AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಪ್ರಶಾಂತ್​ ಸಂಬರಗಿ ಬರೆದ ಈ ಪುಸ್ತಕ 1 ಲಕ್ಷ ಪ್ರತಿ ಮಾರಾಟ ಆಗಿದೆಯಂತೆ!

ಅಷ್ಟಕ್ಕೂ ಯಾವುದು ಈ ಪುಸ್ತಕ? ‘ತುಪ್ಪಾ ತಿಂದಿದ್ದೇ ತಪ್ಪಾ?’ ಎನ್ನುವುದೇ ಇದರ ಟೈಟಲ್​! ಈ ಪುಸ್ತಕ ಒಂದು ಲಕ್ಷ ಕಾಪಿ ಮಾರಾಟ ಆಗಿದೆಯಂತೆ.

Bigg Boss Kannada: ಪ್ರಶಾಂತ್​ ಸಂಬರಗಿ ಬರೆದ ಈ ಪುಸ್ತಕ 1 ಲಕ್ಷ ಪ್ರತಿ ಮಾರಾಟ ಆಗಿದೆಯಂತೆ!
ಪ್ರಶಾಂತ್​ ಸಂಬರಗಿ
ರಾಜೇಶ್ ದುಗ್ಗುಮನೆ
| Edited By: |

Updated on: Mar 26, 2021 | 7:20 AM

Share

ಪ್ರಶಾಂತ್​ ಸಂಬರಗಿ ಸಾಮಾಜಿಕ ಕಾರ್ಯಕರ್ತನಾಗಿ ಗುರುತಿಸಿಕೊಂಡವರು. ಅವರು ಮನೆಗೆ ಹೋಗುವುದಕ್ಕೂ ಮೊದಲು ಸಾಕಷ್ಟು ವಿಚಾರಗಳ ಬಗ್ಗೆ ಧ್ವನಿ ಎತ್ತಿದ್ದಾರೆ. ಸಾಕಷ್ಟು ವಿವಾದಗಳನ್ನು ಕೂಡ ಮೈಮೇಲೆ ಎಳೆದುಕೊಂಡಿದ್ದಾರೆ. ಹೀಗಾಗಿ, ಬಿಗ್​ ಬಾಸ್​ ಮನೆಗೆ ಸೇರಿದ ನಂತರ ಅವರು ವಿವಾದ ಮಾಡಿಯೇ ಮಾಡುತ್ತಾರೆ ಎನ್ನುವುದು ಅನೇಕರ ನಂಬಿಕೆ ಆಗಿತ್ತು. ಮನೆಯಲ್ಲಿ ಸದಾ ಧ್ವನಿ ಏರಿಸಿಕೊಂಡು ಮಾತನಾಡುವ ಪ್ರಶಾಂತ್​ ಈಗ ತಾವು ಬರೆದ ಪುಸ್ತಕವೊಂದರ ಬಗ್ಗೆ ಹೇಳಿಕೊಂಡಿದ್ದಾರೆ. ಅಷ್ಟೇ ಅಲ್ಲ, ಈ ಪುಸ್ತಕ ಭಾರಿ ಸೇಲ್​ ಕೂಡ ಆಗಿದೆಯಂತೆ. ಅಷ್ಟಕ್ಕೂ ಯಾವುದು ಈ ಪುಸ್ತಕ? ತುಪ್ಪಾ ತಿಂದಿದ್ದು ತಪ್ಪಾ? ಎನ್ನುವುದೇ ಇದರ ಟೈಟಲ್​! ಈ ಪುಸ್ತಕ ಒಂದು ಲಕ್ಷ ಕಾಪಿ ಮಾರಾಟ ಆಗಿದೆಯಂತೆ. ಅಂದಹಾಗೆ, ಪ್ರಶಾಂತ್​ ಈ ಬಗ್ಗೆ ತುಂಬಾನೇ ಗಂಭೀರವಾಗಿ ಹೇಳಿಲ್ಲ. ಅವರು ಹೀಗೆ ಹೇಳಿದ್ದು ನಾಟಕೀಯವಾಗಿ.

ದೊಡ್ಮನೆಯ ಅಡುಗೆ ಮನೆಯಲ್ಲಿದ್ದ ತುಪ್ಪವನ್ನು ವಿಶ್ವ ಖಾಲಿ ಮಾಡಿದ್ದರು. ಪ್ರಶಾಂತ್​ ಎರಡು ಚಮಚ ತುಪ್ಪ​ ಮಾತ್ರ ತಿಂದಿದ್ದರೂ. ಆದರೂ, ಬಿಗ್​ ಬಾಸ್​ ಮನೆಯಲ್ಲಿ ತುಪ್ಪ ಖಾಲಿ ಮಾಡಿದ್ದಾರೆ ಎನ್ನುವ ಆರೋಪ ಪ್ರಶಾಂತ್​ ಸಂಬರಗಿ ಅವರ ಮೇಲೆ ಬಂದಿತ್ತು. ಅಲ್ಲದೆ, ಮನೆಯಲ್ಲಿ ಎರಡು ದಿನ ಈ ವಿಚಾರ ಭಾರೀ ಚರ್ಚೆ ಆಗಿದೆ. ಇದಕ್ಕೆ ಪ್ರಶಾಂತ್​ ತುಂಬಾನೇ ಬೇಸರಗೊಂಡಿದ್ದರು. ಅಷ್ಟೇ ಅಲ್ಲ, ತುಪ್ಪಾ ತಿಂದಿದ್ದೇ ತಪ್ಪಾ? ಎನ್ನುವ ಪುಸ್ತಕ ಬರೆಯುವುದಾಗಿ ಹೇಳಿದ್ದರು.

ತುಪ್ಪಾ ತಿಂದಿದ್ದು ತಪ್ಪಾ? ಪುಸ್ತಕ ಒಂದು ಲಕ್ಷ ಪ್ರತಿ ಸೇಲ್​ ಆಗೋಯ್ತು. ನಾನು ಪುಸ್ತಕದಲ್ಲಿ ಎಲ್ಲವನ್ನೂ ವಿವರವಾಗಿ ಬರೆದಿದ್ದೇನೆ. ಎರಡು ಗ್ರಾಂ ತುಪ್ಪ ತಿಂದಿದ್ದಕ್ಕೆ ಎರಡು ದಿನ ಮನೆಯಲ್ಲಿ ಮನಸ್ತಾಪ ಉಂಟಾಯಿತು ಎನ್ನುವುದನ್ನು ಉಲ್ಲೇಖ ಮಾಡಿದ್ದೇನೆ ಎಂದರು. ಇದನ್ನು ಕೇಳಿ ಮನೆಯವರೆಲ್ಲರೂ ನಕ್ಕಿದ್ದಾರೆ. ರಘು ಸೇರಿದಂತೆ ಅನೇಕರಿಗೆ ತುಪ್ಪ ಖಾಲಿ ಮಾಡಿದ್ದು ಪ್ರಶಾಂತ್​ ಅವರೇ ಎನ್ನುವ ಅನುಮಾನ ಈಗಲೂ ಇದೆ.

ಇದನ್ನೂ ಓದಿ: ಕುದುರೆ ಅಂದ್ರೆ ಅಶ್ವ, ಕ್ಯಾಪ್ಟನ್​ ಅಂದ್ರೆ ವಿಶ್ವ; ಕಳಪೆ ಎಂದವರಿಗೆ ಕ್ಯಾಪ್ಟನ್​ ಆಗುವ ಮೂಲಕ ಕೊಟ್ರು ಉತ್ತರ

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ