AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಭಾ ಬಳಿ ಇರುವ ಅಮೂಲ್ಯ ವಸ್ತು ಕದಿಯಲು ಸಂಬರಗಿ ಪ್ಲ್ಯಾನ್​; ಮಂಜು ಕೊಟ್ರು ಎಚ್ಚರಿಕೆ

ಇತ್ತೀಚೆಗೆ ಶಮಂತ್​ ಬಳಿ ಕುಳಿತಿದ್ದಾಗ ಮಾತನಾಡಿದ್ದ ಪ್ರಶಾಂತ್​, ಗೋಲ್ಡನ್​ ಪಾಸ್​ ಶುಭಾ ಬಳಿ ಇದೆ. ಅದನ್ನು ಹೇಗಾದರೂ ಮಾಡಿ ಎತ್ತಬೇಕು ಎಂದು ಹೇಳಿಕೊಂಡಿದ್ದರು.

ಶುಭಾ ಬಳಿ ಇರುವ ಅಮೂಲ್ಯ ವಸ್ತು ಕದಿಯಲು ಸಂಬರಗಿ ಪ್ಲ್ಯಾನ್​; ಮಂಜು ಕೊಟ್ರು ಎಚ್ಚರಿಕೆ
ಶುಭಾ ಫೂಂಜಾ
ರಾಜೇಶ್ ದುಗ್ಗುಮನೆ
|

Updated on: Apr 30, 2021 | 3:39 PM

Share

ಬಿಗ್​ ಬಾಸ್​ ಮನೆ ನಿತ್ಯ ಒಂದಿಲ್ಲೊಂದು ಹೊಸ ಬೆಳವಣಿಗೆಗೆ ಸಾಕ್ಷಿ ಆಗುತ್ತಲೇ ಇರುತ್ತದೆ. ಈಗ ಶುಭಾ ಪೂಂಜಾ ಬಳಿ ಇರುವ ಅತ್ಯಮೂಲ್ಯ ವಸ್ತುವನ್ನು ಕದಿಯಲು ಪ್ರಶಾಂತ್​ ಸಂಬರಗಿ ಪ್ಲ್ಯಾನ್​ ರೂಪಿಸಿದ್ದಾರೆ. ಮಂಜು ಪಾವಗಡಗೆ ಇದರ ಮುನ್ಸೂಚನೆ ಸಿಕ್ಕಿದೆ. ಅಲ್ಲದೆ, ಈ ವಿಚಾರದಲ್ಲಿ ಶುಭಾಗೆ ಎಚ್ಚರಿಕೆ ನೀಡಿದ್ದಾರೆ.

ಬಸ್​ ಟಾಸ್ಕ್​​ನಲ್ಲಿ ಗೆದ್ದವರಿಗೆ ಗೋಲ್ಡನ್​ ಪಾಸ್​ ಸಿಗುತ್ತಿತ್ತು. ಈ ಗೋಲ್ಡನ್​ ಪಾಸ್​ ತುಂಬಾನೇ ಮಹತ್ವ ಪಡೆದುಕೊಂಡಿದೆ. ಯಾವಾಗಲಾದರೂ ಎಲಿಮಿನೇಷನ್​ಗೆ ನಾಮಿನೇಟ್​ ಆದರೆ ಈ ಪಾಸ್​ ಬಳಕೆ ಮಾಡಿಕೊಳ್ಳಬಹುದು. ಈ ಮೂಲಕ ಎಲಿಮಿನೇಷನ್​ ತೂಗುಗತ್ತಿಯಿಂದ ಬಚಾವ್​ ಆಗಬಹುದು. ಟಾಸ್ಕ್​ನಲ್ಲಿ ಗೆದ್ದು ರಾಜೀವ್​ ಗೋಲ್ಡನ್​ ಪಾಸ್​ ತೆಗೆದುಕೊಂಡಿದ್ದರು. ಆದರೆ, ಅದನ್ನು ಅವರು ಬಳಕೆ ಮಾಡಿಕೊಂಡಿರಲಿಲ್ಲ. ಹೀಗಾಗಿ, ಎಲಿಮಿನೇಟ್​ ಆದರು. ಎಂಟನೇ ವಾರ ಅವರು ಎಲಿಮಿನೇಷನ್​ ಆಗಿ ಹೊರ ಹೋಗುವಾಗ ಈ ಪಾಸ್​ಅನ್ನು ಶುಭಾಗೆ ನೀಡಿ ತೆರಳಿದ್ದರು.

ಶುಭಾ ಈ ಗೋಲ್ಡನ್​ ಪಾಸ್ಅನ್ನು ಬ್ಯಾಗ್​ನಲ್ಲಿ ಇಟ್ಟುಕೊಂಡಿದ್ದಾರೆ. ಇತ್ತೀಚೆಗೆ ಶಮಂತ್​ ಬಳಿ ಕುಳಿತಿದ್ದಾಗ ಮಾತನಾಡಿದ್ದ ಪ್ರಶಾಂತ್​, ಗೋಲ್ಡನ್​ ಪಾಸ್​ ಶುಭಾ ಬಳಿ ಇದೆ. ಅದನ್ನು ಹೇಗಾದರೂ ಮಾಡಿ ಎತ್ತಬೇಕು ಎಂದು ಹೇಳಿಕೊಂಡಿದ್ದರು.

ಇದರ ಸೂಚನೆ ಮಂಜು ಪಾವಗಡಗೆ ಸಿಕ್ಕಂತೆ ಕಾಣುತ್ತಿದೆ. ಹೀಗಾಗಿ ಶುಭಾ ಅವರನ್ನು ಕರೆದು ಕಿವಿಮಾತು ಹೇಳಿದ್ದಾರೆ. ಗೋಲ್ಡನ್​ ಪಾಸ್​ ಸರಿಯಾಗಿ ಇಟ್ಟುಕೋ. ಮನೆಯಲ್ಲಿ ಯಾರನ್ನೂ ನಂಬೋಕೆ ಆಗೋದಿಲ್ಲ. ನಿಯಮದಲ್ಲಿ ಅದನ್ನು ಕದಿಯಬಹುದು ಎಂದಿದೆ. ಹೀಗಾಗಿ, ಅದನ್ನು ಜೋಪಾನ ಮಾಡಿಟ್ಟುಕೊಂಡಷ್ಟು ಒಳ್ಳೆಯದು ಎಂದಿದ್ದಾರೆ. ಶುಭಾಗೆ ಇದು ಹೌದೆನ್ನಿಸಿ ತಲೆಯಾಡಿಸಿದ್ದಾರೆ.

ಇದನ್ನೂ ಓದಿ:  Kichcha Sudeep Health update: ಆರೋಗ್ಯ ಮತ್ತು ಬಿಗ್​ ಬಾಸ್​ ಬಗ್ಗೆ ಗುಡ್​ ನ್ಯೂಸ್​ ಕೊಟ್ಟ ಕಿಚ್ಚ ಸುದೀಪ್​

ಆಪ್ತ ಚಂದ್ರಚೂಡ್​ ವಿರುದ್ಧವೇ ತಿರುಗಿಬಿದ್ದ ಪ್ರಶಾಂತ್​ ಸಂಬರಗಿ; ಬಿಗ್​ ಬಾಸ್​ ಮನೆಯಲ್ಲಿ 36 ಗಂಟೆಗಳ ಉಪವಾಸ

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ