AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಡಿದ ತಪ್ಪಿಗೆ ಪ್ರಾಯಶ್ಚಿತ?; ತಾಯಾಣೆ ಬಡ ಮಕ್ಕಳಿಗೆ 10 ಸಾವಿರ ಮೊಟ್ಟೆ ದಾನ ಮಾಡ್ತೀನಿ ಎಂದ ಪ್ರಶಾಂತ್​ ಸಂಬರಗಿ

ನಾನು ಮನೆಯಲ್ಲಿ ಒಂದೆ ಹೊತ್ತು ಊಟ ಮಾಡ್ತೀನಿ. ಉಳಿದವರಿಗೆ ತಾಕತ್ತಿದೆಯಾ? ಎಂದು ಪ್ರಶಾಂತ್​ ಪ್ರಶ್ನೆ ಮಾಡಿದರು. ಮೊಟ್ಟೆ ದಾನ ಮಾಡುವ ನಿರ್ಧಾರದ ಬಗ್ಗೆ ಚಕ್ರವರ್ತಿ ಚಂದ್ರಚೂಡ್ ಸಂತಸ ವ್ಯಕ್ತಪಡಿಸಿದ್ದರು. 

ಮಾಡಿದ ತಪ್ಪಿಗೆ ಪ್ರಾಯಶ್ಚಿತ?; ತಾಯಾಣೆ ಬಡ ಮಕ್ಕಳಿಗೆ 10 ಸಾವಿರ ಮೊಟ್ಟೆ ದಾನ ಮಾಡ್ತೀನಿ ಎಂದ ಪ್ರಶಾಂತ್​ ಸಂಬರಗಿ
ಪ್ರಶಾಂತ್ ಸಂಬರಗಿ
ರಾಜೇಶ್ ದುಗ್ಗುಮನೆ
|

Updated on:Apr 24, 2021 | 3:08 PM

Share

ಪ್ರಶಾಂತ್ ಸಂಬರಗಿ ಬಿಗ್ ಬಾಸ್ ಮನೆಯಲ್ಲಿ ಒಂದಲ್ಲಾ ಒಂದು ವಿಚಾರಕ್ಕೆ ಚರ್ಚೆ ಆಗುತ್ತಲೇ ಇರುತ್ತಾರೆ. ಈ ಮೊದಲು ತುಪ್ಪ ಹಾಗೂ ಚಪಾತಿ ತಿಂದ ವಿಚಾರಕ್ಕೆ ಪ್ರಶಾಂತ್ ವಿವಾದಕ್ಕೆ ತುತ್ತಾಗಿದ್ದರು. ಈ ಬಾರಿ ಪ್ರಶಾಂತ್ ಮೊಟ್ಟೆ ವಿಚಾರಕ್ಕೆ ವಿವಾದಕ್ಕೆ ಸಿಲುಕಿದ್ದಾರೆ. ಊಟದ ವಿಚಾರಕ್ಕೆ ಪದೇ ಪದೇ ವಿವಾದಕ್ಕೆ ತುತ್ತಾಗುತ್ತಿರುವುದು ಪ್ರಶಾಂತ್​​ಗೆ ಬೇಸರ ತರಿಸಿದೆ. ಹೀಗಾಗಿ ಬಿಗ್ ಬಾಸ್ ಮನೆಯಲ್ಲಿ ಅವರು ಶಪಥ ಒಂದನ್ನು ಮಾಡಿದ್ದಾರೆ. ಮೊಟ್ಟೆಯನ್ನು ಓವನ್​​ನಲ್ಲಿ ಇಟ್ಟು ಬೇಯಿಸೋಕೆ ಮನೆ ಮಂದಿ ಮುಂದಾಗಿದ್ದರು. ನಿಧಿ ಹಾಗೂ ಪ್ರಶಾಂತ್ ಇಬ್ಬರೂ ಸೇರಿ ಮೊಟ್ಟೆ ಬೇಯಿಸಿದರು. ಆದರೆ, ಅದು ಒಡೆದು ಹೋಯಿತು. ಇದನ್ನು ನಾನು ಟ್ರೈಲ್ ನೋಡ್ತೀನಿ ಎಂದು ಪ್ರಶಾಂತ್ ತಿಂದರು. ಇದಾದ ನಂತರ ಮತ್ತೊಮ್ಮೆ ಪ್ರಶಾಂತ್ ಮೊಟ್ಟೆ ತಿನ್ನೋಕೆ ಮುಂದಾದರು. ಈ ವಿಚಾರ ಭಾರೀ ಚರ್ಚೆಗೆ ಕಾರಣವಾಯಿತು. ಮನೆಯವರ ಜತೆ ನಿಧಿ ಈ ಬಗ್ಗೆ ಅಪಸ್ವರ ತೆಗೆದರು. ಇದಕ್ಕೆ ಪ್ರಶಾಂತ್ ಬೇಸರಗೊಂಡರು.

ನಾನು ಮನೆಯಲ್ಲಿ ಏನು ತಿಂದರೂ ವಿವಾದ ಆಗುತ್ತದೆ. ಮೊಟ್ಟೆ ವಿವಾದ ಆಗಿರುವುದಕ್ಕೆ ಬಿಗ್ ಬಾಸ್ ಮನೆಯೇ ಸಾಕ್ಷಿ. ಹೊರಬಂದ ಕೂಡಲೇ 10 ಸಾವಿರ ಬಡ ಮಕ್ಕಳಿಗೆ ಮೊಟ್ಟೆ ಹಂಚುತ್ತೇನೆ. ತಾಯಾಣೆ ಇದನ್ನು ಸೀರಿಯಸ್ ಆಗಿ ತೆಗೆದುಕೊಂಡಿದ್ದೇನೆ. ಬಿಗ್ ಬಾಸ್ ನೀವು ಹೇಳಿದ ಶಾಲೆಗೆ 10 ಸಾವಿರ ಮೊಟ್ಟೆ ಕೊಡುತ್ತೇನೆ ಎಂದು ಪ್ರಶಾಂತ್ ಶಪಥ ಮಾಡಿದರು.

ನಾನು ಮನೆಯಲ್ಲಿ ಒಂದೇ  ಹೊತ್ತು ಊಟ ಮಾಡ್ತೀನಿ. ಉಳಿದವರಿಗೆ ತಾಕತ್ತಿದೆಯಾ? ಎಂದು ಪ್ರಶಾಂತ್​ ಪ್ರಶ್ನೆ ಮಾಡಿದರು. ಮೊಟ್ಟೆ ದಾನ ಮಾಡುವ ನಿರ್ಧಾರದ ಬಗ್ಗೆ ಚಕ್ರವರ್ತಿ ಚಂದ್ರಚೂಡ್ ಸಂತಸ ವ್ಯಕ್ತಪಡಿಸಿದ್ದರು.

ಆಗ ಮಾತನಾಡಿದ ಶಮಂತ್​ ಬ್ರೋ ಗೌಡ, ಮನೆಯವರಿಗೆ ಈ ಮಾತನ್ನು ಹೇಳಿ ಎಂದರು.  ಆ ರೀತಿ ಮಾಡೋದು ಸರಿಯಲ್ಲ. ನಾನು ಅದನ್ನು ಮಾಡಿ ತೋರಿಸಬೇಕು ಎಂದರು ಪ್ರಶಾಂತ್​. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ಕೂಡಲೇ ಅವರು​ ಮೊಟ್ಟೆ ದಾನ ಮಾಡುತ್ತಾರೋ ಅಥವಾ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: Kichcha Sudeep: ಆರೋಗ್ಯದ ಬಗ್ಗೆ ಅಪ್​ಡೇಟ್​ ನೀಡಿದ ಸುದೀಪ್​; ಈ ವಾರವೂ ಬಿಗ್​ ಬಾಸ್​ಗೆ ಕಿಚ್ಚ ಗೈರು

ಸೆಲ್ಫೀ ನೆಪದಲ್ಲಿ ಬಿಗ್​ ಬಾಸ್​ ಸ್ಪರ್ಧಿಗೆ ಎಲ್ಲರೆದುರೇ ಮುತ್ತಿಟ್ಟ ಅಭಿಮಾನಿ! ಮರುದಿನವೇ ಬಂತು ಕೊರೊನಾ

Published On - 3:02 pm, Sat, 24 April 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!