AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಭಾ ಬಳಿ ಇರುವ ಅಮೂಲ್ಯ ವಸ್ತು ಕದಿಯಲು ಸಂಬರಗಿ ಪ್ಲ್ಯಾನ್​; ಮಂಜು ಕೊಟ್ರು ಎಚ್ಚರಿಕೆ

ಇತ್ತೀಚೆಗೆ ಶಮಂತ್​ ಬಳಿ ಕುಳಿತಿದ್ದಾಗ ಮಾತನಾಡಿದ್ದ ಪ್ರಶಾಂತ್​, ಗೋಲ್ಡನ್​ ಪಾಸ್​ ಶುಭಾ ಬಳಿ ಇದೆ. ಅದನ್ನು ಹೇಗಾದರೂ ಮಾಡಿ ಎತ್ತಬೇಕು ಎಂದು ಹೇಳಿಕೊಂಡಿದ್ದರು.

ಶುಭಾ ಬಳಿ ಇರುವ ಅಮೂಲ್ಯ ವಸ್ತು ಕದಿಯಲು ಸಂಬರಗಿ ಪ್ಲ್ಯಾನ್​; ಮಂಜು ಕೊಟ್ರು ಎಚ್ಚರಿಕೆ
ಶುಭಾ ಫೂಂಜಾ
ರಾಜೇಶ್ ದುಗ್ಗುಮನೆ
|

Updated on: Apr 30, 2021 | 3:39 PM

Share

ಬಿಗ್​ ಬಾಸ್​ ಮನೆ ನಿತ್ಯ ಒಂದಿಲ್ಲೊಂದು ಹೊಸ ಬೆಳವಣಿಗೆಗೆ ಸಾಕ್ಷಿ ಆಗುತ್ತಲೇ ಇರುತ್ತದೆ. ಈಗ ಶುಭಾ ಪೂಂಜಾ ಬಳಿ ಇರುವ ಅತ್ಯಮೂಲ್ಯ ವಸ್ತುವನ್ನು ಕದಿಯಲು ಪ್ರಶಾಂತ್​ ಸಂಬರಗಿ ಪ್ಲ್ಯಾನ್​ ರೂಪಿಸಿದ್ದಾರೆ. ಮಂಜು ಪಾವಗಡಗೆ ಇದರ ಮುನ್ಸೂಚನೆ ಸಿಕ್ಕಿದೆ. ಅಲ್ಲದೆ, ಈ ವಿಚಾರದಲ್ಲಿ ಶುಭಾಗೆ ಎಚ್ಚರಿಕೆ ನೀಡಿದ್ದಾರೆ.

ಬಸ್​ ಟಾಸ್ಕ್​​ನಲ್ಲಿ ಗೆದ್ದವರಿಗೆ ಗೋಲ್ಡನ್​ ಪಾಸ್​ ಸಿಗುತ್ತಿತ್ತು. ಈ ಗೋಲ್ಡನ್​ ಪಾಸ್​ ತುಂಬಾನೇ ಮಹತ್ವ ಪಡೆದುಕೊಂಡಿದೆ. ಯಾವಾಗಲಾದರೂ ಎಲಿಮಿನೇಷನ್​ಗೆ ನಾಮಿನೇಟ್​ ಆದರೆ ಈ ಪಾಸ್​ ಬಳಕೆ ಮಾಡಿಕೊಳ್ಳಬಹುದು. ಈ ಮೂಲಕ ಎಲಿಮಿನೇಷನ್​ ತೂಗುಗತ್ತಿಯಿಂದ ಬಚಾವ್​ ಆಗಬಹುದು. ಟಾಸ್ಕ್​ನಲ್ಲಿ ಗೆದ್ದು ರಾಜೀವ್​ ಗೋಲ್ಡನ್​ ಪಾಸ್​ ತೆಗೆದುಕೊಂಡಿದ್ದರು. ಆದರೆ, ಅದನ್ನು ಅವರು ಬಳಕೆ ಮಾಡಿಕೊಂಡಿರಲಿಲ್ಲ. ಹೀಗಾಗಿ, ಎಲಿಮಿನೇಟ್​ ಆದರು. ಎಂಟನೇ ವಾರ ಅವರು ಎಲಿಮಿನೇಷನ್​ ಆಗಿ ಹೊರ ಹೋಗುವಾಗ ಈ ಪಾಸ್​ಅನ್ನು ಶುಭಾಗೆ ನೀಡಿ ತೆರಳಿದ್ದರು.

ಶುಭಾ ಈ ಗೋಲ್ಡನ್​ ಪಾಸ್ಅನ್ನು ಬ್ಯಾಗ್​ನಲ್ಲಿ ಇಟ್ಟುಕೊಂಡಿದ್ದಾರೆ. ಇತ್ತೀಚೆಗೆ ಶಮಂತ್​ ಬಳಿ ಕುಳಿತಿದ್ದಾಗ ಮಾತನಾಡಿದ್ದ ಪ್ರಶಾಂತ್​, ಗೋಲ್ಡನ್​ ಪಾಸ್​ ಶುಭಾ ಬಳಿ ಇದೆ. ಅದನ್ನು ಹೇಗಾದರೂ ಮಾಡಿ ಎತ್ತಬೇಕು ಎಂದು ಹೇಳಿಕೊಂಡಿದ್ದರು.

ಇದರ ಸೂಚನೆ ಮಂಜು ಪಾವಗಡಗೆ ಸಿಕ್ಕಂತೆ ಕಾಣುತ್ತಿದೆ. ಹೀಗಾಗಿ ಶುಭಾ ಅವರನ್ನು ಕರೆದು ಕಿವಿಮಾತು ಹೇಳಿದ್ದಾರೆ. ಗೋಲ್ಡನ್​ ಪಾಸ್​ ಸರಿಯಾಗಿ ಇಟ್ಟುಕೋ. ಮನೆಯಲ್ಲಿ ಯಾರನ್ನೂ ನಂಬೋಕೆ ಆಗೋದಿಲ್ಲ. ನಿಯಮದಲ್ಲಿ ಅದನ್ನು ಕದಿಯಬಹುದು ಎಂದಿದೆ. ಹೀಗಾಗಿ, ಅದನ್ನು ಜೋಪಾನ ಮಾಡಿಟ್ಟುಕೊಂಡಷ್ಟು ಒಳ್ಳೆಯದು ಎಂದಿದ್ದಾರೆ. ಶುಭಾಗೆ ಇದು ಹೌದೆನ್ನಿಸಿ ತಲೆಯಾಡಿಸಿದ್ದಾರೆ.

ಇದನ್ನೂ ಓದಿ:  Kichcha Sudeep Health update: ಆರೋಗ್ಯ ಮತ್ತು ಬಿಗ್​ ಬಾಸ್​ ಬಗ್ಗೆ ಗುಡ್​ ನ್ಯೂಸ್​ ಕೊಟ್ಟ ಕಿಚ್ಚ ಸುದೀಪ್​

ಆಪ್ತ ಚಂದ್ರಚೂಡ್​ ವಿರುದ್ಧವೇ ತಿರುಗಿಬಿದ್ದ ಪ್ರಶಾಂತ್​ ಸಂಬರಗಿ; ಬಿಗ್​ ಬಾಸ್​ ಮನೆಯಲ್ಲಿ 36 ಗಂಟೆಗಳ ಉಪವಾಸ

ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್