AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜು, ರಾಜೀವ್​ಗೆ ಏಕಾಂಗಿಯಾಗಿ ಪಾಠ ಕಲಿಸಿ ಸೇಡು ತೀರಿಸಿಕೊಂಡ ಪ್ರಶಾಂತ್​; ಇದಕ್ಕೆ ಉರಿದುಕೊಂಡವರೆಷ್ಟೋ!

ಗೋಲ್ಡನ್​ ಪಾಸ್​ ಪಡೆಯುವಾಗಲೂ ಅಷ್ಟೆ, ರಾಜೀವ್​ ಹಾಗೂ ಶುಭಾ ಒಪ್ಪಂದ ಮಾಡಿಕೊಂಡಿದ್ದರು. ಇದರಿಂದ ರಾಜೀವ್​ ಗೆದ್ದರು ಎನ್ನಲಾಗುತ್ತಿದೆ. ಇದನ್ನು ಪ್ರಶಾಂತ್​ ನೆನಪಿನಲ್ಲಿ ಇಟ್ಟುಕೊಂಡಿದ್ದಾರೆ.

ಮಂಜು, ರಾಜೀವ್​ಗೆ ಏಕಾಂಗಿಯಾಗಿ ಪಾಠ ಕಲಿಸಿ ಸೇಡು ತೀರಿಸಿಕೊಂಡ ಪ್ರಶಾಂತ್​;  ಇದಕ್ಕೆ ಉರಿದುಕೊಂಡವರೆಷ್ಟೋ!
ಪ್ರಶಾಂತ್​-ಚಕ್ರವರ್ತಿ
ರಾಜೇಶ್ ದುಗ್ಗುಮನೆ
| Edited By: |

Updated on: Apr 25, 2021 | 7:18 AM

Share

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ ಸ್ಟ್ರಾಂಗ್​ ಸ್ಪರ್ಧಿ ಎನ್ನುವುದು ಬಹುತೇಕರಿಗೆ ಅರ್ಥವಾಗಿದೆ. ಪ್ರಶಾಂತ್​ ಸೇಡನ್ನು ಯಾವತ್ತೂ ಮರೆಯುವುದಿಲ್ಲ ಎಂಬುದು ಕೂಡ ಶನಿವಾರದ (ಎಪ್ರಿಲ್​ 24) ಎಪಿಸೋಡ್​ನಲ್ಲಿ ಬಿಗ್​ ಬಾಸ್​ ಸ್ಪರ್ಧಿಗಳಿಗೆ ಸ್ಪಷ್ಟವಾಗಿದೆ. ಕ್ಯಾಪ್ಟನ್ಸಿ ಟಾಸ್ಕ್​ನಲ್ಲಿ ಪ್ರಶಾಂತ್​ ಕೂಡ ಇದ್ದರು. ಆದಾಗ್ಯೂ ಅವರು ರಘು ಗೌಡ ಅವರನ್ನು ಗೆಲ್ಲಿಸುವ ಮೂಲಕ ಮಂಜು ಪಾವಗಡ ಹಾಗೂ ರಾಜೀವ್​ ವಿರುದ್ಧ ಸೇಡು ತೀರಿಸಿಕೊಂಡಿದ್ದಾರೆ.

ಹಾಸ್ಟೆಲ್​ ಟಾಸ್ಕ್​ನಲ್ಲಿ ದಿವ್ಯಾ ಗೆಲ್ಲೋಕೆ ಮಂಜು ಸಹಾಯ ಮಾಡಿದ್ದರು. ಈ ವಿಚಾರ ಬಯಲಾದ ನಂತರ ಮನೆಯವರಿಗೆ ಶಾಕ್​ ಆಗಿತ್ತು. ಇನ್ನು ಗೋಲ್ಡನ್​ ಪಾಸ್​ ಪಡೆಯುವಾಗಲೂ ಅಷ್ಟೆ, ರಾಜೀವ್​ ಹಾಗೂ ಶುಭಾ ಒಪ್ಪಂದ ಮಾಡಿಕೊಂಡಿದ್ದರು. ಇದರಿಂದ ರಾಜೀವ್​ ಗೆದ್ದರು ಎನ್ನಲಾಗುತ್ತಿದೆ. ಇದನ್ನು ಪ್ರಶಾಂತ್​ ನೆನಪಿನಲ್ಲಿ ಇಟ್ಟುಕೊಂಡಿದ್ದಾರೆ.

ಎಂಟನೇ ವಾರ ಕ್ಯಾಪ್ಟನ್ಸಿ ಟಾಸ್ಕ್​ ನಡೆದಿದೆ. ಗಾರ್ಡನ್​ ಏರಿಯಾದಲ್ಲಿ ಹೂವಿನ ಮಳೆ ಆಗುತ್ತದೆ. ಸ್ಪರ್ಧಿಗಳು ಹೂವನ್ನು ಸಂಗ್ರಹಿಸಬೇಕು, ಹೆಚ್ಚು ಹೂವಿದ್ದವರು ಕ್ಯಾಪ್ಟನ್​ ಆಗುತ್ತಾರೆ. ಕ್ಯಾಪ್ಟನ್ಸಿ ಟಾಸ್ಕ್​ನಲ್ಲಿದ್ದ ಮಂಜು, ರಾಜೀವ್​, ರಘು ಗೌಡ ಹಾಗೂ ಪ್ರಶಾಂತ್​ ಹೂವನ್ನು ಸಂಗ್ರಹಿಸೋಕೆ ಮುಂದಾದರು. ನಂತರ ಇದಕ್ಕೆ ಮನೆಯವರ ಸಹಾಯ ಕೂಡ ಪಡೆಯಬಹುದು ಎನ್ನುವ ಆದೇಶ ಬಂತು. ಆಗ ಅರವಿಂದ್​, ವೈಷ್ಣವಿ ಮೊದಲಾದವರು ರಘುಗೆ ಸಹಾಯ ಮಾಡಿದರು. ಕೊನೆಯಲ್ಲಿ ಅಚ್ಚರಿ ಎಂಬಂತೆ ಪ್ರಶಾಂತ್​ ತಾವು ಸಂಗ್ರಹಿಸಿದ್ದ ಹೂವನ್ನು ರಘು ಗೌಡಗೆ ನೀಡಿದರು. ಈ ಮೂಲಕ ರಘು ಕ್ಯಾಪ್ಟನ್​ ಆಗೋಕೆ ಸಹಾಯ ಮಾಡಿದರು.

ನಂತರ ಮಾತನಾಡಿದ ಪ್ರಶಾಂತ್​, ಗುಂಪು ಗಾರಿಕೆ ಮಾಡಿಕೊಂಡು ಆಡುವ ಮಂಜು ಹಾಗೂ ರಾಜೀವ್​ಗೆ ಒಂದು ಪಾಠ ಕಲಿಸಬೇಕಿತ್ತು. ಆ ಪಾಠವನ್ನು ನಾನು ಕಲಿಸಿದ್ದೇನೆ ಎಂದು ಹೆಮ್ಮೆಯಿಂದ ಹೇಳಿಕೊಂಡರು​. ಈ ವಿಚಾರದಲ್ಲಿ ರಾಜೀವ್​ ತುಂಬಾನೇ ಉರಿದುಕೊಂಡರು. ಪ್ರಶಾಂತ್​ ಮಾಡಿದ್ದು ಸರಿಯಲ್ಲ ಎನ್ನುವ ಮಾತನ್ನು ಕೂಡ ಹೇಳಿದರು.

ಇದನ್ನೂ ಓದಿ: ನಿನ್ನ ಚರಿತ್ರೆ, ಸಂಸ್ಕೃತಿ ಬಗ್ಗೆ ಗೊತ್ತಿದೆ, ಈಗ ಹೇಳಲಾ?; ಪ್ರಶಾಂತ್​ ಮಾತಿಗೆ ಅತ್ತ ನಿಧಿ ಸುಬ್ಬಯ್ಯ

ಮಾಡಿದ ತಪ್ಪಿಗೆ ಪ್ರಾಯಶ್ಚಿತ?; ತಾಯಾಣೆ ಬಡ ಮಕ್ಕಳಿಗೆ 10 ಸಾವಿರ ಮೊಟ್ಟೆ ದಾನ ಮಾಡ್ತೀನಿ ಎಂದ ಪ್ರಶಾಂತ್​ ಸಂಬರಗಿ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ