AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಾಜೆಕ್ಟ್​ ಕೆ’ ಕಥೆ ರಿವೀಲ್ ಮಾಡಿದ ನಿರ್ಮಾಪಕ; ವಿಷ್ಣುವಿನ ಆಧುನಿಕ ಅವತಾರದಲ್ಲಿ ಬರಲಿದ್ದಾರೆ ಪ್ರಭಾಸ್

Project K Movie: ‘ಪ್ರಾಜೆಕ್ಟ್​ ಕೆ’ ಚಿತ್ರದಲ್ಲಿ ಪ್ರಭಾಸ್ ಹಾಗೂ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ. ಅಮಿತಾಭ್​ ಬಚ್ಚನ್, ದಿಶಾ ಪಟಾಣಿ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

‘ಪ್ರಾಜೆಕ್ಟ್​ ಕೆ’ ಕಥೆ ರಿವೀಲ್ ಮಾಡಿದ ನಿರ್ಮಾಪಕ; ವಿಷ್ಣುವಿನ ಆಧುನಿಕ ಅವತಾರದಲ್ಲಿ ಬರಲಿದ್ದಾರೆ ಪ್ರಭಾಸ್
ಪ್ರಭಾಸ್
ರಾಜೇಶ್ ದುಗ್ಗುಮನೆ
|

Updated on:Mar 01, 2023 | 12:57 PM

Share

ಪ್ರಭಾಸ್ (Prabhas) ಹಾಗೂ ದೀಪಿಕಾ ಪಡುಕೋಣೆ ನಟನೆಯ ‘ಪ್ರಾಜೆಕ್ಟ್​ ಕೆ’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ನಾಗ್ ಅಶ್ವಿನ್ (Nag Ashwin) ನಿರ್ದೇಶನದ ಈ ಸಿನಿಮಾ 2024ರಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದಲ್ಲಿ ಸಾಕಷ್ಟು ವಿಎಫ್​ಎಕ್ಸ್​ ಬಳಕೆ ಆಗಿದೆ. ಇತ್ತೀಚೆಗೆ ಚಿತ್ರದ ಸಿನಿಮಾ ರಿಲೀಸ್ ದಿನಾಂಕ ರಿವೀಲ್ ಆಗಿತ್ತು. ಜನವರಿ 12ರಂದು ಈ ಚಿತ್ರ ತೆರೆಗೆ ಬರುತ್ತಿದೆ. ಈ ಸಿನಿಮಾದ ಕಥೆ ಬಗ್ಗೆ ಈಗ ನಿರ್ಮಾಪಕ ಅಶ್ವಿನಿ ದತ್ ಅವರು ಮಾಹಿತಿ ರಿವೀಲ್ ಮಾಡಿದ್ದಾರೆ. ‘ವೈಜಯಂತಿ ಮೂವೀಸ್​’ ಅಡಿಯಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. ‘ವಿಷ್ಣುವಿನ ಆಧುನಿಕ ಅವತಾರದಲ್ಲಿ ಚಿತ್ರದ ಕಥೆ ಸಾಗಲಿದೆ’ ಎಂದು ಅಶ್ವಿನಿ ಹೇಳಿದ್ದಾರೆ.

‘ಪ್ರಾಜೆಕ್ಟ್​ ಕೆ’ ಚಿತ್ರದಲ್ಲಿ ಪ್ರಭಾಸ್ ಹಾಗೂ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ. ಅಮಿತಾಭ್​ ಬಚ್ಚನ್, ದಿಶಾ ಪಟಾಣಿ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಕಥೆ ಏನು, ಸಿನಿಮಾದಲ್ಲಿ ಪ್ರಭಾಸ್ ಲುಕ್ ಹೇಗಿದೆ ಎಂಬಿತ್ಯಾದಿ ವಿಚಾರಗಳು ಗುಟ್ಟಾಗೇ ಇದ್ದವು. ಈಗ ‘ಪ್ರಾಜೆಕ್ಟ್​ ಕೆ’ ಚಿತ್ರದ ಕಥೆ ಏನು ಎನ್ನುವ ಬಗ್ಗೆ ಮಾಹಿತಿ ಸಿಕ್ಕಿದೆ.

‘ಈ ಚಿತ್ರದಲ್ಲಿ ಗ್ರಾಫಿಕ್ಸ್ ಹೈಲೈಟ್ ಆಗಲಿದೆ. ನಾವು ಗ್ರಾಫಿಕ್ಸ್‌ನ ಕೆಲಸವನ್ನು ಪ್ರಾರಂಭಿಸಿ ಐದು ತಿಂಗಳಾಗಿದೆ. ಸಿನಿಮಾದ ಶೇ. 70 ಚಿತ್ರೀಕರಣ ಪೂರ್ಣಗೊಂಡಿದೆ. ಈ ಸಿನಿಮಾ ಫ್ಯಾಂಟಸಿ ಮತ್ತು ವೈಜ್ಞಾನಿಕ- ಅಂಶಗಳನ್ನು ಹೊಂದಿದೆ. ಇದು ವಿಷ್ಣುವಿನ ಆಧುನಿಕ ಅವತಾರ. ಆ್ಯಕ್ಷನ್ ಸೀಕ್ವೆನ್ಸ್‌ಗಳನ್ನು ಕಂಪೋಸ್ ಮಾಡಲು ನಾಲ್ಕೈದು ಅಂತರಾಷ್ಟ್ರೀಯ ಸ್ಟಂಟ್ ಕೊರಿಯೋಗ್ರಾಫರ್‌ಗಳನ್ನು ನೇಮಿಸಿಕೊಂಡಿದ್ದೇವೆ. ಚಿತ್ರದ ದೃಶ್ಯಗಳು ನಿಮ್ಮನ್ನು ದಿಗ್ಭ್ರಮೆಗೊಳಿಸುತ್ತದೆ’ ಎಂದಿದ್ದಾರೆ ಅಶ್ವಿನಿ ದತ್​.

ಇತ್ತೀಚೆಗೆ ಸಿನಿಮಾಗಳು ಎರಡು ಪಾರ್ಟ್​ನಲ್ಲಿ ರಿಲೀಸ್ ಮಾಡುವ ಟ್ರೆಂಡ್ ಜೋರಾಗಿದೆ. ‘ಪ್ರಾಜೆಕ್ಟ್​ ಕೆ’ ಸಿನಿಮಾ ಕೂಡ ಎರಡು ಪಾರ್ಟ್​ನಲ್ಲಿ ಬರುತ್ತಿದೆ. ಚಿತ್ರದ ಕಥೆ ಬಹಳ ದೊಡ್ಡದಾಗಿದೆ. ಹೀಗಾಗಿ ಅದನ್ನು ಎರಡು ಪಾರ್ಟ್​ಗಳಲ್ಲಿ ತರಲು ನಾಗ್ ಅಶ್ವಿನ್ ನಿರ್ಧರಿಸಿದ್ದಾರೆ.

ಸಲಾರ್-ಆದಿ ಪುರುಷ್ ಚಿತ್ರದ ಬಗ್ಗೆ ನಿರೀಕ್ಷೆ:

ಪ್ರಭಾಸ್​ ಅವರು ಪ್ರಶಾಂತ್​ ನೀಲ್​ ನಿರ್ದೇಶನದ ‘ಸಲಾರ್​’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ‘ಕೆಜಿಎಫ್’ ಯಶಸ್ಸಿನ ಬಳಿಕ ಪ್ರಶಾಂತ್​ ನೀಲ್​ ಕೈಗೆತ್ತಿಕೊಂಡ ಚಿತ್ರವಾದ್ದರಿಂದ ಹೈಪ್​ ಹೆಚ್ಚಾಗಿದೆ. ಈ ಸಿನಿಮಾದಲ್ಲಿ ಪ್ರಭಾಸ್​ಗೆ ಜೋಡಿಯಾಗಿ ಶ್ರುತಿ ಹಾಸನ್​ ನಟಿಸುತ್ತಿದ್ದಾರೆ.

‘ಸಲಾರ್​’ ಚಿತ್ರಕ್ಕಿಂತಲೂ ಮುನ್ನ ‘ಆದಿ ಪುರುಷ್​’ ಸಿನಿಮಾ ಬಿಡುಗಡೆ ಆಗಲಿದೆ. ರಾಮಾಯಣದ ಕಥೆಯನ್ನು ಆಧರಿಸಿ ತಯಾರಾಗುತ್ತಿರುವ ಈ ಸಿನಿಮಾದಲ್ಲಿ ಪ್ರಭಾಸ್​ ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. ಜೂನ್ 16ರಂದು ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:16 am, Tue, 28 February 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು