AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜು, ರಾಜೀವ್​ಗೆ ಏಕಾಂಗಿಯಾಗಿ ಪಾಠ ಕಲಿಸಿ ಸೇಡು ತೀರಿಸಿಕೊಂಡ ಪ್ರಶಾಂತ್​; ಇದಕ್ಕೆ ಉರಿದುಕೊಂಡವರೆಷ್ಟೋ!

ಗೋಲ್ಡನ್​ ಪಾಸ್​ ಪಡೆಯುವಾಗಲೂ ಅಷ್ಟೆ, ರಾಜೀವ್​ ಹಾಗೂ ಶುಭಾ ಒಪ್ಪಂದ ಮಾಡಿಕೊಂಡಿದ್ದರು. ಇದರಿಂದ ರಾಜೀವ್​ ಗೆದ್ದರು ಎನ್ನಲಾಗುತ್ತಿದೆ. ಇದನ್ನು ಪ್ರಶಾಂತ್​ ನೆನಪಿನಲ್ಲಿ ಇಟ್ಟುಕೊಂಡಿದ್ದಾರೆ.

ಮಂಜು, ರಾಜೀವ್​ಗೆ ಏಕಾಂಗಿಯಾಗಿ ಪಾಠ ಕಲಿಸಿ ಸೇಡು ತೀರಿಸಿಕೊಂಡ ಪ್ರಶಾಂತ್​;  ಇದಕ್ಕೆ ಉರಿದುಕೊಂಡವರೆಷ್ಟೋ!
ಪ್ರಶಾಂತ್​-ಚಕ್ರವರ್ತಿ
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Apr 25, 2021 | 7:18 AM

Share

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ ಸ್ಟ್ರಾಂಗ್​ ಸ್ಪರ್ಧಿ ಎನ್ನುವುದು ಬಹುತೇಕರಿಗೆ ಅರ್ಥವಾಗಿದೆ. ಪ್ರಶಾಂತ್​ ಸೇಡನ್ನು ಯಾವತ್ತೂ ಮರೆಯುವುದಿಲ್ಲ ಎಂಬುದು ಕೂಡ ಶನಿವಾರದ (ಎಪ್ರಿಲ್​ 24) ಎಪಿಸೋಡ್​ನಲ್ಲಿ ಬಿಗ್​ ಬಾಸ್​ ಸ್ಪರ್ಧಿಗಳಿಗೆ ಸ್ಪಷ್ಟವಾಗಿದೆ. ಕ್ಯಾಪ್ಟನ್ಸಿ ಟಾಸ್ಕ್​ನಲ್ಲಿ ಪ್ರಶಾಂತ್​ ಕೂಡ ಇದ್ದರು. ಆದಾಗ್ಯೂ ಅವರು ರಘು ಗೌಡ ಅವರನ್ನು ಗೆಲ್ಲಿಸುವ ಮೂಲಕ ಮಂಜು ಪಾವಗಡ ಹಾಗೂ ರಾಜೀವ್​ ವಿರುದ್ಧ ಸೇಡು ತೀರಿಸಿಕೊಂಡಿದ್ದಾರೆ.

ಹಾಸ್ಟೆಲ್​ ಟಾಸ್ಕ್​ನಲ್ಲಿ ದಿವ್ಯಾ ಗೆಲ್ಲೋಕೆ ಮಂಜು ಸಹಾಯ ಮಾಡಿದ್ದರು. ಈ ವಿಚಾರ ಬಯಲಾದ ನಂತರ ಮನೆಯವರಿಗೆ ಶಾಕ್​ ಆಗಿತ್ತು. ಇನ್ನು ಗೋಲ್ಡನ್​ ಪಾಸ್​ ಪಡೆಯುವಾಗಲೂ ಅಷ್ಟೆ, ರಾಜೀವ್​ ಹಾಗೂ ಶುಭಾ ಒಪ್ಪಂದ ಮಾಡಿಕೊಂಡಿದ್ದರು. ಇದರಿಂದ ರಾಜೀವ್​ ಗೆದ್ದರು ಎನ್ನಲಾಗುತ್ತಿದೆ. ಇದನ್ನು ಪ್ರಶಾಂತ್​ ನೆನಪಿನಲ್ಲಿ ಇಟ್ಟುಕೊಂಡಿದ್ದಾರೆ.

ಎಂಟನೇ ವಾರ ಕ್ಯಾಪ್ಟನ್ಸಿ ಟಾಸ್ಕ್​ ನಡೆದಿದೆ. ಗಾರ್ಡನ್​ ಏರಿಯಾದಲ್ಲಿ ಹೂವಿನ ಮಳೆ ಆಗುತ್ತದೆ. ಸ್ಪರ್ಧಿಗಳು ಹೂವನ್ನು ಸಂಗ್ರಹಿಸಬೇಕು, ಹೆಚ್ಚು ಹೂವಿದ್ದವರು ಕ್ಯಾಪ್ಟನ್​ ಆಗುತ್ತಾರೆ. ಕ್ಯಾಪ್ಟನ್ಸಿ ಟಾಸ್ಕ್​ನಲ್ಲಿದ್ದ ಮಂಜು, ರಾಜೀವ್​, ರಘು ಗೌಡ ಹಾಗೂ ಪ್ರಶಾಂತ್​ ಹೂವನ್ನು ಸಂಗ್ರಹಿಸೋಕೆ ಮುಂದಾದರು. ನಂತರ ಇದಕ್ಕೆ ಮನೆಯವರ ಸಹಾಯ ಕೂಡ ಪಡೆಯಬಹುದು ಎನ್ನುವ ಆದೇಶ ಬಂತು. ಆಗ ಅರವಿಂದ್​, ವೈಷ್ಣವಿ ಮೊದಲಾದವರು ರಘುಗೆ ಸಹಾಯ ಮಾಡಿದರು. ಕೊನೆಯಲ್ಲಿ ಅಚ್ಚರಿ ಎಂಬಂತೆ ಪ್ರಶಾಂತ್​ ತಾವು ಸಂಗ್ರಹಿಸಿದ್ದ ಹೂವನ್ನು ರಘು ಗೌಡಗೆ ನೀಡಿದರು. ಈ ಮೂಲಕ ರಘು ಕ್ಯಾಪ್ಟನ್​ ಆಗೋಕೆ ಸಹಾಯ ಮಾಡಿದರು.

ನಂತರ ಮಾತನಾಡಿದ ಪ್ರಶಾಂತ್​, ಗುಂಪು ಗಾರಿಕೆ ಮಾಡಿಕೊಂಡು ಆಡುವ ಮಂಜು ಹಾಗೂ ರಾಜೀವ್​ಗೆ ಒಂದು ಪಾಠ ಕಲಿಸಬೇಕಿತ್ತು. ಆ ಪಾಠವನ್ನು ನಾನು ಕಲಿಸಿದ್ದೇನೆ ಎಂದು ಹೆಮ್ಮೆಯಿಂದ ಹೇಳಿಕೊಂಡರು​. ಈ ವಿಚಾರದಲ್ಲಿ ರಾಜೀವ್​ ತುಂಬಾನೇ ಉರಿದುಕೊಂಡರು. ಪ್ರಶಾಂತ್​ ಮಾಡಿದ್ದು ಸರಿಯಲ್ಲ ಎನ್ನುವ ಮಾತನ್ನು ಕೂಡ ಹೇಳಿದರು.

ಇದನ್ನೂ ಓದಿ: ನಿನ್ನ ಚರಿತ್ರೆ, ಸಂಸ್ಕೃತಿ ಬಗ್ಗೆ ಗೊತ್ತಿದೆ, ಈಗ ಹೇಳಲಾ?; ಪ್ರಶಾಂತ್​ ಮಾತಿಗೆ ಅತ್ತ ನಿಧಿ ಸುಬ್ಬಯ್ಯ

ಮಾಡಿದ ತಪ್ಪಿಗೆ ಪ್ರಾಯಶ್ಚಿತ?; ತಾಯಾಣೆ ಬಡ ಮಕ್ಕಳಿಗೆ 10 ಸಾವಿರ ಮೊಟ್ಟೆ ದಾನ ಮಾಡ್ತೀನಿ ಎಂದ ಪ್ರಶಾಂತ್​ ಸಂಬರಗಿ

ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ಬ್ರೆಜಿಲ್​​ನಲ್ಲಿ ಮೋದಿ: ಶಿವತಾಂಡವ ಸ್ತೋತ್ರ, ಭರತನಾಟ್ಯ, ಸಾಂಬಾ ರೆಗಿ ಗೀತೆ
ಬ್ರೆಜಿಲ್​​ನಲ್ಲಿ ಮೋದಿ: ಶಿವತಾಂಡವ ಸ್ತೋತ್ರ, ಭರತನಾಟ್ಯ, ಸಾಂಬಾ ರೆಗಿ ಗೀತೆ
ಕೋಳಿ ಸಾರಿನ  ಋಣ; ತರುಣ್ ಜೊತೆ ಸಿನಿಮಾ ಮಾಡ್ತಾರೆ ಶಿವಣ್ಣ
ಕೋಳಿ ಸಾರಿನ  ಋಣ; ತರುಣ್ ಜೊತೆ ಸಿನಿಮಾ ಮಾಡ್ತಾರೆ ಶಿವಣ್ಣ
ಮಂಡ್ಯ ರೈತರ ಆಕ್ರೋಶಕ್ಕೆ ಮಣಿದು ತಡರಾತ್ರಿ ನೀರು ಬಿಡುಗಡೆ ಮಾಡಿದ ಸರ್ಕಾರ
ಮಂಡ್ಯ ರೈತರ ಆಕ್ರೋಶಕ್ಕೆ ಮಣಿದು ತಡರಾತ್ರಿ ನೀರು ಬಿಡುಗಡೆ ಮಾಡಿದ ಸರ್ಕಾರ
ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಹೃದಯ ತಪಾಸಣೆಗೆ ಮುಗಿಬಿದ್ದ ಜನಸಾಗರ
ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಹೃದಯ ತಪಾಸಣೆಗೆ ಮುಗಿಬಿದ್ದ ಜನಸಾಗರ