಬರಗಿ; ಇಲ್ಲಿದೆ ವಿಡಿಯೋ ಸಾಕ್ಷಿ

ಚಕ್ರವರ್ತಿ ಚಂದ್ರಚೂಡ್​ ನನ್ನ ಆಪ್ತ ಗೆಳೆಯ. ನಮ್ಮಿಬ್ಬರಿಗೂ ಪರಸ್ಪರ ಪರಿಚಯ ಇದೆ ಎಂದು ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಹೇಳಿಕೊಂಡಿದ್ದರು. ಅಷ್ಟೇ ಅಲ್ಲ, ಮನೆಯಲ್ಲಿ ಇಬ್ಬರೂ ಒಟ್ಟಿಗೆ ಇರುತ್ತಿದ್ದರು.

ಗೆಳೆಯ ಎನ್ನುತ್ತಲೇ ಚಂದ್ರಚೂಡ್​ಗೆ ನಂಬಿಕೆ ದ್ರೋಹ ಬಗೆದ ಸಂಬರಗಿ; ಇಲ್ಲಿದೆ ವಿಡಿಯೋ ಸಾಕ್ಷಿ
ಚಕ್ರವರ್ತಿ ಚಂದ್ರಚೂಡ್​-ಪ್ರಶಾಂತ್​ ಸಂಬರಗಿ
Edited By:

Updated on: Apr 03, 2021 | 6:05 PM

ಪತ್ರಕರ್ತ ಹಾಗೂ ಸಿನಿಮಾ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್​ ಬಿಗ್​ ಬಾಸ್​ ಮನೆಯಲ್ಲಿ ವೈಲ್ಡ್​ ಕಾರ್ಡ್​ ಎಂಟ್ರಿ ತೆಗೆದುಕೊಂಡಿದ್ದಾರೆ. ಬಂದ ದಿನವೇ ಮನೆಯವರ ಮೇಲೆ ಡಾಮಿನೇಟ್​ ಮಾಡೋಕೆ ಪ್ರಯತ್ನ ಮಾಡಿದ್ದಾರೆ. ಅಷ್ಟೇ ಅಲ್ಲ, ಬಂದ ದಿನ ಎಲ್ಲರ ಸಾಮರ್ಥ್ಯವನ್ನು ಆಡಿಕೊಂಡಿದ್ದಾರೆ. ಇದು ಬಿಗ್​ ಬಾಸ್​ ಸ್ಪರ್ಧಿಗಳಿಗೆ ಇಷ್ಟವಾಗಿಲ್ಲ. ಅಷ್ಟೇ ಏಕೆ, ಆಪ್ತ ಎನಿಸಿಕೊಂಡಿರುವ ಪ್ರಶಾಂತ್​ ಸಂಬರಗಿಯೇ ಈಗ ಚಕ್ರವರ್ತಿಗೆ ನಂಬಿಕೆ ದ್ರೋಹ ಬಗೆದಿದ್ದಾರೆ.

ಚಕ್ರವರ್ತಿ ಚಂದ್ರಚೂಡ್​ ನನ್ನ ಆಪ್ತ ಗೆಳೆಯ. ನಮ್ಮಿಬ್ಬರಿಗೂ ಪರಸ್ಪರ ಪರಿಚಯ ಇದೆ ಎಂದು ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಹೇಳಿಕೊಂಡಿದ್ದರು. ಅಷ್ಟೇ ಅಲ್ಲ, ಮನೆಯಲ್ಲಿ ಇಬ್ಬರೂ ಒಟ್ಟಿಗೆ ಇರುತ್ತಿದ್ದರು. ಇವರಿಬ್ಬರ ಗೆಳೆತನ ನೋಡಿದ ಮನೆ ಮಂದಿ, ಪ್ರಶಾಂತ್​ಗೆ ಹೊಸ ಗೆಳೆಯ ಸಿಕ್ಕಿದ್ದಾರೆ ಎಂದು ನಕ್ಕಿದ್ದಾರೆ. ಆದರೆ, ವೀಕೆಂಡ್​ನಲ್ಲಿ ಸುದೀಪ್​ ಎದುರು ಸಂಬರಗಿ ಉಲ್ಟಾ ಹೊಡೆದಿದ್ದಾರೆ.

ಬಿಗ್​ ಬಾಸ್ ಮನೆಗೆ ಬಂದಾಗ ಹೇಗೆ ಚಂದ್ರಚೂಡ್​ ಎಲ್ಲರನ್ನೂ ತೀರ್ಮಾನಿಸಿದ್ದರೋ ಅದೇ ರೀತಿ ಚಂದ್ರಚೂಡ್​ ಬಗ್ಗೆ ಅಭಿಪ್ರಾಯ ಹೊರ ಹಾಕಲು ಮನೆಯವರಿಗೆ ಅವಕಾಶ ನೀಡಲಾಗಿತ್ತು. ಆಗ ಕೆಲವರು ಚಂದ್ರಚೂಡ್​ಗೆ ಕೊಟ್ಟ ಅಂಕ ತುಂಬಾನೇ ಕಡಿಮೆ ಆಗಿತ್ತು!

ಬಿಗ್​ ಬಾಸ್​ ಮನೆಯಲ್ಲಿ ಚಂದ್ರಚೂಡ್​ಗೆ ಅರವಿಂದ್ ಕೆ.ಪಿ. ಶೂನ್ಯ ಅಂಕವನ್ನು ನೀಡಿದರು. ಬೇರೆಯವರ ಬಗ್ಗೆ ಕಮೆಂಟ್​ ಮಾಡೋದು ತುಂಬಾನೇ ಸುಲಭ. ತಾವು ಸರಿಯಾಗಿ ನಡೆಯೋದು ತುಂಬಾನೇ ಕಷ್ಟ ಎಂದರು. ಅವರು ತುಂಬಾನೇ ಡಾಮಿನೇಟ್​ ಮಾಡುತ್ತಾರೆ ಎನ್ನುವ ಆರೋಪವನ್ನು ವಿಶ್ವ ಹಾಗೂ ದಿವ್ಯಾ ಉರುಡುಗ ಮಾಡಿದರು. ಚಂದ್ರಚೂಡ್​ ಬಗ್ಗೆ ಮಾತನಾಡಿದ ರಾಜೀವ್​, ಅವರಿಗೆ ಭಾಷೆಯ ಮೇಲೆ ಹಿಡಿತ ಇದೆ. ಅದನ್ನ ಇಟ್ಟುಕೊಂಡು ಬೇರೆಯ ಟ್ಯಾಲೆಂಟ್​ ರೂಲ್​ ಮಾಡೋಕೆ ಆಗಲ್ಲ ಎಂದರು.


ಅಚ್ಚರಿ ಎಂದರೆ ಪ್ರಶಾಂತ್​-ಚಂದ್ರಚೂಡ್​ ಆಪ್ತರು. ಆದಾಗ್ಯೂ ಅವರಿಗೆ ಪ್ರಶಾಂತ್​ ನೀಡಿದ್ದು ಮೈನಸ್​ ಒಂದು ಅಂಕ! ಇದು ಸಾಕಷ್ಟು ಜನರಿಗೆ ಅಚ್ಚರಿ ಮೂಡಿಸಿದೆ. ಅಷ್ಟಕ್ಕೂ ಪ್ರಶಾಂತ್ ಅಷ್ಟು ಕಡಿಮೆ ಅಂಕ ನೀಡೋಕೆ ಕಾರಣವೇನು ಎನ್ನುವುದನ್ನು ಇಂದಿನ (ಮಾರ್ಚ್​​ 03) ಸಂಚಿಕೆಯಲ್ಲಿ ನೋಡಬೇಕಿದೆ.

ಇದನ್ನೂ ಓದಿ: ಐದನೇ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us