AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಡಿದ ತಪ್ಪಿಗೆ ಪ್ರಾಯಶ್ಚಿತ?; ತಾಯಾಣೆ ಬಡ ಮಕ್ಕಳಿಗೆ 10 ಸಾವಿರ ಮೊಟ್ಟೆ ದಾನ ಮಾಡ್ತೀನಿ ಎಂದ ಪ್ರಶಾಂತ್​ ಸಂಬರಗಿ

ನಾನು ಮನೆಯಲ್ಲಿ ಒಂದೆ ಹೊತ್ತು ಊಟ ಮಾಡ್ತೀನಿ. ಉಳಿದವರಿಗೆ ತಾಕತ್ತಿದೆಯಾ? ಎಂದು ಪ್ರಶಾಂತ್​ ಪ್ರಶ್ನೆ ಮಾಡಿದರು. ಮೊಟ್ಟೆ ದಾನ ಮಾಡುವ ನಿರ್ಧಾರದ ಬಗ್ಗೆ ಚಕ್ರವರ್ತಿ ಚಂದ್ರಚೂಡ್ ಸಂತಸ ವ್ಯಕ್ತಪಡಿಸಿದ್ದರು. 

ಮಾಡಿದ ತಪ್ಪಿಗೆ ಪ್ರಾಯಶ್ಚಿತ?; ತಾಯಾಣೆ ಬಡ ಮಕ್ಕಳಿಗೆ 10 ಸಾವಿರ ಮೊಟ್ಟೆ ದಾನ ಮಾಡ್ತೀನಿ ಎಂದ ಪ್ರಶಾಂತ್​ ಸಂಬರಗಿ
ಪ್ರಶಾಂತ್ ಸಂಬರಗಿ
ರಾಜೇಶ್ ದುಗ್ಗುಮನೆ
|

Updated on:Apr 24, 2021 | 3:08 PM

Share

ಪ್ರಶಾಂತ್ ಸಂಬರಗಿ ಬಿಗ್ ಬಾಸ್ ಮನೆಯಲ್ಲಿ ಒಂದಲ್ಲಾ ಒಂದು ವಿಚಾರಕ್ಕೆ ಚರ್ಚೆ ಆಗುತ್ತಲೇ ಇರುತ್ತಾರೆ. ಈ ಮೊದಲು ತುಪ್ಪ ಹಾಗೂ ಚಪಾತಿ ತಿಂದ ವಿಚಾರಕ್ಕೆ ಪ್ರಶಾಂತ್ ವಿವಾದಕ್ಕೆ ತುತ್ತಾಗಿದ್ದರು. ಈ ಬಾರಿ ಪ್ರಶಾಂತ್ ಮೊಟ್ಟೆ ವಿಚಾರಕ್ಕೆ ವಿವಾದಕ್ಕೆ ಸಿಲುಕಿದ್ದಾರೆ. ಊಟದ ವಿಚಾರಕ್ಕೆ ಪದೇ ಪದೇ ವಿವಾದಕ್ಕೆ ತುತ್ತಾಗುತ್ತಿರುವುದು ಪ್ರಶಾಂತ್​​ಗೆ ಬೇಸರ ತರಿಸಿದೆ. ಹೀಗಾಗಿ ಬಿಗ್ ಬಾಸ್ ಮನೆಯಲ್ಲಿ ಅವರು ಶಪಥ ಒಂದನ್ನು ಮಾಡಿದ್ದಾರೆ. ಮೊಟ್ಟೆಯನ್ನು ಓವನ್​​ನಲ್ಲಿ ಇಟ್ಟು ಬೇಯಿಸೋಕೆ ಮನೆ ಮಂದಿ ಮುಂದಾಗಿದ್ದರು. ನಿಧಿ ಹಾಗೂ ಪ್ರಶಾಂತ್ ಇಬ್ಬರೂ ಸೇರಿ ಮೊಟ್ಟೆ ಬೇಯಿಸಿದರು. ಆದರೆ, ಅದು ಒಡೆದು ಹೋಯಿತು. ಇದನ್ನು ನಾನು ಟ್ರೈಲ್ ನೋಡ್ತೀನಿ ಎಂದು ಪ್ರಶಾಂತ್ ತಿಂದರು. ಇದಾದ ನಂತರ ಮತ್ತೊಮ್ಮೆ ಪ್ರಶಾಂತ್ ಮೊಟ್ಟೆ ತಿನ್ನೋಕೆ ಮುಂದಾದರು. ಈ ವಿಚಾರ ಭಾರೀ ಚರ್ಚೆಗೆ ಕಾರಣವಾಯಿತು. ಮನೆಯವರ ಜತೆ ನಿಧಿ ಈ ಬಗ್ಗೆ ಅಪಸ್ವರ ತೆಗೆದರು. ಇದಕ್ಕೆ ಪ್ರಶಾಂತ್ ಬೇಸರಗೊಂಡರು.

ನಾನು ಮನೆಯಲ್ಲಿ ಏನು ತಿಂದರೂ ವಿವಾದ ಆಗುತ್ತದೆ. ಮೊಟ್ಟೆ ವಿವಾದ ಆಗಿರುವುದಕ್ಕೆ ಬಿಗ್ ಬಾಸ್ ಮನೆಯೇ ಸಾಕ್ಷಿ. ಹೊರಬಂದ ಕೂಡಲೇ 10 ಸಾವಿರ ಬಡ ಮಕ್ಕಳಿಗೆ ಮೊಟ್ಟೆ ಹಂಚುತ್ತೇನೆ. ತಾಯಾಣೆ ಇದನ್ನು ಸೀರಿಯಸ್ ಆಗಿ ತೆಗೆದುಕೊಂಡಿದ್ದೇನೆ. ಬಿಗ್ ಬಾಸ್ ನೀವು ಹೇಳಿದ ಶಾಲೆಗೆ 10 ಸಾವಿರ ಮೊಟ್ಟೆ ಕೊಡುತ್ತೇನೆ ಎಂದು ಪ್ರಶಾಂತ್ ಶಪಥ ಮಾಡಿದರು.

ನಾನು ಮನೆಯಲ್ಲಿ ಒಂದೇ  ಹೊತ್ತು ಊಟ ಮಾಡ್ತೀನಿ. ಉಳಿದವರಿಗೆ ತಾಕತ್ತಿದೆಯಾ? ಎಂದು ಪ್ರಶಾಂತ್​ ಪ್ರಶ್ನೆ ಮಾಡಿದರು. ಮೊಟ್ಟೆ ದಾನ ಮಾಡುವ ನಿರ್ಧಾರದ ಬಗ್ಗೆ ಚಕ್ರವರ್ತಿ ಚಂದ್ರಚೂಡ್ ಸಂತಸ ವ್ಯಕ್ತಪಡಿಸಿದ್ದರು.

ಆಗ ಮಾತನಾಡಿದ ಶಮಂತ್​ ಬ್ರೋ ಗೌಡ, ಮನೆಯವರಿಗೆ ಈ ಮಾತನ್ನು ಹೇಳಿ ಎಂದರು.  ಆ ರೀತಿ ಮಾಡೋದು ಸರಿಯಲ್ಲ. ನಾನು ಅದನ್ನು ಮಾಡಿ ತೋರಿಸಬೇಕು ಎಂದರು ಪ್ರಶಾಂತ್​. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ಕೂಡಲೇ ಅವರು​ ಮೊಟ್ಟೆ ದಾನ ಮಾಡುತ್ತಾರೋ ಅಥವಾ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: Kichcha Sudeep: ಆರೋಗ್ಯದ ಬಗ್ಗೆ ಅಪ್​ಡೇಟ್​ ನೀಡಿದ ಸುದೀಪ್​; ಈ ವಾರವೂ ಬಿಗ್​ ಬಾಸ್​ಗೆ ಕಿಚ್ಚ ಗೈರು

ಸೆಲ್ಫೀ ನೆಪದಲ್ಲಿ ಬಿಗ್​ ಬಾಸ್​ ಸ್ಪರ್ಧಿಗೆ ಎಲ್ಲರೆದುರೇ ಮುತ್ತಿಟ್ಟ ಅಭಿಮಾನಿ! ಮರುದಿನವೇ ಬಂತು ಕೊರೊನಾ

Published On - 3:02 pm, Sat, 24 April 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ