AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಾಜೆಕ್ಟ್​ ಕೆ’ ಕಥೆ ರಿವೀಲ್ ಮಾಡಿದ ನಿರ್ಮಾಪಕ; ವಿಷ್ಣುವಿನ ಆಧುನಿಕ ಅವತಾರದಲ್ಲಿ ಬರಲಿದ್ದಾರೆ ಪ್ರಭಾಸ್

Project K Movie: ‘ಪ್ರಾಜೆಕ್ಟ್​ ಕೆ’ ಚಿತ್ರದಲ್ಲಿ ಪ್ರಭಾಸ್ ಹಾಗೂ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ. ಅಮಿತಾಭ್​ ಬಚ್ಚನ್, ದಿಶಾ ಪಟಾಣಿ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

‘ಪ್ರಾಜೆಕ್ಟ್​ ಕೆ’ ಕಥೆ ರಿವೀಲ್ ಮಾಡಿದ ನಿರ್ಮಾಪಕ; ವಿಷ್ಣುವಿನ ಆಧುನಿಕ ಅವತಾರದಲ್ಲಿ ಬರಲಿದ್ದಾರೆ ಪ್ರಭಾಸ್
ಪ್ರಭಾಸ್
Follow us
ರಾಜೇಶ್ ದುಗ್ಗುಮನೆ
|

Updated on:Mar 01, 2023 | 12:57 PM

ಪ್ರಭಾಸ್ (Prabhas) ಹಾಗೂ ದೀಪಿಕಾ ಪಡುಕೋಣೆ ನಟನೆಯ ‘ಪ್ರಾಜೆಕ್ಟ್​ ಕೆ’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ನಾಗ್ ಅಶ್ವಿನ್ (Nag Ashwin) ನಿರ್ದೇಶನದ ಈ ಸಿನಿಮಾ 2024ರಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದಲ್ಲಿ ಸಾಕಷ್ಟು ವಿಎಫ್​ಎಕ್ಸ್​ ಬಳಕೆ ಆಗಿದೆ. ಇತ್ತೀಚೆಗೆ ಚಿತ್ರದ ಸಿನಿಮಾ ರಿಲೀಸ್ ದಿನಾಂಕ ರಿವೀಲ್ ಆಗಿತ್ತು. ಜನವರಿ 12ರಂದು ಈ ಚಿತ್ರ ತೆರೆಗೆ ಬರುತ್ತಿದೆ. ಈ ಸಿನಿಮಾದ ಕಥೆ ಬಗ್ಗೆ ಈಗ ನಿರ್ಮಾಪಕ ಅಶ್ವಿನಿ ದತ್ ಅವರು ಮಾಹಿತಿ ರಿವೀಲ್ ಮಾಡಿದ್ದಾರೆ. ‘ವೈಜಯಂತಿ ಮೂವೀಸ್​’ ಅಡಿಯಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. ‘ವಿಷ್ಣುವಿನ ಆಧುನಿಕ ಅವತಾರದಲ್ಲಿ ಚಿತ್ರದ ಕಥೆ ಸಾಗಲಿದೆ’ ಎಂದು ಅಶ್ವಿನಿ ಹೇಳಿದ್ದಾರೆ.

‘ಪ್ರಾಜೆಕ್ಟ್​ ಕೆ’ ಚಿತ್ರದಲ್ಲಿ ಪ್ರಭಾಸ್ ಹಾಗೂ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ. ಅಮಿತಾಭ್​ ಬಚ್ಚನ್, ದಿಶಾ ಪಟಾಣಿ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಕಥೆ ಏನು, ಸಿನಿಮಾದಲ್ಲಿ ಪ್ರಭಾಸ್ ಲುಕ್ ಹೇಗಿದೆ ಎಂಬಿತ್ಯಾದಿ ವಿಚಾರಗಳು ಗುಟ್ಟಾಗೇ ಇದ್ದವು. ಈಗ ‘ಪ್ರಾಜೆಕ್ಟ್​ ಕೆ’ ಚಿತ್ರದ ಕಥೆ ಏನು ಎನ್ನುವ ಬಗ್ಗೆ ಮಾಹಿತಿ ಸಿಕ್ಕಿದೆ.

‘ಈ ಚಿತ್ರದಲ್ಲಿ ಗ್ರಾಫಿಕ್ಸ್ ಹೈಲೈಟ್ ಆಗಲಿದೆ. ನಾವು ಗ್ರಾಫಿಕ್ಸ್‌ನ ಕೆಲಸವನ್ನು ಪ್ರಾರಂಭಿಸಿ ಐದು ತಿಂಗಳಾಗಿದೆ. ಸಿನಿಮಾದ ಶೇ. 70 ಚಿತ್ರೀಕರಣ ಪೂರ್ಣಗೊಂಡಿದೆ. ಈ ಸಿನಿಮಾ ಫ್ಯಾಂಟಸಿ ಮತ್ತು ವೈಜ್ಞಾನಿಕ- ಅಂಶಗಳನ್ನು ಹೊಂದಿದೆ. ಇದು ವಿಷ್ಣುವಿನ ಆಧುನಿಕ ಅವತಾರ. ಆ್ಯಕ್ಷನ್ ಸೀಕ್ವೆನ್ಸ್‌ಗಳನ್ನು ಕಂಪೋಸ್ ಮಾಡಲು ನಾಲ್ಕೈದು ಅಂತರಾಷ್ಟ್ರೀಯ ಸ್ಟಂಟ್ ಕೊರಿಯೋಗ್ರಾಫರ್‌ಗಳನ್ನು ನೇಮಿಸಿಕೊಂಡಿದ್ದೇವೆ. ಚಿತ್ರದ ದೃಶ್ಯಗಳು ನಿಮ್ಮನ್ನು ದಿಗ್ಭ್ರಮೆಗೊಳಿಸುತ್ತದೆ’ ಎಂದಿದ್ದಾರೆ ಅಶ್ವಿನಿ ದತ್​.

ಇತ್ತೀಚೆಗೆ ಸಿನಿಮಾಗಳು ಎರಡು ಪಾರ್ಟ್​ನಲ್ಲಿ ರಿಲೀಸ್ ಮಾಡುವ ಟ್ರೆಂಡ್ ಜೋರಾಗಿದೆ. ‘ಪ್ರಾಜೆಕ್ಟ್​ ಕೆ’ ಸಿನಿಮಾ ಕೂಡ ಎರಡು ಪಾರ್ಟ್​ನಲ್ಲಿ ಬರುತ್ತಿದೆ. ಚಿತ್ರದ ಕಥೆ ಬಹಳ ದೊಡ್ಡದಾಗಿದೆ. ಹೀಗಾಗಿ ಅದನ್ನು ಎರಡು ಪಾರ್ಟ್​ಗಳಲ್ಲಿ ತರಲು ನಾಗ್ ಅಶ್ವಿನ್ ನಿರ್ಧರಿಸಿದ್ದಾರೆ.

ಸಲಾರ್-ಆದಿ ಪುರುಷ್ ಚಿತ್ರದ ಬಗ್ಗೆ ನಿರೀಕ್ಷೆ:

ಪ್ರಭಾಸ್​ ಅವರು ಪ್ರಶಾಂತ್​ ನೀಲ್​ ನಿರ್ದೇಶನದ ‘ಸಲಾರ್​’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ‘ಕೆಜಿಎಫ್’ ಯಶಸ್ಸಿನ ಬಳಿಕ ಪ್ರಶಾಂತ್​ ನೀಲ್​ ಕೈಗೆತ್ತಿಕೊಂಡ ಚಿತ್ರವಾದ್ದರಿಂದ ಹೈಪ್​ ಹೆಚ್ಚಾಗಿದೆ. ಈ ಸಿನಿಮಾದಲ್ಲಿ ಪ್ರಭಾಸ್​ಗೆ ಜೋಡಿಯಾಗಿ ಶ್ರುತಿ ಹಾಸನ್​ ನಟಿಸುತ್ತಿದ್ದಾರೆ.

‘ಸಲಾರ್​’ ಚಿತ್ರಕ್ಕಿಂತಲೂ ಮುನ್ನ ‘ಆದಿ ಪುರುಷ್​’ ಸಿನಿಮಾ ಬಿಡುಗಡೆ ಆಗಲಿದೆ. ರಾಮಾಯಣದ ಕಥೆಯನ್ನು ಆಧರಿಸಿ ತಯಾರಾಗುತ್ತಿರುವ ಈ ಸಿನಿಮಾದಲ್ಲಿ ಪ್ರಭಾಸ್​ ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. ಜೂನ್ 16ರಂದು ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:16 am, Tue, 28 February 23

ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ