AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು-ರಾಜಮೌಳಿ ಸಿನಿಮಾ ತಂಡಕ್ಕೆ ಮಲಯಾಳಂ ನಟ ಪೃಥ್ವಿರಾಜ್ ಎಂಟ್ರಿ

ಪ್ಯಾನ್ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಹೊಂದಿರುವ ನಟ ಪೃಥ್ವಿರಾಜ್ ಸುಕುಮಾರನ್ ಅವರು ‘SSMB 29’ ಚಿತ್ರತಂಡಕ್ಕೆ ಸೇರ್ಪಡೆ ಆಗಿದ್ದಾರೆ. ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬೀಳದಿದ್ದರೂ ಕೂಡ ಅಭಿಮಾನಿಗಳಿಗೆ ವಿಷಯ ಗೊತ್ತಾಗಿದೆ. ಮಹೇಶ್ ಬಾಬು ನಟನೆಯ ಈ ಸಿನಿಮಾಗೆ ಪ್ರಿಯಾಂಕಾ ಚೋಪ್ರಾ ನಾಯಕಿ ಆಗಿದ್ದಾರೆ.

ಮಹೇಶ್ ಬಾಬು-ರಾಜಮೌಳಿ ಸಿನಿಮಾ ತಂಡಕ್ಕೆ ಮಲಯಾಳಂ ನಟ ಪೃಥ್ವಿರಾಜ್ ಎಂಟ್ರಿ
Prithviraj Sukumaran, Rajamouli, Mahesh Babu
ಮದನ್​ ಕುಮಾರ್​
|

Updated on:Mar 06, 2025 | 3:44 PM

Share

ಖ್ಯಾತ ನಿರ್ದೇಶಕ ರಾಜಮೌಳಿ (Rajamouli) ಅವರು ಮಹೇಶ್ ಬಾಬು (Mahesh Babu) ಜೊತೆ ಕೈ ಜೋಡಿಸಿದ್ದು, ಈಗಾಗಲೇ ಈ ಸಿನಿಮಾದ ಬಗ್ಗೆ ಹಲವು ಸುದ್ದಿಗಳು ಕೇಳಿಬರುತ್ತಿವೆ. ಸದ್ಯಕ್ಕೆ ಈ ಸಿನಿಮಾದ ಶೀರ್ಷಿಕೆ ಬಹಿರಂಗ ಆಗಿಲ್ಲ. ತಾತ್ಕಾಲಿಕವಾಗಿ ‘SSMB 29’ ಎಂದು ಕರೆಯಲಾಗುತ್ತಿದೆ. ಈ ಚಿತ್ರದಲ್ಲಿ ನಾಯಕಿಯಾಗಿ ಪ್ರಿಯಾಂಕಾ ಚೋಪ್ರಾ ನಟಿಸುತ್ತಿದ್ದಾರೆ. ಹಲವು ತಿಂಗಳುಗಳ ತಯಾರಿ ಬಳಿಕ ಈಗ ಒಡಿಶಾದಲ್ಲಿ ಶೂಟಿಂಗ್ ಶುರು ಮಾಡಲಾಗಿದೆ. ಇನ್ನೊಂದು ಹೊಸ ವಿಷಯ ಏನೆಂದರೆ, ಈ ಸಿನಿಮಾದ ಪಾತ್ರವರ್ಗಕ್ಕೆ ಮಾಲಿವುಡ್ ನಟ ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಕೂಡ ಸೇರ್ಪಡೆ ಆಗಿದ್ದಾರೆ.

ಪೃಥ್ವಿರಾಜ್ ಸುಕುಮಾರನ್ ಅವರು ‘SSMB 29’ ಸಿನಿಮಾದಲ್ಲಿ ನಟಿಸುತ್ತಾರೆ ಎಂಬ ಬಗ್ಗೆ ಅನೇಕ ದಿನಗಳಿಂದ ಗಾಸಿಪ್ ಹರಿದಾಡುತ್ತಿತ್ತು. ಸೋಶಿಯಲ್​ ಮೀಡಿಯಾದಲ್ಲಿ ಅವರ ತಾಯಿ ಮಲ್ಲಿಕಾ ಮಾಡಿದ ಕಮೆಂಟ್​ನಿಂದ ಅಭಿಮಾನಿಗಳಿಗೆ ವಿಷಯ ಖಚಿತ ಆಗಿತ್ತು. ‘ಮುಂದಿನದ್ದು ರಾಜಮೌಳಿ ಸಿನಿಮಾ. ಇಂದು ರಾತ್ರಿ ಹೊರಡುತ್ತಿದ್ದಾರೆ’ ಎಂದು ಮಲ್ಲಿಕಾ ಕಮೆಂಟ್ ಮಾಡಿ, ಬಳಿಕ ಅದನ್ನು ಡಿಲೀಟ್ ಮಾಡಿದ್ದರು!

ಈಗ ಮಹೇಶ್ ಬಾಬು ಮತ್ತು ಪೃಥ್ವಿರಾಜ್ ಸುಕುಮಾರನ್ ಅವರು ಒಂದೇ ವಿಮಾನದಲ್ಲಿ ಪ್ರಯಾಣ ಮಾಡಿದ್ದಾರೆ. ಇಬ್ಬರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಅಲ್ಲಿಗೆ, ಅಭಿಮಾನಿಗಳಿಗೆ ಇದ್ದ ಎಲ್ಲ ಅನುಮಾನಗಳು ಬಗೆಹರಿದಿವೆ. ಹಾಗಿದ್ದರೂ ಕೂಡ ಚಿತ್ರತಂಡದವರು ಈ ಬಗ್ಗೆ ಅಧಿಕೃತವಾಗಿ ಏನನ್ನೂ ಬಹಿರಂಗಪಡಿಸಿಲ್ಲ.

ಇದನ್ನೂ ಓದಿ
Image
ಆರೋಪಗಳ ಬಳಿಕ ವಿಡಿಯೋ ಹಂಚಿಕೊಂಡ ಎಸ್​ಎಸ್ ರಾಜಮೌಳಿ, ಹೇಳಿದ್ದೇನು?
Image
ರಾಜಮೌಳಿ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಂಡ ಹಳೆ ಗೆಳೆಯ, ಕಾರಣ?
Image
ರೆಡಿಯೋ ಜಾಕಿ ಹಿಂದೆ ಬಿದ್ದ ರಾಜಮೌಳಿ, ಪ್ರಪೋಸ್ ಮಾಡೇಬಿಟ್ಟ ಚೆಲುವೆ
Image
ಮಹೇಶ್ ಬಾಬು-ರಾಜಮೌಳಿ ಸಿನಿಮಾಕ್ಕೆ ಹೆಸರು ಫಿಕ್ಸ್

ಇದನ್ನೂ ಓದಿ: SS Rajamouli: ಈ ಎರಡು ಹಾಡುಗಳನ್ನು ರಾಜಮೌಳಿ ಮತ್ತೆ ಮತ್ತೆ ನೋಡ್ತಾರಂತೆ

‘SSMB 29’ ಸಿನಿಮಾಗೆ ಪ್ರಿಯಾಂಕಾ ಚೋಪ್ರಾ ನಾಯಕಿ ಎಂಬುದನ್ನು ಕೂಡ ಚಿತ್ರತಂಡದವರು ಹೇಳಿಲ್ಲ. ಆದರೆ ಅವರ ತಾಯಿ ಮಧು ಚೋಪ್ರಾ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಕುರಿತು ಬಾಯಿ ಬಿಟ್ಟಿದ್ದಾರೆ. ‘ಈಗಾಗಲೇ ಪ್ರಿಯಾಂಕಾ ಆ ಸಿನಿಮಾದ ಶೂಟಿಂಗ್ ಮಾಡುತ್ತಿದ್ದಾಳೆ’ ಎಂದು ಮಧು ಚೋಪ್ರಾ ಹೇಳಿರುವುದರಿಂದ ಅಭಿಮಾನಿಗಳಿಗೆ ಖಚಿತವಾಗಿದೆ.

ಇದನ್ನೂ ಓದಿ: ‘ರಾಜಮೌಳಿ ಸಿನಿಮಾಗಳಲ್ಲೂ ಲಾಜಿಕ್ ಇರಲ್ಲ’: ಕರಣ್ ಜೋಹರ್ ವಾದ

ರಾಜಮೌಳಿ ಸಿನಿಮಾದಲ್ಲಿ ಪ್ಯಾನ್ ಇಂಡಿಯಾ ಕಲಾವಿದರು ಕಾಣಿಸಿಕೊಳ್ಳುತ್ತಿದ್ದಾರೆ. ಪ್ರಿಯಾಂಕಾ ಚೋಪ್ರಾ ಅವರು ಜಾಗತಿಕ ಮಟ್ಟದಲ್ಲಿ ಖ್ಯಾತಿ ಹೊಂದಿದ್ದಾರೆ. ಪೃಥ್ವಿರಾಜ್ ಸುಕುಮಾರನ್ ಅವರಿಗೆ ದೇಶಾದ್ಯಂತ ಜನಪ್ರಿಯತೆ ಇದೆ. ಮಹೇಶ್ ಬಾಬು ಜೊತೆ ಇನ್ನೂ ಯಾರೆಲ್ಲ ನಟಿಸಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:57 pm, Thu, 6 March 25

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು