AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್​ಟಿಆರ್ ಹೆಸರಲ್ಲಿ 100 ರೂ. ನಾಣ್ಯ ಬಿಡುಗಡೆ; ವಿಶೇಷ ಕ್ಷಣ ಮಿಸ್ ಮಾಡಿಕೊಂಡ ಮೊಮ್ಮೊಗ ಜೂ.ಎನ್​ಟಿಆರ್

ತೆಲುಗಿನ ಖ್ಯಾತ ನಟ, ಮಾಜಿ ಸಿಎಂ ನಂದಮೂರಿ ತಾರಕ ರಾಮ ರಾವ್​​ ಸ್ಮರಣಾರ್ಥವಾಗಿ 100 ರೂಪಾಯಿ ಬೆಳ್ಳಿ ನಾಣ್ಯವನ್ನು ಅವರ ಹುಟ್ಟು ಹಬ್ಬದ ಪ್ರಯುಕ್ತ ಬಿಡುಗಡೆಗೊಳಿಸಲಾಗಿದೆ. ಆದರೆ ಜೂ. ಎನ್​ಟಿಆರ್ ಈ ಕಾರ್ಯಕ್ರಮಕ್ಕೆ ಆಗಮಿಸಿರಲಿಲ್ಲ. ಇದಕ್ಕೆ ಕಾರಣ ಏನು ಎಂಬುದು ಈಗ ರಿವೀಲ್ ಆಗಿದೆ.

ಎನ್​ಟಿಆರ್ ಹೆಸರಲ್ಲಿ 100 ರೂ. ನಾಣ್ಯ ಬಿಡುಗಡೆ; ವಿಶೇಷ ಕ್ಷಣ ಮಿಸ್ ಮಾಡಿಕೊಂಡ ಮೊಮ್ಮೊಗ ಜೂ.ಎನ್​ಟಿಆರ್
100 ರೂಪಾಯಿ ನಾಣ್ಯ ಬಿಡುಗಡೆ
TV9 Web
| Edited By: |

Updated on: Aug 29, 2023 | 11:25 AM

Share

ತೆಲುಗು ಖ್ಯಾತ ನಟ, ಆಂಧ್ರ ಪ್ರದೇಶದ ಮಾಜಿ ಮುಖ್ಯ ಮಂತ್ರಿ ನಂದಮೂರಿ ತಾರಕ ರಾಮರಾವ್ (Nandamuri Taraka Rama Rao) ಅವರು ನಮ್ಮೊಂದಿಗಿದ್ದಿದ್ದರೆ ಆಗಸ್ಟ್ 28ರಂದು 100ನೇ ವರ್ಷದ ಜನ್ಮದಿನ ಆಚರಿಸಿಕೊಳ್ಳುತ್ತಿದ್ದರು. ಅವರ ಸ್ಮರಣಾರ್ಥವಾಗಿ 100 ರೂಪಾಯಿ ಬೆಳ್ಳಿ ನಾಣ್ಯವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ನಂದಮೂರಿ ಕುಟುಂಬದ ಅನೇಕರು ಹಾಜರಿ ಹಾಕಿದ್ದರು. ಆದರೆ ಎನ್​ಟಿಆರ್ ಮೊಮ್ಮೊಗ ಜೂನಿಯರ್ ಎನ್​ಟಿಆರ್ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿರಲಿಲ್ಲ. ಇದಕ್ಕೆ ಕಾರಣ ಏನು ಎಂಬುದು ಈಗ ರಿವೀಲ್ ಆಗಿದೆ.

ಆಗಸ್ಟ್ 28ರಂದು ರಾಷ್ಟ್ರಪತಿ ಭವನದಲ್ಲಿ 100 ರೂಪಾಯಿ ನಾಣ್ಯ ಬಿಡುಗಡೆ ಮಾಡಲಾಗಿದೆ. ಈ ನಾಣ್ಯವು ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. 44 ಮಿಲಿಮೀಟರ್ ಸುತ್ತಳತೆಯನ್ನು ಹೊಂದಿದ್ದು, ಶೇ.50 ಬೆಳ್ಳಿ, ಶೇ.40 ತಾಮ್ರ, ಶೇ.5ರಷ್ಟು ನಿಕ್ಕಲ್, ಶೇ.5 ಸತುವಿನಿಂದ ಮಾಡಲಾಗಿದೆ. ಈ ನಾಣ್ಯದಲ್ಲಿ ಅಶೋಕ ಚಕ್ರ, ಎನ್​​ಟಿಆರ್ ಚಿತ್ರ ಇದೆ. ‘ನಂದಮೂರಿ ತಾರಕ ರಾಮ ರಾವ್ ಶತ ಜಯಂತಿ’ ಎಂದು ಬರೆಯಲಾಗಿದೆ. 300ಕ್ಕೂ ಹೆಚ್ಚಿನ ಸಿನಿಮಾದಲ್ಲಿ ಎನ್​ಟಿಆರ್ ನಟಿಸಿದ್ದರು. ರಾಜಕೀಯದಲ್ಲೂ ಛಾಪು ಮೂಡಿಸಿದ್ದರು. ಈ ಕಾರಣದಿಂದ ಅವರ ಹೆಸರಲ್ಲಿ ನಾಣ್ಯ ರಿಲೀಸ್ ಮಾಡಲಾಯಿತು. ಈ ವಿಶೇಷ ಕ್ಷಣ ಕಣ್ತುಂಬಿಕೊಳ್ಳಲು ಜೂ.ಎನ್​ಟಿಆರ್​ಗೆ ಸಾಧ್ಯವಾಗಲಿಲ್ಲ.

ಎನ್​ಟಿಆರ್​ ಹೆಸರಲ್ಲಿ ನಾಣ್ಯ ಬಿಡುಗಡೆ ಮಾಡುವುದಾಗಿ ಆರ್​ಬಿಐ ಫೆಬ್ರವರಿಯಲ್ಲಿ ತಿಳಿಸಿತ್ತು. ಜೊತೆಗೆ ಜೂನಿಯರ್​ ಎನ್​ಟಿಆರ್ ಅವರಿಗೂ ಆಹ್ವಾನ ನೀಡಿತ್ತು. ಆದರೆ, ಅವರು ಆಗಮಿಸಲಿಲ್ಲ. ಮೂಲಗಳ ಪ್ರಕಾರ ಸಿನಿಮಾ ಶೂಟಿಂಗ್​​ಗೆ ಮೊದಲೇ ಡೇಟ್ ನೀಡಿದ್ದರು ಎನ್ನಲಾಗಿದೆ. ಈ ಕಾರಣಕ್ಕೆ ಅವರಿಗೆ ಕಾರ್ಯಕ್ರಮಕ್ಕೆ ಆಗಮಿಸಲಿಲ್ಲ ಎನ್ನಲಾಗಿದೆ.

ನಾಣ್ಯ ಬಿಡುಗಡೆ ಸಂದರ್ಭದ ಫೋಟೋನ ರಾಷ್ಟ್ರಪತಿ ದ್ರೌಪದಿ ಮುರ್ಮು ಹಂಚಿಕೊಂಡಿದ್ದಾರೆ. ‘ಮಾಜಿ ಮುಖ್ಯಮಂತ್ರಿ ನಂದಮೂರಿ ತಾರಕ ರಾಮ ರಾವ್ ಅವರ ಸ್ಮರಣಾರ್ಥವಾಗಿ ನಾಣ್ಯವನ್ನು ಬಿಡುಗಡೆ ಮಾಡಲಾಗಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಜೂನಿಯರ್ ಎನ್​ಟಿಆರ್ ಧರಿಸಿದ ಈ ವಾಚ್​ನ ಬೆಲೆ ಎಷ್ಟು ಕೋಟಿ ರೂಪಾಯಿ ಗೊತ್ತಾ?

ಜೂನಿಯರ್ ಎನ್​ಟಿಆರ್ ಅವರು ‘ದೇವರ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ಕೊರಟಾಲ ಶಿವ ನಿರ್ದೇಶನ ಮಾಡುತ್ತಿದ್ದಾರೆ. ಬಾಲಿವುಡ್​ನ ಜಾನ್ವಿ ಕಪೂರ್, ಸೈಫ್ ಅಲಿ ಖಾನ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಕಾರಣಾಂತರಗಳಿಂದ ವಿಳಂಬ ಆಯಿತು. ಈಗ ಸಿನಿಮಾ ಪೂರ್ಣಗೊಳಿಸಲೇಬೇಕಾದ ಅನಿವಾರ್ಯತೆ ಇರುವುದರಿಂದ ಜೂನಿಯರ್ ಎನ್​ಟಿರ್ ಶೂಟಿಂಗ್​ನಲ್ಲಿ ಭಾಗಿ ಆಗುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು
Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..!
Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..!