Aadujeevitham: ಮೂರು ದಿನಕ್ಕೆ 50 ಕೋಟಿ ರೂಪಾಯಿ ಗಳಿಸಿದ ‘ಆಡುಜೀವಿತಂ’ ಸಿನಿಮಾ

ಚಿತ್ರತಂಡ ನೀಡಿದ ಮಾಹಿತಿ ಪ್ರಕಾರ, ಕೇವಲ ಮೂರು ದಿನಕ್ಕೆ ‘ಆಡುಜೀವಿತಂ’ ಸಿನಿಮಾ ವಿಶ್ವಾದ್ಯಂತ 50 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದೆ. ಮುಂದಿನ ದಿನಗಳಲ್ಲಿ ಈ ಸಿನಿಮಾ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ಕಾದುನೋಡಬೇಕು. ನಾಲ್ಕನೇ ದಿನವಾದ ಭಾನುವಾರ (ಮಾರ್ಚ್​ 31) ಕಲೆಕ್ಷನ್​ ಹೆಚ್ಚುವ ನಿರೀಕ್ಷೆ ಇದೆ.

Aadujeevitham: ಮೂರು ದಿನಕ್ಕೆ 50 ಕೋಟಿ ರೂಪಾಯಿ ಗಳಿಸಿದ ‘ಆಡುಜೀವಿತಂ’ ಸಿನಿಮಾ
ಪೃಥ್ವಿರಾಜ್​ ಸುಕುಮಾರನ್​
Follow us
|

Updated on: Mar 31, 2024 | 3:24 PM

ಪ್ರತಿಭಾನ್ವಿತ ನಟ ಪೃಥ್ವಿರಾಜ್​ ಸುಕುಮಾರನ್​ (Prithviraj Sukumaran) ಅವರು ‘ಆಡುಜೀವಿತಂ’ ಸಿನಿಮಾದ ಮೂಲಕ ಗೆದ್ದು ಬೀಗಿದ್ದಾರೆ. ಈ ಸಿನಿಮಾಗಾಗಿ ಅವರು ಅನೇಕ ವರ್ಷಗಳಿಂದ ಕಷ್ಟಪಟ್ಟಿದ್ದಾರೆ. ತುಂಬ ಡಿಫರೆಂಟ್​ ಆದಂತಹ ಗೆಟಪ್​ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಬ್ಲೆಸ್ಸಿ ನಿರ್ದೇಶನ ಮಾಡಿದ ‘ಆಡುಜೀವಿತಂ’ (Aadujeevitham) ಸಿನಿಮಾಗೆ ಜನರು ಫಿದಾ ಆಗಿದ್ದಾರೆ. ನೋಡನೋಡುತ್ತಿದ್ದಂತೆಯೇ ‘ಆಡುಜೀವಿತಂ’ ಬಾಕ್ಸ್​ ಆಫೀಸ್​ ಕಲೆಕ್ಷನ್​ (Aadujeevitham Box Office Collection) 50 ಕೋಟಿ ರೂಪಾಯಿ ಮುಟ್ಟಿದೆ. ವಿಶ್ವಾದ್ಯಂತ ತೆರೆಕಂಡಿರುವ ಈ ಸಿನಿಮಾ ಮೂರು ದಿನಕ್ಕೆ ಹಾಫ್​ ಸೆಂಚುರಿ ಬಾರಿಸಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ರಿಯಲ್​ ಲೈಫ್​ ಘಟನೆಗಳನ್ನು ಆಧರಿಸಿ ‘ಆಡುಜೀವಿತಂ’ ಸಿನಿಮಾ ಮೂಡಿಬಂದಿದೆ. ಸಿನಿಮಾದ ಗೆಲುವಿನ ಬಗ್ಗೆ ಪೃಥ್ವಿರಾಜ್​ ಸುಕುಮಾರನ್​ ಅವರು ಟ್ವೀಟ್​ ಮಾಡಿದ್ದಾರೆ. ‘ವಿಶ್ವಾದ್ಯಂತ ಒಟ್ಟು ಕಲೆಕ್ಷನ್​ 50 ಕೋಟಿ ರೂಪಾಯಿಗೂ ಅಧಿಕ ಆಗಿದೆ. ನಿಮ್ಮೆಲ್ಲರ ಪ್ರೀತಿ ಮತ್ತು ಪ್ರೋತ್ಸಾಹಕ್ಕೆ ಧನ್ಯವಾದಗಳು’ ಎಂದು ಪೃಥ್ವಿರಾಜ್​ ಅವರು ಪೋಸ್ಟ್​ ಮಾಡಿದ್ದಾರೆ. ಈ ಸಿನಿಮಾಗೆ ಎಲ್ಲ ಕಡೆಗಳಿಂದ ಉತ್ತಮ ವಿಮರ್ಶೆ ಸಿಕ್ಕಿದೆ.

ಪ್ಯಾನ್​ ಇಂಡಿಯಾ ಲೆವೆಲ್​ನಲ್ಲಿ ‘ಆಡುಜೀವಿತಂ’ ಸಿನಿಮಾ ಬಿಡುಗಡೆ ಆಗಿದೆ. ಮಲಯಾಳಂ, ಕನ್ನಡ, ಹಿಂದಿ, ತೆಲುಗು ಹಾಗೂ ತಮಿಳು ಭಾಷೆಯಲ್ಲಿ ದೇಶಾದ್ಯಂತ ಈ ಸಿನಿಮಾ ತೆರೆಕಂಡಿದೆ. ಚಿತ್ರತಂಡದ ಪ್ರಕಾರ ಮೊದಲ ದಿನವೇ ಈ ಸಿನಿಮಾ 16 ಕೋಟಿ ರೂಪಾಯಿ ಬಾಚಿಕೊಂಡಿದೆ. ಭಾರತದಲ್ಲಿ ಮೂರು ದಿನಕ್ಕೆ 21.6 ಕೋಟಿ ರೂಪಾಯಿ ಗಳಿಕೆ ಆಗಿದೆ ಎನ್ನಲಾಗಿದೆ.

ಇದನ್ನೂ ಓದಿ:  ‘ಆಡುಜೀವಿತಂ’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ; ಪೃಥ್ವಿರಾಜ್​ ನಟನೆಗೆ ಜನರು ಫಿದಾ

90ರ ದಶಕದಲ್ಲಿ ನಜೀಬ್​ ಎಂಬ ಯುವಕ ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ಗಲ್ಫ್​ ರಾಷ್ಟ್ರಕ್ಕೆ ಹೋಗಿ, ನಂತರ ಅಲ್ಲಿ ಜೀತದಾಳಾಗಿ ಶೋಷಣೆಗೆ ಒಳಗಾಗುವ ರಿಯಲ್​ ಕಥೆಯನ್ನು ಆಧರಿಸಿ ‘ಆಡುಜೀವಿತಂ’ ಸಿನಿಮಾ ಮೂಡಿಬಂದಿದೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಬ್ಲೆಸಿ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಈ ಸಿನಿಮಾಗಾಗಿ ಅವರು ಹಲವು ವರ್ಷಗಳನ್ನು ಮೀಸಲಿಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಈ ಸಿನಿಮಾ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ಕಾದುನೋಡಬೇಕು. ನಾಲ್ಕನೇ ದಿನವಾದ ಭಾನುವಾರ (ಮಾರ್ಚ್​ 31) ಕಲೆಕ್ಷನ್​ ಹೆಚ್ಚುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಸ್ತೆಯಲ್ಲೇ ಯುವಕನಿಗೆ ಹೊಡೆದು ಕೊಲೆ; ಮಗನ ಮೇಲೆ ಮಲಗಿ ಬೇಡಿಕೊಂಡ ತಾಯಿ
ರಸ್ತೆಯಲ್ಲೇ ಯುವಕನಿಗೆ ಹೊಡೆದು ಕೊಲೆ; ಮಗನ ಮೇಲೆ ಮಲಗಿ ಬೇಡಿಕೊಂಡ ತಾಯಿ
ದರ್ಶನ್ ಬೇಲ್ ಅರ್ಜಿ ತಿರಸ್ಕೃತ, ಕಾಯುತ್ತಿದ್ದ ಫ್ಯಾನ್ಸ್​ಗೆ ಭಾರೀ ನಿರಾಶೆ
ದರ್ಶನ್ ಬೇಲ್ ಅರ್ಜಿ ತಿರಸ್ಕೃತ, ಕಾಯುತ್ತಿದ್ದ ಫ್ಯಾನ್ಸ್​ಗೆ ಭಾರೀ ನಿರಾಶೆ
ರೋಹಿತ್​ ಪಡೆಗೆ ಗಂಭೀರ ಎಚ್ಚರಿಕೆ ನೀಡಿದ ಕೋಚ್ ಗೌತಮ್
ರೋಹಿತ್​ ಪಡೆಗೆ ಗಂಭೀರ ಎಚ್ಚರಿಕೆ ನೀಡಿದ ಕೋಚ್ ಗೌತಮ್
ಮೌಖಿಕ ಆದೇಶಗಳಿಗೆ ಕಿಮ್ಮತ್ತಿರಲ್ಲ ಅಂತ ಜಮೀರ್​​​ಗೆ ಗೊತ್ತಿಲ್ಲ: ಯತ್ನಾಳ್
ಮೌಖಿಕ ಆದೇಶಗಳಿಗೆ ಕಿಮ್ಮತ್ತಿರಲ್ಲ ಅಂತ ಜಮೀರ್​​​ಗೆ ಗೊತ್ತಿಲ್ಲ: ಯತ್ನಾಳ್
ಆನೆಗಳು ಭಾವುಕ ಜೀವಿಗಳು ಅಂತ ಅರಣ್ಯಾಧಿಕಾರಿ ಹೇಳಿದ್ದು ಶತ ಪ್ರತಿಶತ ಸತ್ಯ
ಆನೆಗಳು ಭಾವುಕ ಜೀವಿಗಳು ಅಂತ ಅರಣ್ಯಾಧಿಕಾರಿ ಹೇಳಿದ್ದು ಶತ ಪ್ರತಿಶತ ಸತ್ಯ
ಪ್ರಾಧ್ಯಾಪಕಿ ಆತ್ಮಹತ್ಯೆಗೆ ಯತ್ನ: 3 ತಿಂಗಳಿನಿಂದ ಕಿರುಕುಳ ಆರೋಪ
ಪ್ರಾಧ್ಯಾಪಕಿ ಆತ್ಮಹತ್ಯೆಗೆ ಯತ್ನ: 3 ತಿಂಗಳಿನಿಂದ ಕಿರುಕುಳ ಆರೋಪ
ಅ.17ರ ವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ಯೆಲ್ಲೋ- ಆರೆಂಜ್ ಅಲರ್ಟ್​!
ಅ.17ರ ವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ಯೆಲ್ಲೋ- ಆರೆಂಜ್ ಅಲರ್ಟ್​!
ಕೇಸ್ ವಾಪಸ್ಸು ತಗೊಳ್ಳಿ ಅಂತ ಭಿಕ್ಷೆ ಬೇಡುವ ಸ್ಥಿತಿ ಬಂದಿಲ್ಲ: ಸಿಟಿ ರವಿ
ಕೇಸ್ ವಾಪಸ್ಸು ತಗೊಳ್ಳಿ ಅಂತ ಭಿಕ್ಷೆ ಬೇಡುವ ಸ್ಥಿತಿ ಬಂದಿಲ್ಲ: ಸಿಟಿ ರವಿ
ಮುಡಾ ಕೇಸ್: ಲೋಕಾಯುಕ್ತ ಮೇಲೆ ಪ್ರಭಾವ, ಕಾಂಗ್ರೆಸ್​ ವಕ್ತಾರನ ಮೇಲೆ ಆರೋಪ
ಮುಡಾ ಕೇಸ್: ಲೋಕಾಯುಕ್ತ ಮೇಲೆ ಪ್ರಭಾವ, ಕಾಂಗ್ರೆಸ್​ ವಕ್ತಾರನ ಮೇಲೆ ಆರೋಪ
ನಾಗರ ಹಾವಿನ ಮೇಲೆ ಧಾರಾಳ ಮಮಕಾರ ತೋರಿದ ಹಸು
ನಾಗರ ಹಾವಿನ ಮೇಲೆ ಧಾರಾಳ ಮಮಕಾರ ತೋರಿದ ಹಸು